Andolana originals

ಗಾಣಿಗ ಮಂಗಲ ಆಶ್ರಮ ಶಾಲೆ ಕಟ್ಟಡ ಕಾಮಗಾರಿ ಪೂರ್ಣ

ಮಹಾದೇಶ್ ಎಂ.ಗೌಡ

ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿರುವ ಗಾಣಿಗ ಮಂಗಲ ಗ್ರಾಮದಲ್ಲಿ ೭.೫ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ಬುಡಕಟ್ಟು ಆಶ್ರಮ ಶಾಲೆಯ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಎಂ.ಆರ್. ಮಂಜುನಾಥ್‌ರವರು ಜ.೧೭ರಂದು ಉದ್ಘಾಟಿಸಲಿದ್ದಾರೆ.

ತಾಲ್ಲೂಕಿನ ಗಡಿಯಂಚಿನ ಗಾಣಿಗ ಮಂಗಲ ಗ್ರಾಮದಲ್ಲಿನ ಆದಿವಾಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ೧೯೬೯ರಲ್ಲಿ ಆಶ್ರಮ ಶಾಲೆ ಪ್ರಾರಂಭ ಮಾಡಲಾಗಿತ್ತು. ಪ್ರಾರಂಭದಲ್ಲಿ ಒಂದರಿಂದ ನಾಲ್ಕನೇ ತರಗತಿಯವರೆಗೆ ವಸತಿ ಶಾಲೆ ನಡೆಯುತ್ತಿತ್ತು. ಪ್ರಸ್ತುತ ೭ನೇ ತರಗತಿಯವರೆಗೆ ವಸತಿ ಶಾಲೆಯನ್ನು ವಿಸ್ತರಿಸಲಾಗಿದ್ದು ಗಾಣಿಗಮಂಗಲ, ಕಳ್ಳಿದೊಡ್ಡಿ, ಬಂಡಳ್ಳಿ, ಶಾಗ್ಯ ಗ್ರಾಮಗಳ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಈ ಶಾಲೆಯಲ್ಲಿ ಆದಿವಾಸಿ ಮಕ್ಕಳ ಜೊತೆಗೆ ಗಾಣಿಗ ಮಂಗಲ ಗ್ರಾಮದಲ್ಲಿ ವಾಸವಾಗಿರುವ ಒಕ್ಕಲಿಗ, ವೀರಶೈವ, ಆದಿ ಜಾಂಬವ (ಮಾದಿಗ) ಸಮುದಾಯದ ವಿದ್ಯಾರ್ಥಿಗಳೂ ಶಿಕ್ಷಣ ಪಡೆದುಕೊಂಡಿರುವುದು ಈ ಗ್ರಾಮದ ವಿಶೇಷವಾಗಿದೆ. ಗಾಣಿಗಮಂಗಲದ ಆಶ್ರಮ ವಸತಿ ಶಾಲೆಯಲ್ಲಿ ೧೨ ಕೊಠಡಿಗಳಿದ್ದು ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದೇ ಕಟ್ಟಡದಲ್ಲಿ ಭೋಜನಾಲಯ, ಕಂಪ್ಯೂಟರ್ ಕೊಠಡಿ, ಆಹಾರ ಸಾಮಗ್ರಿ ದಾಸ್ತಾನು ಕೊಠಡಿ, ಶೌಚಗೃಹ, ಸ್ನಾನಗೃಹವನ್ನು ಒಳಗೊಂಡಿದೆ.

ಶಾಲಾ ಕೊಠಡಿ ಶಿಥಿಲವಾಗಿದ್ದರಿಂದ ಶಾಲೆಯ ಹೊರ ಆವರಣದಲ್ಲಿಯೂ ಪಾಠ ಮಾಡಲಾಗುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.] ಪೋಷಕರು ಸಹ ಹೊಸ ಕಟ್ಟಡ ನಿರ್ಮಾಣ ಮಾಡಿ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು.

ಶಾಸಕ ಮಂಜುನಾಥ್‌ರವರ ಪ್ರಯತ್ನದ ಫಲವಾಗಿ ೭.೫೦ ಕೋಟಿ ರೂ. ವೆಚ್ಚದಲ್ಲಿ ಆಶ್ರಮ ಶಾಲೆ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿರುವುದರಿಂದ  ಪೋಷಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ

” ಗ್ರಾಮದಲ್ಲಿದ್ದ ಆಶ್ರಮ ಶಾಲೆ ಶಿಥಿಲ ಗೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ವಾಸ್ತವ್ಯ ಇರಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿತ್ತು. ಈಗ ಗ್ರಾಮದಲ್ಲಿ ಉತ್ತಮ ಸುಸಜ್ಜಿತ  ಕಟ್ಟಡ ನಿರ್ಮಾಣವಾಗಿರುವುದು ಸಂತಸ ತಂದಿದೆ. ಈ ಶಾಲೆಗೆ ಬೇರೆ ಗ್ರಾಮಗಳಿಂದಲೂ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ನಿರೀಕ್ಷೆ ಇದೆ. ಶಾಗ್ಯ ಗ್ರಾಮದಿಂದ ಗಾಣಿಗ ಮಂಗಲ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಮಾಡಿದರೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ .”

-ನಾಗೇಂದ್ರ, ಅಧ್ಯಕ್ಷರು, ಆದಿವಾಸಿ ಹಿತರಕ್ಷಣಾ ಸಮಿತಿ

” ಕ್ಷೇತ್ರ ವ್ಯಾಪ್ತಿಯಲ್ಲಿರುವ ಆದಿವಾಸಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮವಹಿಸಿದ್ದೇನೆ. ಗಾಣಿಗ ಮಂಗಲ ಗ್ರಾಮದಲ್ಲಿರುವ ವಸತಿ ಶಾಲೆ ಶಿಥಿಲಗೊಂಡಿದ್ದರಿಂದ ೭.೫ ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಹಲವು ಕೇಂದ್ರ ಸ್ಥಾನದಲ್ಲಿ ಭರವಸೆಯ ಬೆಳಕು ಕಾರ್ಯಕ್ರಮದಡಿ ಪ್ರೋತ್ಸಾಹ ನೀಡಲಾಗಿದೆ. ಒಟ್ಟಾರೆ ನಮ್ಮ ಕ್ಷೇತ್ರದ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.”

-ಎಂ.ಆರ್.ಮಂಜುನಾಥ್, ಶಾಸಕರು

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ರಾಹುಲ್‌ ಗಾಂಧಿ ಸ್ವಾಗತಿಸಿದ ಸಿಎಂ ಹಾಗೂ ಡಿಸಿಎಂ

ಮೈಸೂರು: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರು.…

7 mins ago

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್…

23 mins ago

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

49 mins ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

52 mins ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್…

58 mins ago

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

2 hours ago