Andolana originals

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ

ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ ಕೈ ದೀಪ. ಅಂಥ ದೀಪವನ್ನು ದಾರಿ ದೀಪವಾಗಿಸಿಕೊಂಡು ಈ ಜಾತಿ, ಧರ್ಮ, ದೇಶ, ಭಾಷೆಗಳ ಹಂಗಿನ ಬೇಲಿಯನ್ನು ದಾಟಿ ಮನುಕುಲದ ದಾರಿಯಲ್ಲಿ ನಡೆದವರು, ನಡೆಯುತ್ತಿರುವ ವರು ಈ ಲೋಕದಗಲಕ್ಕೂ ಹರವಿಕೊಂಡಿದ್ದಾರೆ.

ಅದು ಮನುಷ್ಯತ್ವವನ್ನು ಪೊರೆವ ಪರಿಗೆ ಅದೆಷ್ಟೋ ಹೊಚ್ಚ ಹೊಸ ಮನಸ್ಸುಗಳು ಈ ಚಣದಲ್ಲೂ ಆ ತಾಯ್ತನದಡಿಯ ನೆರಳಿನಲ್ಲಿ ನಡೆಯ ಬಯಸುತ್ತಿರುವುದು, ಎದೆಯ ಕೇಡುಗಳಿಗೆ ಮಹಾ ಮದ್ದಾಗು ತಿರುವುದು ಅದರ ಸವಿಯುಂಡವರಿಗೆ ಸೋಜಿಗದ ಸಂಗತಿ ಅಲ್ಲವೇ ಅಲ್ಲ.

ಇಂಥದ್ದೊಂದು ಮಹಾ ಬೆಳಕು ಎಟಕಿಸಿ ಕೊಳ್ಳದ ತಾವಿಲ್ಲ. ಇದು ಕೇವಲ ಪಟ್ಟಣಗಳ ಆಸುಪಾಸಿನಲ್ಲೋ, ಇಲ್ಲಾ ವಿದ್ಯಾವಂತ ಎನಿಸಿಕೊಂಡವರ ಮರ್ಜಿಯಲ್ಲೋ ಲೊಪ್ಪದೆ ದೇಶದ ಹಳ್ಳಿ ಹಳ್ಳಿಗಳಿಗೂ ತಲು ಪಾಕಿಕೊಂಡದ್ದು ಹಾಗೂ ಅಲ್ಲಿ ಸ್ವಾತಂತ್ರ್ಯದ ಕಿಚ್ಚಿನೊಂದಿಗೆ ಹಚ್ಚಿದ ಮನುಷ್ಯತ್ವದ ಸ್ವಾಭಿಮಾನದ ಕಿಡಿ ಇಂದಿಗೂ ಮಾಸಲೊ ಪದು. ಹಂಗಾಗಿ ಗಾಂಧಿ ಎಂಬುದೊಂದು ಕಾಲಾತೀತವಾದ, ದಣಿವರಿಯದೆ ಹರಿವ ಶುದ್ಧಾತಿ ಶುದ್ಧ ನೀರಿನ ಹೊಳೆ. ಅದೊಂದು ಬದುಕ ನೋಡುವ ಕ್ರಮ. ಬದುಕುತ್ತಾ ಮನುಷ್ಯರಾಗುವ ಕ್ರಮ.

ಬೆಳಗ ನಾನು ಗಾಂಧೀಜಿಯ ಹೆಸರು ಕೇಳಿದ್ದು ಪಠ್ಯ ಪುಸ್ತಕಕ್ಕಿಂತ ಮೊದಲು, ನನ್ನ ಅಜ್ಜನ ಬಾಯಿಂದ. ಅಷ್ಟೊಂದು ಓದಿರದಿದ್ದ ಅಜ್ಜ ಗಾಂಧಿಯ ಪರಮಭಕ್ತ. ಗಾಂಧಿ ಬದುಕಿನ ಬಗೆಗಿನ ಅನೇಕ ಸಂಗತಿಗಳನ್ನು ನನಗೆ ಹೇಳುತ್ತಾ ನನ್ನೊಳಗೆ ಗಾಂಧಿ ಬಗೆಗಿನ ಅಪಾರ ಒಲವನ್ನು ಬೆಳೆಸಿದ್ದು ಈ ಅಜ್ಜ. ಗಾಂಧಿಯೆಡೆಗೆ ಅಜ್ಜನ ಅಂಥ ಒಲವಿಗೆ ಕಾರಣವೊಂದಿತ್ತು.

