Andolana originals

ಕೊಡಗಿನಲ್ಲಿ ಕೋಮು ಸೌಹಾರ್ದತೆ ಸಾರಿದ ಹಬ್ಬದಾಚರಣೆ

ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ.

ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬಾರಿ ಪರಸ್ಪರ ಸೌಹಾರ್ದತೆಯಿಂದ ಹಬ್ಬದಾಚರಣೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಗಣೇಶೋತ್ಸವಕ್ಕೂ ಮುನ್ನವೇ ಪೊಲೀಸ್ ಇಲಾಖೆಯಿಂದ ಧಾರ್ಮಿಕ ಮುಖಂಡರ ಸಭೆ ನಡೆಸಿ ಶಾಂತಿಯುತವಾಗಿ ಹಬ್ಬದಾಚರಣೆ ಮಾಡಲು ಕರೆ ನೀಡಲಾಗಿತ್ತು. ಈದ್ ಮಿಲಾದ್‌ಗೂ ಮುನ್ನ ಪೊಲೀಸ್ ಇಲಾಖೆ ಸಭೆಗಳನ್ನು ಆಯೋಜಿಸುವ ಮೂಲಕ ಸೌಹಾರ್ದತೆ ಯಿಂದ ಹಬ್ಬದಾಚರಣೆಗೆ ಮನವಿ ಮಾಡಲಾಗಿತ್ತು.

ಎರಡೂ ಧರ್ಮಗಳ ಮುಖಂಡರೂ ಶಾಂತಿಯುತ ಹಬ್ಬಗಳ ಆಚರಣೆಗೆ ಸಹಕಾರ ನೀಡುವ ಭರವಸೆ ನೀಡಿದ್ದರು. ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಜಿಲ್ಲೆಯ ಹಲೆವೆಡೆ ಹಿಂದೂ ಸಹೋದರರಿಗೆ ಸಿಹಿ, ಪಾನೀಯ ವ್ಯವಸ್ಥೆ ಮಾಡಿದ್ದರು. ಅದಕ್ಕೆ ಬದಲಾಗಿ ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಆಚರಣೆ ಸಂದರ್ಭ ದಲ್ಲಿಯೂ ಹಿಂದೂ ಬಾಂಧವರು ಸಿಹಿ ಹಾಗೂ ಪಾನೀಯ ವಿತರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ಜಿಲ್ಲೆಯ ಬೋಯಿಕೇರಿ, ೭ನೇ ಹೊಸಕೋಟೆ, ಸುಂಟಿಕೊಪ್ಪ, ಕುಶಾಲ ನಗರದಲ್ಲಿ ಸೌಹಾರ್ದ ಯುತವಾಗಿ ಹಬ್ಬವನ್ನು ಆಚರಿಸಿದ್ದಾರೆ. ಪೊಲೀಸ್ ಇಲಾಖೆ ಕೂಡ ಸೌಹಾರ್ದಯುತ ಹಬ್ಬ ಆಚರಣೆ ಮಾಡಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ.

ಸಾಕಷ್ಟು ಬಾರಿ ಸಂಘರ್ಷಗಳಿಂದ ಹೆಚ್ಚಿನ ಸುದ್ದಿಯಾಗುತ್ತಿದ್ದ ಜಿಲ್ಲೆಯಲ್ಲಿ ಈ ಬಾರಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ನಡೆದ ಹಬ್ಬದಾಚರಣೆ ಹೆಚ್ಚು ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎರಡೂ ಧರ್ಮದವರೂ ಪಾನೀಯ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಹೊರ ಜಿಲ್ಲೆಗಳಲ್ಲಿ ಹಬ್ಬದಾಚರಣೆ ಸಂದರ್ಭದಲ್ಲಿ ಶಾಂತಿ ಕದಡುತ್ತಿರುವ ಘಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲೆಯಲ್ಲಿ ಸದ್ದಿಲ್ಲದೆ ಶಾಂತಿಯುತವಾಗಿ ಪರಸ್ಪರ ಸೌಹಾರ್ದ ತೆಯಿಂದ ಹಬ್ಬ ಆಚರಣೆ ನಡೆದಿ ರುವುದು ಶ್ಲಾಘನೀಯ.

ಹಬ್ಬದಾಚರಣೆಗಳು ಪರಸ್ಪರ ಸಾಮರಸ್ಯ ಮೂಡಿಸುವಂತಿರ ಬೇಕು. ಆ ನಿಟ್ಟಿನಲ್ಲಿ ಈ ಬಾರಿ ೨ ಧರ್ಮದವ ರಿಂದಲೂ ಸೌಹಾರ್ದಯುತ ಹಬ್ಬದಾಚರಣೆಗಳು ನಡೆದಿವೆ. ಇದು ಮುಂದುವರಿಯಬೇಕು. ಇತರ ಧರ್ಮದವರನ್ನು ಸಹೋದರರಂತೆ ಕಾಣುವ ಮನೋಭಾವನೆ ಹೆಚ್ಚಾಗಬೇಕು. ಎಲ್ಲ ಹಬ್ಬದಾಚರಣೆಗಳು ಈ ರೀತಿಯಲ್ಲಿಯೇ ನಡೆಯುವಂತಾಗಬೇಕು. ಕೊಡಗು ಮಾತ್ರವಲ್ಲದೆ ಇತರ ಜಿಲ್ಲೆ, ದೇಶದಲ್ಲಿಯೂ ಇಂತಹ ಆಚರಣೆ ನಡೆಯುವಂತಾಗಬೇಕು.
-ತಮ್ಲಿಖ್ ಧಾರಿಮಿ, ಧಾರ್ಮಿಕ ಮುಖಂಡ, ಕೊಡಗು

ಕೊಡಗು ಜಿಲ್ಲೆಯಲ್ಲಿ ಹಬ್ಬದಾಚರಣೆಗಳು ಅರ್ಥಪೂರ್ಣ ವಾಗಿ ನಡೆದಿವೆ. ಜಿಲ್ಲೆಯ ಜನರ ನೈಜ ಭಾವನೆಗಳನ್ನು ಅರಿತುಕೊಳ್ಳಬೇಕಿದೆ. ಎಲ್ಲ ಜನಾಂಗದವರು ಪ್ರೀತಿ-ವಿಶ್ವಾಸದಿಂದ ಬದುಕುವ ನಿಟ್ಟಿನಲ್ಲಿ ಇಂತಹ ಆಚರಣೆಗಳು ಅವಶ್ಯವಾಗಿವೆ. ಕೊಡಗಿನಲ್ಲಿ ಹೆಚ್ಚಿನ ಶಿಕ್ಷಣ ಪಡೆದಿರುವವರು ಇರುವುದರಿಂದ ಇಂತಹ ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ. ಇದು ಎಲ್ಲೆಡೆ ಮುಂದುವರಿಯಬೇಕು.
-ಶ್ರೀ ಸದಾಶಿವ ಸ್ವಾಮೀಜಿ, ಕಿರಿಕೊಡ್ಲಿ ಮಠ, ಸೋಮವಾರಪೇಟೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

3 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

56 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago