Andolana originals

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸ್ಥಾಪಿಸಲಾಗುತ್ತಿದ್ದು, ಡಿ.೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಶಾಖೆ ಉದ್ಘಾಟನೆ, ರಾಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅವಧೂತ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ಹಾಗೂ ಕಿರಿಯಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ಜರುಗಲಿವೆ. ಅಯೋಧ್ಯೆಯ ನಯಾಘಾಟ್, ಅಯೋಧ್ಯೆ ಬೈಪಾಸ್ ಬಳಿ ಇರುವ ಹರ್ಷನ್ ನಗರದ ‘ಶ್ರೀರಾಮ ಮಂತ್ರಾರ್ಥ ಮಂಟಪ’ದಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ಡಿ.೨೫ರಂದು ಸಂಜೆ ೫ ಗಂಟೆಗೆ ಸ್ವಾಗತ ಸಭೆ ನಡೆಯಲಿದೆ. ೫.೩೦ಕ್ಕೆ ಶ್ರೀರಾಮ ತಾರಕ ಯಾಗ ಪೂರ್ಣಾ ಹುತಿ ಹಾಗೂ ನೂತನ ಆಶ್ರಮದ] ಉದ್ಘಾಟನೆ ನೆರವೇರಲಿದೆ. ೭ಕ್ಕೆ ಶ್ರೀರಾಮ ಮತ್ತು ಶ್ರೀ ಹನುಮಾನ್ ಆರತಿ ಜರುಗಲಿದೆ. ಡಿ.೨೬ರಂದು ಬೆಳಿಗ್ಗೆ ೯ಕ್ಕೆ ಶ್ರೀ ಸೀತಾ ರಾಮ ಕಲ್ಯಾಣೋತ್ಸವ, ೧೦ಕ್ಕೆ ಶ್ರೀ ಚಕ್ರ ಪೂಜೆ ಹಾಗೂ ಮಧ್ಯಾಹ್ನ ೧.೩೦ಕ್ಕೆ ನೂತನ ಆಶ್ರಮದಲ್ಲಿ ಬ್ರಹ್ಮ ಭೋಜನ ಏರ್ಪಡಿಸಲಾಗಿದೆ.

ಸಂಜೆ ೬ ಗಂಟೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಂದ ‘ಬಾಲ ರಾಮ ರಾಗ ಸಾಗರ’(ಧ್ಯಾನಕ್ಕಾಗಿ ಸಂಗೀತ) ಕಚೇರಿ ನಡೆಯಲಿದೆ. ಡಿ.೨೭ರಂದು ಬೆಳಿಗ್ಗೆ ೯ಕ್ಕೆ ಶ್ರೀ ಚಕ್ರಪೂಜೆ, ೧೦ಕ್ಕೆ] ಶ್ರೀರಾಮ ಪಾದುಕಾ ಪಟ್ಟಾಭಿಷೇಕ ಹಾಗೂ ೧೧ಕ್ಕೆ ಪವಮಾನ ಯಾಗ ಮತ್ತು ಶ್ರೀ ಸೂಕ್ತ ಯಾಗ ಪೂರ್ಣಾಹುತಿ ನೆರವೇರಲಿದೆ. ಸಂಜೆ ೬.೩೦ಕ್ಕೆ ಶ್ರೀ ರಾಮ ಲಲ್ಲಾ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಡಿ.೨೮ರಂದು ಬೆಳಿಗ್ಗೆ ೧೦ಕ್ಕೆ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ, ೧೦.೩೦ಕ್ಕೆ ಪವಮಾನ ಯಾಗ ಮತ್ತು ಮಹಾವಿಷ್ಣು ಯಾಗಗಳು ನಡೆಯಲಿವೆ. ಮಧ್ಯಾಹ್ನ ೧೨.೩೦ಕ್ಕೆ ಪೂರ್ಣಾಹುತಿ ಮತ್ತು ಶ್ರೀ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ. ಸಂಜೆ ೫ ಗಂಟೆಗೆ ಶತಶ್ಲೋಕಿ ರಾಮಾಯಣ ಸಾಮೂಹಿಕ ಪಾರಾಯಣ ಹಾಗೂ ೬.೩೦ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಹಾಗೂ ಶ್ರೀ ರಾಮನ ಕೃಪೆಗೆ ಪಾತ್ರರಾಗಬೇಕೆಂದು ದತ್ತ ಪೀಠ ಕೋರಿದೆ.

ಭಕ್ತರೊಂದಿಗೆ ಪಯಣ: ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಡಿ.೨೧ಕ್ಕೆ ಮೈಸೂರಿನಿಂದ ಹೊರಡುವ ವಿಶೇಷ ರೈಲು ಬೋಗಿಯಲ್ಲಿ ೧,೩೦೦ ಮಂದಿ ಭಕ್ತರು ಪಯಣ ಬೆಳೆಸಲಿದ್ದು, ಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿ ಕೂಡ ರೈಲಿನಲ್ಲೇ ತೆರಳುತ್ತಿರುವುದು ವಿಶೇಷವಾಗಿದೆ. ಮೈಸೂರಿನಿಂದ ಅಯೋಧ್ಯೆಗೆ ತೆರಳುವ ರೈಲಿನಲ್ಲಿ ವಿಶೇಷ ಬೋಗಿ ವ್ಯವಸ್ಥೆ ಮಾಡಿದ್ದು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹೊರ ರಾಜ್ಯಗಳು, ದೇಶಗಳ ಭಕ್ತರು ಹಾಜರಿರುತ್ತಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

19 hours ago