ಅದೆಂದರೆ ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧಿ ಒಮ್ಮೆ ನನ್ನ ಹಳ್ಳಿಯ ಹತ್ತಿರದ ತಿಪ ಟೂರು ಪಟ್ಟಣಕ್ಕೆ ಬಂದಿದ್ದರಂತೆ. ಆಗ ಅಜ್ಜ ಮತ್ತವರ ಗೆಣೆಕಾರರು ಗಾಂಧಿಯನ್ನು ನೋಡಲೋಸುಗ ಎತ್ತಿನ ಗಾಡಿಯನ್ನು ಕಟ್ಟಿಕೊಂಡು ತಿಪಟೂರಿಗೆ ಹೋಗಿ ಅಲ್ಲಿಯೇ ಎರಡು ದಿನ ಇದ್ದರಂತೆ. ಆಗ ಸೇರಿದ್ದ ಆ ಜನ, ಆಗ ಗಾಂಧಿ ಆಡಿದ್ದ ಆ ಮಾತುಗಳು ನನ್ನ ಅಜ್ಜನೊಳಗೆ ಆ ಕೊನೆಯವರೆಗೂ ಹಂಗೇ ಹಳ್ಳಿಯವರೊಬ್ಬರು ತನ್ನ ಮಗನಿಗೆ ಗಾಂಧಿ ಎಂದು ಹೆಸರಿಟ್ಟು ದಿನವೂ ಅವನೊಳಗೆ ಗಾಂಧಿಯನ್ನು ನೋಡಲೆತ್ನಿಸುತ್ತಿದ್ದರು. ಮತ್ತೊಬ್ಬರು ನನ್ನ ಊರಿನವರು. ನನ್ನ ಅಜ್ಜನ ಜೊತೆಗಾರರು. ನಾನವರ ಬಗ್ಗೆ ಕೇಳಿದ್ದೆ ಅಷ್ಟೇ. ಊರಾಚೆಯ ದನಗಳು ಮೇಯಲು ಹೋಗುತ್ತಿದ್ದ ಪುಟ್ಟ ಕಾಡಿನಲ್ಲಿ ಪುಟ್ಟ ಪುಟ್ಟ ಕರುಗಳಿಗೋಸ್ಕರವೇ ಪುಟ್ಟದೊಂದು ಕೆರೆಯನ್ನು ಕಟ್ಟಿ ಅದಕ್ಕೆ ಗಾಂಧಿ ಕಟ್ಟೆ ಅಂತ ಹೆಸರಿಟ್ಟಿದ್ದರಂತೆ. ಆ ನಂತರ ಆ ಕಟ್ಟೆ ಬರಬರುತ್ತಾ ಊರವರ ಬಾಯಲ್ಲಿ ಕರುವಿನ ಕಟ್ಟೆಯಾಗಿತ್ತು. ಅದೇರೀತಿ, ನನಗೆ ತುಂಬಾ ಹತ್ತಿರದಿಂದ ಗೊತ್ತಿದ್ದ, ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವ ಹಿಸಿದ್ದವರೊಬ್ಬರು ಆ ದಿನ ಗಾಂಧಿಯ ಕೈಯಿಂದ ತೆಂಗಿನ ಸಸಿಯೊಂದನ್ನು ಮುಟ್ಟಿಸಿ ತಂದು ಅದನ್ನು ‘ಗಾಂಧಿ ಮುಟ್ಟಿದ ಗಿಡ’ ಅಂತಲೇ ಹೆಸರಿಡಿದು ಕರೆದು ಪೋಷಿಸಿದ್ದರಂತೆ. ಆದರೆ ಅದೊಂದು ದಿನ ಅದನ್ನು ಮಳೆ ಗಾಳಿ ತಿರುಚಿ ಹಾಕಿ ಬಿಟ್ಟಿತ್ತಂತೆ. ಅದು ಆ ಗಾಂಧಿ ವ್ಯಕ್ತಿಗೆ ಅಪ್ಪಟ ಅಪಶಕುನದಂತೆ ಕಂಡಿತ್ತಂತೆ. ಕಾಕತಾಳೀಯ ಎಂಬಂತೆ ಅದಾದ ಕೆಲ ಬದಲಿಸಿದ ದಿನಕ್ಕೆ ಗಾಂಧಿಯ ಎದೆಗೆ
ಬದುಕುಗಳುಉಳಿದು ಬಿಟ್ಟಿದ್ದವು. ಆ ಚಣಗಳನ್ನು, ಆ ಮಾತುಗಳನ್ನು ನನ್ನೊಳಕ್ಕೆ ದಾಟಿಸುತ್ತಿದ್ದ ಅಜ್ಜನ ಆ ತನ್ಮಯತೆ, ಆ ಧನ್ಯತಾ ಭಾವ ನನ್ನೊಳಗೆ ಈಗಲೂ ಹಾಗೆಯೇ ಇದೆ. ಅಂದು ಗಾಂಧಿ ಉಳಿದಿದ್ದ ಮನೆ ಈಗಲೂ ಇದೆ.

