Andolana originals

ಇಂದು ಸಾಮೂಹಿಕ ಗೌರಿ-ಗಣೇಶೋತ್ಸವ ಸಂಭ್ರಮ

೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ 

ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ.

ಪಟ್ಟಣದಲ್ಲಿ ಗೌರಿ-ಗಣೇಶೋತ್ಸವವು ಕೇವಲ ಒಂದು ವರ್ಗ ಇಲ್ಲವೇ ಒಂದು ಪಂಗಡದ ಹಬ್ಬವಾಗಿ ಉಳಿದುಕೊಂಡಿಲ್ಲ. ಬದಲಾಗಿ ಊರ ಹಬ್ಬವೆಂದೆನಿಸಿದೆ. ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಉತ್ಸವದ ಅದ್ಧೂರಿತನ, ಸಂಪ್ರದಾಯ ಹಾಗೂ ಜನತೆಯ ಶ್ರದ್ಧಾ-ಭಕ್ತಿಗೆ ಧಕ್ಕೆಯುಂಟು ಮಾಡಿಲ್ಲ.

ಪಟ್ಟಣ ವ್ಯಾಪ್ತಿಯಲ್ಲಿನ ಸುಮಾರು ೩೦ಕ್ಕೂ ಹೆಚ್ಚಿನ ಸಮಿತಿಗಳು ಸಾಮೂಹಿಕವಾಗಿ ಗೌರಿ-ಗಣೇಶೋತ್ಸವವನ್ನು ಆಚರಿಸಲಿವೆ. ಪಟ್ಟಣದ ಗಡಿಯಾರ ಕಂಬದ ಬಳಿಯ ಮಹಾಗಣಪತಿ ದೇವಾಲಯದಲ್ಲಿ ಆ.೨೭ರಂದು ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಬಳಿಕ ಉಳಿದ ಎಲ್ಲ ಸಮಿತಿಗಳೂ ತಮ್ಮತಮ್ಮ ವೇದಿಕೆಯಲ್ಲಿ ವಿಶೇಷ ಪೂಜಾ ಕಾರ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿವೆ. ಪ್ರತಿನಿತ್ಯ ಸಮಿತಿಗಳಿಂದ ಉತ್ಸವಮೂರ್ತಿಗಳಿಗೆ ತ್ರಿಕಾಲ ಪೂಜೆ ನಡೆಸಲಾಗುತ್ತಿದೆ. ಆಯಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳು, ಇತರ ಪರಿಕರಗಳಿಂದ ಅಲಂಕಾರವನ್ನು ಕೈಗೊಂಡಿವೆ. ಇದರಿಂದ ವಿರಾಜಪೇಟೆ ಪಟ್ಟಣವು ನವವಧುವಿನಂತೆ ಶೃಂಗಾರಗೊಂಡು ಕಂಗೊಳಿಸುತ್ತಿದೆ.

ಸಂಪ್ರದಾಯದಂತೆ ಗೌರಿ ಹಬ್ಬದ ದಿನವಾದ ಆ.೨೬ರಂದು ಪಟ್ಟಣದ ಜೈನರ ಬೀದಿಯಲ್ಲಿನ ಬಸವೇಶ್ವರ ದೇವಾಲಯದ ವತಿಯಿಂದ ಗೌರಮ್ಮನ ಉತ್ಸವಮೂರ್ತಿಯನ್ನು ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ಕೆಲ ಸಮಿತಿಗಳ ವೇದಿಕೆಗಳಲ್ಲಿಉತ್ಸವದ ಬಹುತೇಕ ಎಲ್ಲಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷವೆಂದರೆಈ ಉತ್ಸವವು ಸ್ಥಳೀಯ ಪ್ರತಿಭೆಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವ ಬಹುತೇಕ ಸಮಿತಿಗಳು ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಿವೆ.

ವಿವಿಧ ಸಮಿತಿಗಳು ಉತ್ಸವದ ದಿನಗಳಂದು ಅನ್ನಸಂತರ್ಪಣೆ ಕಾರ್ಯವನ್ನು ಆಯೋಜಿಸಿವೆ. ವಿಶೇಷವಾಗಿ ಪಟ್ಟಣದ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿನ ಶ್ರೀ ಬಾಲಾಂಜನೇಯ ಗಣಪತಿ ಸೇವಾ ಸಮಿತಿ ವತಿಯಿಂದ ಉತ್ಸವದ ೧೧ ದಿನಗಳ ಕಾಲವೂ ರಾತ್ರಿ ಅನ್ನಸಂತರ್ಪಣೆಯನ್ನು ಕೈಗೊಳ್ಳಲಾಗಿತ್ತು.

ಉತ್ಸವ ಮೂರ್ತಿಗಳ ವಿಸರ್ಜನೋತ್ಸವದಂದು ನಡೆಯುವ ಶೋಭಯಾತ್ರೆ ಆಕಷಣೀಯವಾಗಿರಲಿದೆ. ಶೋಭಯಾತ್ರೆಯು ಸೆ.೬ರಂದು ಸಂಜೆ ಆರಂಭಗೊಂಡು ಮರುದಿನ ಮುಂಜಾನೆ ಮುಕ್ತಾಯಗೊಳ್ಳಲಿದೆ. ಈ ಬಾರಿ ಶೋಭಯಾತ್ರೆಯಲ್ಲಿ ೨೨ ಪ್ರಮುಖ ಗಣೇಶೋತ್ಸವ ಸಮಿತಿಗಳು ಭಾಗವಹಿಸಲಿವೆ. ಶೋಭಯಾತ್ರೆಯ ಬಳಿಕ ಉತ್ಸವ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಗೌರಿ ಕೆರೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರ ಮುತುವರ್ಜಿಯಿಂದ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗಿದೆ. ಉತ್ಸವದ ಅಂಗವಾಗಿ ಪೊಲೀಸ್ ಇಲಾಖೆಯು ಸೂಕ್ತಬಂದೋಬಸ್ತ್ ಕೈಗೊಂಡಿದೆ. ಗೌರಿ-ಗಣೇಶೋತ್ಸವವು ಇಲ್ಲಿನ ನಿವಾಸಿಗಳಿಗೆ ಲವಲವಿಕೆಯನ್ನು ತಂದುಕೊಡುವುದರ ಜತೆಗೆ ಉತ್ಸವದ ಅಥವಾ ಶೋಭಯಾತ್ರೆಯ ಮರುದಿನ ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ.

” ವಿರಾಜಪೇಟೆಯ ಗೌರಿ-ಗಣೇಶೋತ್ಸವ ಭಾವೈಕ್ಯತೆಯ ಸಾಮರಸ್ಯದ ಉತ್ಸವ. ಉತ್ಸವದ ಸಮಿತಿಗಳೊಂದಿಗೆ ಸಮನ್ವಯತೆ ಸಾಧಿಸಲಾಗಿ, ಎಲ್ಲಾ ಸಹಕಾರನೀಡುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ. ಎಲ್ಲರೂ ಒಟ್ಟಾಗಿ ನಾಡಿನ ಪಾರಂಪರಿಕ ಉತ್ಸವದ ಯಶಸ್ವಿಗೆ ಸಹಕರಿಸೋಣ.”

-ಶಬರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ

ಆಂದೋಲನ ಡೆಸ್ಕ್

Recent Posts

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

1 hour ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

1 hour ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

1 hour ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

5 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

16 hours ago