Andolana originals

ಇಂದು ಸಾಮೂಹಿಕ ಗೌರಿ-ಗಣೇಶೋತ್ಸವ ಸಂಭ್ರಮ

೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ 

ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ.

ಪಟ್ಟಣದಲ್ಲಿ ಗೌರಿ-ಗಣೇಶೋತ್ಸವವು ಕೇವಲ ಒಂದು ವರ್ಗ ಇಲ್ಲವೇ ಒಂದು ಪಂಗಡದ ಹಬ್ಬವಾಗಿ ಉಳಿದುಕೊಂಡಿಲ್ಲ. ಬದಲಾಗಿ ಊರ ಹಬ್ಬವೆಂದೆನಿಸಿದೆ. ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಉತ್ಸವದ ಅದ್ಧೂರಿತನ, ಸಂಪ್ರದಾಯ ಹಾಗೂ ಜನತೆಯ ಶ್ರದ್ಧಾ-ಭಕ್ತಿಗೆ ಧಕ್ಕೆಯುಂಟು ಮಾಡಿಲ್ಲ.

ಪಟ್ಟಣ ವ್ಯಾಪ್ತಿಯಲ್ಲಿನ ಸುಮಾರು ೩೦ಕ್ಕೂ ಹೆಚ್ಚಿನ ಸಮಿತಿಗಳು ಸಾಮೂಹಿಕವಾಗಿ ಗೌರಿ-ಗಣೇಶೋತ್ಸವವನ್ನು ಆಚರಿಸಲಿವೆ. ಪಟ್ಟಣದ ಗಡಿಯಾರ ಕಂಬದ ಬಳಿಯ ಮಹಾಗಣಪತಿ ದೇವಾಲಯದಲ್ಲಿ ಆ.೨೭ರಂದು ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಬಳಿಕ ಉಳಿದ ಎಲ್ಲ ಸಮಿತಿಗಳೂ ತಮ್ಮತಮ್ಮ ವೇದಿಕೆಯಲ್ಲಿ ವಿಶೇಷ ಪೂಜಾ ಕಾರ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿವೆ. ಪ್ರತಿನಿತ್ಯ ಸಮಿತಿಗಳಿಂದ ಉತ್ಸವಮೂರ್ತಿಗಳಿಗೆ ತ್ರಿಕಾಲ ಪೂಜೆ ನಡೆಸಲಾಗುತ್ತಿದೆ. ಆಯಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳು, ಇತರ ಪರಿಕರಗಳಿಂದ ಅಲಂಕಾರವನ್ನು ಕೈಗೊಂಡಿವೆ. ಇದರಿಂದ ವಿರಾಜಪೇಟೆ ಪಟ್ಟಣವು ನವವಧುವಿನಂತೆ ಶೃಂಗಾರಗೊಂಡು ಕಂಗೊಳಿಸುತ್ತಿದೆ.

ಸಂಪ್ರದಾಯದಂತೆ ಗೌರಿ ಹಬ್ಬದ ದಿನವಾದ ಆ.೨೬ರಂದು ಪಟ್ಟಣದ ಜೈನರ ಬೀದಿಯಲ್ಲಿನ ಬಸವೇಶ್ವರ ದೇವಾಲಯದ ವತಿಯಿಂದ ಗೌರಮ್ಮನ ಉತ್ಸವಮೂರ್ತಿಯನ್ನು ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ಕೆಲ ಸಮಿತಿಗಳ ವೇದಿಕೆಗಳಲ್ಲಿಉತ್ಸವದ ಬಹುತೇಕ ಎಲ್ಲಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷವೆಂದರೆಈ ಉತ್ಸವವು ಸ್ಥಳೀಯ ಪ್ರತಿಭೆಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವ ಬಹುತೇಕ ಸಮಿತಿಗಳು ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಿವೆ.

ವಿವಿಧ ಸಮಿತಿಗಳು ಉತ್ಸವದ ದಿನಗಳಂದು ಅನ್ನಸಂತರ್ಪಣೆ ಕಾರ್ಯವನ್ನು ಆಯೋಜಿಸಿವೆ. ವಿಶೇಷವಾಗಿ ಪಟ್ಟಣದ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿನ ಶ್ರೀ ಬಾಲಾಂಜನೇಯ ಗಣಪತಿ ಸೇವಾ ಸಮಿತಿ ವತಿಯಿಂದ ಉತ್ಸವದ ೧೧ ದಿನಗಳ ಕಾಲವೂ ರಾತ್ರಿ ಅನ್ನಸಂತರ್ಪಣೆಯನ್ನು ಕೈಗೊಳ್ಳಲಾಗಿತ್ತು.

ಉತ್ಸವ ಮೂರ್ತಿಗಳ ವಿಸರ್ಜನೋತ್ಸವದಂದು ನಡೆಯುವ ಶೋಭಯಾತ್ರೆ ಆಕಷಣೀಯವಾಗಿರಲಿದೆ. ಶೋಭಯಾತ್ರೆಯು ಸೆ.೬ರಂದು ಸಂಜೆ ಆರಂಭಗೊಂಡು ಮರುದಿನ ಮುಂಜಾನೆ ಮುಕ್ತಾಯಗೊಳ್ಳಲಿದೆ. ಈ ಬಾರಿ ಶೋಭಯಾತ್ರೆಯಲ್ಲಿ ೨೨ ಪ್ರಮುಖ ಗಣೇಶೋತ್ಸವ ಸಮಿತಿಗಳು ಭಾಗವಹಿಸಲಿವೆ. ಶೋಭಯಾತ್ರೆಯ ಬಳಿಕ ಉತ್ಸವ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಗೌರಿ ಕೆರೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರ ಮುತುವರ್ಜಿಯಿಂದ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗಿದೆ. ಉತ್ಸವದ ಅಂಗವಾಗಿ ಪೊಲೀಸ್ ಇಲಾಖೆಯು ಸೂಕ್ತಬಂದೋಬಸ್ತ್ ಕೈಗೊಂಡಿದೆ. ಗೌರಿ-ಗಣೇಶೋತ್ಸವವು ಇಲ್ಲಿನ ನಿವಾಸಿಗಳಿಗೆ ಲವಲವಿಕೆಯನ್ನು ತಂದುಕೊಡುವುದರ ಜತೆಗೆ ಉತ್ಸವದ ಅಥವಾ ಶೋಭಯಾತ್ರೆಯ ಮರುದಿನ ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ.

” ವಿರಾಜಪೇಟೆಯ ಗೌರಿ-ಗಣೇಶೋತ್ಸವ ಭಾವೈಕ್ಯತೆಯ ಸಾಮರಸ್ಯದ ಉತ್ಸವ. ಉತ್ಸವದ ಸಮಿತಿಗಳೊಂದಿಗೆ ಸಮನ್ವಯತೆ ಸಾಧಿಸಲಾಗಿ, ಎಲ್ಲಾ ಸಹಕಾರನೀಡುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ. ಎಲ್ಲರೂ ಒಟ್ಟಾಗಿ ನಾಡಿನ ಪಾರಂಪರಿಕ ಉತ್ಸವದ ಯಶಸ್ವಿಗೆ ಸಹಕರಿಸೋಣ.”

-ಶಬರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

11 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

13 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

14 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

15 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

16 hours ago