Andolana originals

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ ಕಥೆ. ಒಳಿತಿಗೆ ಎದುರಾಗುವ ಎಲ್ಲ ವಿಘ್ನಗಳನ್ನು ಧೈರ್ಯವಾಗಿ ಎದುರಿಸಿ ನಿಂತವರು ಗಾಂಧಿ. ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸವಾಗಬೇಕಾದ ದಿಕ್ಕಿಗೆ ಗಾಂಧಿಜಿಯ ಜೀವನ ಒಂದು ಕೈಮರ. ಪುಣ್ಯವಶಾತ್ ಗಾಂಧಿಜಿಯ ಜೀವಿತದ ಕಾಲದಲ್ಲಿ ಸತ್ಯಕ್ಕಾಗಿ ಜೀವನವನ್ನೇ ಪಣಕ್ಕೊಡ್ಡಿ ಗಟ್ಟಿಯಾಗಿ ನಿಲ್ಲಲು ಅವಕಾಶವಿತ್ತು. ಅವರ ಆತ್ಮಕಥೆಗೆ ನೂರು ವರ್ಷವೇನು ಸಾವಿರ ವರ್ಷಗಳೇ ಆದರೂ ಅದು ಸತ್ಯಕ್ಕಾಗಿ ನಿಲುವ ಛಲವ ದೀಪ್ತಗೊಳಿಸು ಎನ್ನೊಳು ಎಂಬ ಹಂಬಲವನ್ನು ಮತ್ತೆ ಮತ್ತೆ ಮೊರೆಯುವ, ಮನುಕುಲದ ಒಳಿತುಗಳ ಕಥೆ. ಇದಕ್ಕೆ ಸರಿಸಾಟಿಯಾದದ್ದು ನಮಗೆ ಮತ್ತೆಲ್ಲೂ ಸಿಗುವುದಿಲ್ಲ.

ದ್ವೇಷದ ನಡುವೆ ಪ್ರೀತಿಯನ್ನು ಎತ್ತಿ ಹಿಡಿಯುವ, ವೈರಿಗಳ ನಡುವೆ ಸ್ನೇಹವನ್ನು ಬಿತ್ತುವ, ಸ್ವಾರ್ಥಿಗಳ ನಡುವೆ ನಿಸ್ವಾರ್ಥ ನಿಲುವನ್ನು ಗೆಲ್ಲುವಂತೆ ಮಾಡಬಲ್ಲ ಆದರೂ ಮಗುವಿನಂತೆ ಸರಳವಾಗಿ ಬದುಕಿದ ಮಹಾತ್ಮನ ಆತ್ಮಕಥೆಗೆ ನೂರು ವರ್ಷ ಆಗಿರುವುದು ಸಂಭ್ರಮಿಸಬೇಕಾದ ವಿಷಯ. ಗಾಂಧಿಯ ಬದುಕಿನಿಂದ ಸೂರ್ತಿ ಪಡೆಯದೆ ಬದುಕುವುದು ಆತ್ಮವಂಚಕರಿಗೆ ಮಾತ್ರ ಸಾಧ್ಯ. ಇಂತಹ ಆತ್ಮವಂಚಕರೇ ನಮ್ಮ ನಡುವೆ ಹೆಚ್ಚಿರಬಹುದು. ಆದರೇನು? ಗಾಂಧಿಯ ಬೆಳಕನ್ನು ಮುಚ್ಚಿಡಲು ಸಾಧ್ಯವಿಲ್ಲ. ಅದು ಮತ್ತೆ ಮತ್ತೆ ನಮ್ಮ ನಾಡನ್ನು ಬೆಳಗುತ್ತಲೇ ಇರುತ್ತದೆ.

-ಜಿ.ಎಸ್.ಜಯದೇವ, ದೀನಬಂಧು ಟ್ರಸ್ಟ್, ಚಾಮರಾಜನಗರ 

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

40 seconds ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

11 mins ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

16 mins ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

23 mins ago

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…

26 mins ago

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

3 hours ago