ಇನ್ನು ತಿಪಟೂರಿನ ಆಸುಪಾಸಿನ ಸೀಮೆ ಯಲ್ಲಿ ಗಾಂಧಿ ನಡೆದಾಡಿದ ಮಣ್ಣಿನಲ್ಲಿ ಓಡಾಡಿದ್ದ ಅದೆಷ್ಟೋ ಮಂದಿ ಗಾಂಧಿಯನ್ನು ದಿನವೂ ಕಾಣಬಯಸುವ ಸಲುವಾಗಿ ಹತ್ತು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದರು. ಅವತ್ತು ಗಾಂಧಿ ಯನ್ನು ಕಂಡಿದ್ದ ತಿಪಟೂರಿನ ಹತ್ತಿರದ

ಹಳ್ಳಿಯವರೊಬ್ಬರು ತನ್ನ ಮಗನಿಗೆ ಗಾಂಧಿ ಎಂದು ಹೆಸರಿಟ್ಟು ದಿನವೂ ಅವನೊಳಗೆ ಗಾಂಧಿಯನ್ನು ನೋಡಲೆತ್ನಿಸುತ್ತಿದ್ದರು. ಮತ್ತೊಬ್ಬರು ನನ್ನ ಊರಿನವರು. ನನ್ನ ಅಜ್ಜನ ಜೊತೆಗಾರರು. ನಾನವರ ಬಗ್ಗೆ ಕೇಳಿದ್ದೆ ಅಷ್ಟೇ. ಊರಾಚೆಯ ದನಗಳು ಮೇಯಲು ಹೋಗುತ್ತಿದ್ದ ಪುಟ್ಟ ಕಾಡಿನಲ್ಲಿ ಪುಟ್ಟ ಪುಟ್ಟ ಕರುಗಳಿಗೋಸ್ಕರವೇ ಪುಟ್ಟದೊಂದು ಕೆರೆಯನ್ನು ಕಟ್ಟಿ ಅದಕ್ಕೆ ಗಾಂಧಿ ಕಟ್ಟೆ ಅಂತ ಹೆಸರಿಟ್ಟಿದ್ದರಂತೆ. ಆ ನಂತರ ಆ ಕಟ್ಟೆ ಬರಬರುತ್ತಾ ಊರವರ ಬಾಯಲ್ಲಿ ಕರುವಿನ ಕಟ್ಟೆಯಾಗಿತ್ತು.

ಅದೇರೀತಿ, ನನಗೆ ತುಂಬಾ ಹತ್ತಿರದಿಂದ ಗೊತ್ತಿದ್ದ, ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವ ಹಿಸಿದ್ದವರೊಬ್ಬರು ಆ ದಿನ ಗಾಂಧಿಯ ಕೈಯಿಂದ ತೆಂಗಿನ ಸಸಿಯೊಂದನ್ನು ಮುಟ್ಟಿಸಿ ತಂದು ಅದನ್ನು ‘ಗಾಂಧಿ ಮುಟ್ಟಿದ ಗಿಡ’ ಅಂತಲೇ ಹೆಸರಿಡಿದು ಕರೆದು ಪೋಷಿಸಿದ್ದರಂತೆ. ಆದರೆ ಅದೊಂದು ದಿನ ಅದನ್ನು ಮಳೆ ಗಾಳಿ ತಿರುಚಿ ಹಾಕಿ ಬಿಟ್ಟಿತ್ತಂತೆ. ಅದು ಆ ವ್ಯಕ್ತಿಗೆ ಅಪ್ಪಟ ಅಪಶಕುನದಂತೆ ಕಂಡಿತ್ತಂತೆ. ಕಾಕತಾಳೀಯ ಎಂಬಂತೆ ಅದಾದ ಕೆಲ ದಿನಕ್ಕೆ ಗಾಂಧಿಯ ಎದೆಗೆ ಗುಂಡೇಟು ಬಿದ್ದಿತ್ತಂತೆ. ತೊಂಬತ್ತು ವರ್ಷಗಳನ್ನಾಗಲೇ ದಾಟಿದ್ದ, ಬೊಚ್ಚು ಬಾಯಿಯ ಆ ಅಜ್ಜ ಅದನ್ನು ಹೇಳುವ ಹೊತ್ತಲ್ಲಿ ಅಜ್ಜನ ಮುಪ್ಪ ಡರಿದ್ದ ಮುಖದಲ್ಲಿ ಸಂಕಟದ ಗೆರೆಗಳು ಮೂಡುತ್ತಾ ಅಜ್ಜ ಮೌನಕ್ಕೆ ಜಾರಿಬಿಡುತ್ತಿ ದ್ದರು. ಆಗ ನನಗೆ ಆ ಅಜ್ಜನ ಮುಖ ಥೇಟ್ ಗಾಂಧಿಯ ಮುಖದಂತೆಯೇ ಕಾಣುತ್ತಿತ್ತು. ಹಂಗಾಗಿ, ಗಾಂಧಿ ಎಂಬುದು ಕೇವಲ ಭೂತಕಾಲದ ವಿದ್ಯಮಾನವಲ್ಲ. ಎಲ್ಲ ಕಾಲಕ್ಕೂ ಸಲ್ಲುವ ಸಮ್ಮೋಹನ ಕ್ರಿಯೆ.
sgangadharaiah@gmail.com

ಆಂದೋಲನ ಡೆಸ್ಕ್

Recent Posts

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

7 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

31 mins ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

50 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

1 hour ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

1 hour ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

3 hours ago