Andolana originals

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ

ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ

ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿಯನ್ನು ಗುರುತಿಸಿ ರಾಜ್ಯ ಸರ್ಕಾರವು ಕೊಡಮಾಡುವ ೨೦೨೪-೨೫ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ತಾಲ್ಲೂಕಿನ ರಂಗಸಮುದ್ರ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿ ಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸುವ ಪಂಚಾಯಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನವಾಗಿರುವ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ಇದಾಗಿದೆ.

ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜ ನೆಗಳಾದ ಸ್ವಚ್ಛ ಭಾರತ್ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ವಸತಿ ಯೋಜನೆ, ತೆರಿಗೆ ವಸೂಲಾತಿ, ಶಾಲೆ ಮತ್ತು ಅಂಗನವಾಡಿಗಳ ಅಭಿವೃದ್ಧಿ, ಶೌಚಾಲಯಗಳ ನಿರ್ಮಾಣ, ಬೀದಿ ದೀಪ ಮತ್ತು ಮೂಲಸೌಕರ್ಯ, ಬಾಲ್ಯವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ, ಮಾನವ ಅಭಿವೃದ್ಧಿ ಸೂಚ್ಯಂಕ ಸೇರಿದಂತೆ ಅಭಿವೃದ್ಧಿಯಲ್ಲಿ ರಂಗಸಮುದ್ರ ಗ್ರಾಮ ಪಂಚಾಯಿತಿ ಮುಂಚೂಣಿಯಲ್ಲಿದೆ.

ಪ್ರಶಸ್ತಿಯು ಸ್ಮರಣಿಕೆ ಹಾಗೂ ೭ ಲಕ್ಷ ರೂ. ಮೊತ್ತದ ಸಹಾಯಧನವನ್ನು ಒಳಗೊಂಡಿರುತ್ತದೆ. ಬೆಂಗಳೂರಿನಲ್ಲಿ ಜರುಗುವ ಸಮಾರಂಭದಲ್ಲಿ ಸರ್ಕಾರದ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯ ಮೊತ್ತವನ್ನು ಗ್ರಾಮಗಳ ಮೂಲಸೌಲಭ್ಯಗಳ ಅಭಿವೃದ್ಧಿಗಾಗಿ ಬಳಸಲಾಗುತ್ತದೆ.

”  ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಅಭಿವೃದ್ಧಿ ಕೆಲಸಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ತೆರಿಗೆ ಸಂಗ್ರಹಣೆಯಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಽಸಿ ತಾಲ್ಲೂಕಿನಲ್ಲೇ ಅಗ್ರ ಸ್ಥಾನದಲ್ಲಿರುವಂತೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುವಂತೆ ಪ್ರಶಸ್ತಿಯು ಪ್ರೇರೇಪಿಸಿದೆ.”

-ಮೊಹಮ್ಮದ್ ಇಸ್ಹಾಕ್, ಪಿಡಿಒ, ರಂಗಸಮುದ್ರ ಗ್ರಾಪಂ

” ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಅಭಿವೃದ್ಧಿಯನ್ನೇ ಧ್ಯೇಯವಾಗಿರಿಸಿ ನಮ್ಮ ಪಿಡಿಒ ಮತ್ತು ಎಲ್ಲಾ ಸದಸ್ಯರ ಸಹಕಾರದಿಂದ ಉತ್ತಮ ಕಾರ್ಯಗಳನ್ನು ಮಾಡಲಾಗಿದೆ. ಅದಕ್ಕೆ ತಕ್ಕಂತೆ ಗಾಂಧಿ ಗ್ರಾಮ ಪುರಸ್ಕಾರ ದೊರಕಿರುವುದು ಸಂತೋಷ ಉಂಟುಮಾಡಿದೆ.”

-ಸುಜಾತ ರಂಗಸ್ವಾಮಿ, ನಿಕಟಪೂರ್ವ ಅಧ್ಯಕ್ಷರು, ರಂಗಸಮುದ್ರ ಗ್ರಾಪಂ

 

 

ಆಂದೋಲನ ಡೆಸ್ಕ್

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

56 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

1 hour ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

2 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

3 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

4 hours ago