Andolana originals

ಇಂದು ಸಾಮೂಹಿಕ ಗೌರಿ-ಗಣೇಶೋತ್ಸವ ಸಂಭ್ರಮ

೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ 

ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ.

ಪಟ್ಟಣದಲ್ಲಿ ಗೌರಿ-ಗಣೇಶೋತ್ಸವವು ಕೇವಲ ಒಂದು ವರ್ಗ ಇಲ್ಲವೇ ಒಂದು ಪಂಗಡದ ಹಬ್ಬವಾಗಿ ಉಳಿದುಕೊಂಡಿಲ್ಲ. ಬದಲಾಗಿ ಊರ ಹಬ್ಬವೆಂದೆನಿಸಿದೆ. ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಉತ್ಸವದ ಅದ್ಧೂರಿತನ, ಸಂಪ್ರದಾಯ ಹಾಗೂ ಜನತೆಯ ಶ್ರದ್ಧಾ-ಭಕ್ತಿಗೆ ಧಕ್ಕೆಯುಂಟು ಮಾಡಿಲ್ಲ.

ಪಟ್ಟಣ ವ್ಯಾಪ್ತಿಯಲ್ಲಿನ ಸುಮಾರು ೩೦ಕ್ಕೂ ಹೆಚ್ಚಿನ ಸಮಿತಿಗಳು ಸಾಮೂಹಿಕವಾಗಿ ಗೌರಿ-ಗಣೇಶೋತ್ಸವವನ್ನು ಆಚರಿಸಲಿವೆ. ಪಟ್ಟಣದ ಗಡಿಯಾರ ಕಂಬದ ಬಳಿಯ ಮಹಾಗಣಪತಿ ದೇವಾಲಯದಲ್ಲಿ ಆ.೨೭ರಂದು ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಬಳಿಕ ಉಳಿದ ಎಲ್ಲ ಸಮಿತಿಗಳೂ ತಮ್ಮತಮ್ಮ ವೇದಿಕೆಯಲ್ಲಿ ವಿಶೇಷ ಪೂಜಾ ಕಾರ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿವೆ. ಪ್ರತಿನಿತ್ಯ ಸಮಿತಿಗಳಿಂದ ಉತ್ಸವಮೂರ್ತಿಗಳಿಗೆ ತ್ರಿಕಾಲ ಪೂಜೆ ನಡೆಸಲಾಗುತ್ತಿದೆ. ಆಯಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳು, ಇತರ ಪರಿಕರಗಳಿಂದ ಅಲಂಕಾರವನ್ನು ಕೈಗೊಂಡಿವೆ. ಇದರಿಂದ ವಿರಾಜಪೇಟೆ ಪಟ್ಟಣವು ನವವಧುವಿನಂತೆ ಶೃಂಗಾರಗೊಂಡು ಕಂಗೊಳಿಸುತ್ತಿದೆ.

ಸಂಪ್ರದಾಯದಂತೆ ಗೌರಿ ಹಬ್ಬದ ದಿನವಾದ ಆ.೨೬ರಂದು ಪಟ್ಟಣದ ಜೈನರ ಬೀದಿಯಲ್ಲಿನ ಬಸವೇಶ್ವರ ದೇವಾಲಯದ ವತಿಯಿಂದ ಗೌರಮ್ಮನ ಉತ್ಸವಮೂರ್ತಿಯನ್ನು ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ಕೆಲ ಸಮಿತಿಗಳ ವೇದಿಕೆಗಳಲ್ಲಿಉತ್ಸವದ ಬಹುತೇಕ ಎಲ್ಲಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷವೆಂದರೆಈ ಉತ್ಸವವು ಸ್ಥಳೀಯ ಪ್ರತಿಭೆಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವ ಬಹುತೇಕ ಸಮಿತಿಗಳು ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಿವೆ.

ವಿವಿಧ ಸಮಿತಿಗಳು ಉತ್ಸವದ ದಿನಗಳಂದು ಅನ್ನಸಂತರ್ಪಣೆ ಕಾರ್ಯವನ್ನು ಆಯೋಜಿಸಿವೆ. ವಿಶೇಷವಾಗಿ ಪಟ್ಟಣದ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿನ ಶ್ರೀ ಬಾಲಾಂಜನೇಯ ಗಣಪತಿ ಸೇವಾ ಸಮಿತಿ ವತಿಯಿಂದ ಉತ್ಸವದ ೧೧ ದಿನಗಳ ಕಾಲವೂ ರಾತ್ರಿ ಅನ್ನಸಂತರ್ಪಣೆಯನ್ನು ಕೈಗೊಳ್ಳಲಾಗಿತ್ತು.

ಉತ್ಸವ ಮೂರ್ತಿಗಳ ವಿಸರ್ಜನೋತ್ಸವದಂದು ನಡೆಯುವ ಶೋಭಯಾತ್ರೆ ಆಕಷಣೀಯವಾಗಿರಲಿದೆ. ಶೋಭಯಾತ್ರೆಯು ಸೆ.೬ರಂದು ಸಂಜೆ ಆರಂಭಗೊಂಡು ಮರುದಿನ ಮುಂಜಾನೆ ಮುಕ್ತಾಯಗೊಳ್ಳಲಿದೆ. ಈ ಬಾರಿ ಶೋಭಯಾತ್ರೆಯಲ್ಲಿ ೨೨ ಪ್ರಮುಖ ಗಣೇಶೋತ್ಸವ ಸಮಿತಿಗಳು ಭಾಗವಹಿಸಲಿವೆ. ಶೋಭಯಾತ್ರೆಯ ಬಳಿಕ ಉತ್ಸವ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಗೌರಿ ಕೆರೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರ ಮುತುವರ್ಜಿಯಿಂದ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗಿದೆ. ಉತ್ಸವದ ಅಂಗವಾಗಿ ಪೊಲೀಸ್ ಇಲಾಖೆಯು ಸೂಕ್ತಬಂದೋಬಸ್ತ್ ಕೈಗೊಂಡಿದೆ. ಗೌರಿ-ಗಣೇಶೋತ್ಸವವು ಇಲ್ಲಿನ ನಿವಾಸಿಗಳಿಗೆ ಲವಲವಿಕೆಯನ್ನು ತಂದುಕೊಡುವುದರ ಜತೆಗೆ ಉತ್ಸವದ ಅಥವಾ ಶೋಭಯಾತ್ರೆಯ ಮರುದಿನ ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ.

” ವಿರಾಜಪೇಟೆಯ ಗೌರಿ-ಗಣೇಶೋತ್ಸವ ಭಾವೈಕ್ಯತೆಯ ಸಾಮರಸ್ಯದ ಉತ್ಸವ. ಉತ್ಸವದ ಸಮಿತಿಗಳೊಂದಿಗೆ ಸಮನ್ವಯತೆ ಸಾಧಿಸಲಾಗಿ, ಎಲ್ಲಾ ಸಹಕಾರನೀಡುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ. ಎಲ್ಲರೂ ಒಟ್ಟಾಗಿ ನಾಡಿನ ಪಾರಂಪರಿಕ ಉತ್ಸವದ ಯಶಸ್ವಿಗೆ ಸಹಕರಿಸೋಣ.”

-ಶಬರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ

ಆಂದೋಲನ ಡೆಸ್ಕ್

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

4 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

5 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

5 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

5 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

6 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

6 hours ago