Andolana originals

ಗಾಣಿಗ ಮಂಗಲ ಆಶ್ರಮ ಶಾಲೆ ಕಟ್ಟಡ ಕಾಮಗಾರಿ ಪೂರ್ಣ

ಮಹಾದೇಶ್ ಎಂ.ಗೌಡ

ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿರುವ ಗಾಣಿಗ ಮಂಗಲ ಗ್ರಾಮದಲ್ಲಿ ೭.೫ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ಬುಡಕಟ್ಟು ಆಶ್ರಮ ಶಾಲೆಯ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಎಂ.ಆರ್. ಮಂಜುನಾಥ್‌ರವರು ಜ.೧೭ರಂದು ಉದ್ಘಾಟಿಸಲಿದ್ದಾರೆ.

ತಾಲ್ಲೂಕಿನ ಗಡಿಯಂಚಿನ ಗಾಣಿಗ ಮಂಗಲ ಗ್ರಾಮದಲ್ಲಿನ ಆದಿವಾಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ೧೯೬೯ರಲ್ಲಿ ಆಶ್ರಮ ಶಾಲೆ ಪ್ರಾರಂಭ ಮಾಡಲಾಗಿತ್ತು. ಪ್ರಾರಂಭದಲ್ಲಿ ಒಂದರಿಂದ ನಾಲ್ಕನೇ ತರಗತಿಯವರೆಗೆ ವಸತಿ ಶಾಲೆ ನಡೆಯುತ್ತಿತ್ತು. ಪ್ರಸ್ತುತ ೭ನೇ ತರಗತಿಯವರೆಗೆ ವಸತಿ ಶಾಲೆಯನ್ನು ವಿಸ್ತರಿಸಲಾಗಿದ್ದು ಗಾಣಿಗಮಂಗಲ, ಕಳ್ಳಿದೊಡ್ಡಿ, ಬಂಡಳ್ಳಿ, ಶಾಗ್ಯ ಗ್ರಾಮಗಳ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಈ ಶಾಲೆಯಲ್ಲಿ ಆದಿವಾಸಿ ಮಕ್ಕಳ ಜೊತೆಗೆ ಗಾಣಿಗ ಮಂಗಲ ಗ್ರಾಮದಲ್ಲಿ ವಾಸವಾಗಿರುವ ಒಕ್ಕಲಿಗ, ವೀರಶೈವ, ಆದಿ ಜಾಂಬವ (ಮಾದಿಗ) ಸಮುದಾಯದ ವಿದ್ಯಾರ್ಥಿಗಳೂ ಶಿಕ್ಷಣ ಪಡೆದುಕೊಂಡಿರುವುದು ಈ ಗ್ರಾಮದ ವಿಶೇಷವಾಗಿದೆ. ಗಾಣಿಗಮಂಗಲದ ಆಶ್ರಮ ವಸತಿ ಶಾಲೆಯಲ್ಲಿ ೧೨ ಕೊಠಡಿಗಳಿದ್ದು ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದೇ ಕಟ್ಟಡದಲ್ಲಿ ಭೋಜನಾಲಯ, ಕಂಪ್ಯೂಟರ್ ಕೊಠಡಿ, ಆಹಾರ ಸಾಮಗ್ರಿ ದಾಸ್ತಾನು ಕೊಠಡಿ, ಶೌಚಗೃಹ, ಸ್ನಾನಗೃಹವನ್ನು ಒಳಗೊಂಡಿದೆ.

ಶಾಲಾ ಕೊಠಡಿ ಶಿಥಿಲವಾಗಿದ್ದರಿಂದ ಶಾಲೆಯ ಹೊರ ಆವರಣದಲ್ಲಿಯೂ ಪಾಠ ಮಾಡಲಾಗುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.] ಪೋಷಕರು ಸಹ ಹೊಸ ಕಟ್ಟಡ ನಿರ್ಮಾಣ ಮಾಡಿ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು.

ಶಾಸಕ ಮಂಜುನಾಥ್‌ರವರ ಪ್ರಯತ್ನದ ಫಲವಾಗಿ ೭.೫೦ ಕೋಟಿ ರೂ. ವೆಚ್ಚದಲ್ಲಿ ಆಶ್ರಮ ಶಾಲೆ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿರುವುದರಿಂದ  ಪೋಷಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ

” ಗ್ರಾಮದಲ್ಲಿದ್ದ ಆಶ್ರಮ ಶಾಲೆ ಶಿಥಿಲ ಗೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ವಾಸ್ತವ್ಯ ಇರಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿತ್ತು. ಈಗ ಗ್ರಾಮದಲ್ಲಿ ಉತ್ತಮ ಸುಸಜ್ಜಿತ  ಕಟ್ಟಡ ನಿರ್ಮಾಣವಾಗಿರುವುದು ಸಂತಸ ತಂದಿದೆ. ಈ ಶಾಲೆಗೆ ಬೇರೆ ಗ್ರಾಮಗಳಿಂದಲೂ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ನಿರೀಕ್ಷೆ ಇದೆ. ಶಾಗ್ಯ ಗ್ರಾಮದಿಂದ ಗಾಣಿಗ ಮಂಗಲ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಮಾಡಿದರೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ .”

-ನಾಗೇಂದ್ರ, ಅಧ್ಯಕ್ಷರು, ಆದಿವಾಸಿ ಹಿತರಕ್ಷಣಾ ಸಮಿತಿ

” ಕ್ಷೇತ್ರ ವ್ಯಾಪ್ತಿಯಲ್ಲಿರುವ ಆದಿವಾಸಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮವಹಿಸಿದ್ದೇನೆ. ಗಾಣಿಗ ಮಂಗಲ ಗ್ರಾಮದಲ್ಲಿರುವ ವಸತಿ ಶಾಲೆ ಶಿಥಿಲಗೊಂಡಿದ್ದರಿಂದ ೭.೫ ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಹಲವು ಕೇಂದ್ರ ಸ್ಥಾನದಲ್ಲಿ ಭರವಸೆಯ ಬೆಳಕು ಕಾರ್ಯಕ್ರಮದಡಿ ಪ್ರೋತ್ಸಾಹ ನೀಡಲಾಗಿದೆ. ಒಟ್ಟಾರೆ ನಮ್ಮ ಕ್ಷೇತ್ರದ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.”

-ಎಂ.ಆರ್.ಮಂಜುನಾಥ್, ಶಾಸಕರು

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

9 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

10 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

10 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

10 hours ago