ಮಹಾದೇಶ್ ಎಂ.ಗೌಡ
ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ
ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿರುವ ಗಾಣಿಗ ಮಂಗಲ ಗ್ರಾಮದಲ್ಲಿ ೭.೫ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ಬುಡಕಟ್ಟು ಆಶ್ರಮ ಶಾಲೆಯ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಎಂ.ಆರ್. ಮಂಜುನಾಥ್ರವರು ಜ.೧೭ರಂದು ಉದ್ಘಾಟಿಸಲಿದ್ದಾರೆ.
ತಾಲ್ಲೂಕಿನ ಗಡಿಯಂಚಿನ ಗಾಣಿಗ ಮಂಗಲ ಗ್ರಾಮದಲ್ಲಿನ ಆದಿವಾಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ೧೯೬೯ರಲ್ಲಿ ಆಶ್ರಮ ಶಾಲೆ ಪ್ರಾರಂಭ ಮಾಡಲಾಗಿತ್ತು. ಪ್ರಾರಂಭದಲ್ಲಿ ಒಂದರಿಂದ ನಾಲ್ಕನೇ ತರಗತಿಯವರೆಗೆ ವಸತಿ ಶಾಲೆ ನಡೆಯುತ್ತಿತ್ತು. ಪ್ರಸ್ತುತ ೭ನೇ ತರಗತಿಯವರೆಗೆ ವಸತಿ ಶಾಲೆಯನ್ನು ವಿಸ್ತರಿಸಲಾಗಿದ್ದು ಗಾಣಿಗಮಂಗಲ, ಕಳ್ಳಿದೊಡ್ಡಿ, ಬಂಡಳ್ಳಿ, ಶಾಗ್ಯ ಗ್ರಾಮಗಳ ಎಸ್ಟಿ ಸಮುದಾಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಈ ಶಾಲೆಯಲ್ಲಿ ಆದಿವಾಸಿ ಮಕ್ಕಳ ಜೊತೆಗೆ ಗಾಣಿಗ ಮಂಗಲ ಗ್ರಾಮದಲ್ಲಿ ವಾಸವಾಗಿರುವ ಒಕ್ಕಲಿಗ, ವೀರಶೈವ, ಆದಿ ಜಾಂಬವ (ಮಾದಿಗ) ಸಮುದಾಯದ ವಿದ್ಯಾರ್ಥಿಗಳೂ ಶಿಕ್ಷಣ ಪಡೆದುಕೊಂಡಿರುವುದು ಈ ಗ್ರಾಮದ ವಿಶೇಷವಾಗಿದೆ. ಗಾಣಿಗಮಂಗಲದ ಆಶ್ರಮ ವಸತಿ ಶಾಲೆಯಲ್ಲಿ ೧೨ ಕೊಠಡಿಗಳಿದ್ದು ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದೇ ಕಟ್ಟಡದಲ್ಲಿ ಭೋಜನಾಲಯ, ಕಂಪ್ಯೂಟರ್ ಕೊಠಡಿ, ಆಹಾರ ಸಾಮಗ್ರಿ ದಾಸ್ತಾನು ಕೊಠಡಿ, ಶೌಚಗೃಹ, ಸ್ನಾನಗೃಹವನ್ನು ಒಳಗೊಂಡಿದೆ.
ಶಾಲಾ ಕೊಠಡಿ ಶಿಥಿಲವಾಗಿದ್ದರಿಂದ ಶಾಲೆಯ ಹೊರ ಆವರಣದಲ್ಲಿಯೂ ಪಾಠ ಮಾಡಲಾಗುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.] ಪೋಷಕರು ಸಹ ಹೊಸ ಕಟ್ಟಡ ನಿರ್ಮಾಣ ಮಾಡಿ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು.
ಶಾಸಕ ಮಂಜುನಾಥ್ರವರ ಪ್ರಯತ್ನದ ಫಲವಾಗಿ ೭.೫೦ ಕೋಟಿ ರೂ. ವೆಚ್ಚದಲ್ಲಿ ಆಶ್ರಮ ಶಾಲೆ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿರುವುದರಿಂದ ಪೋಷಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ
” ಗ್ರಾಮದಲ್ಲಿದ್ದ ಆಶ್ರಮ ಶಾಲೆ ಶಿಥಿಲ ಗೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ವಾಸ್ತವ್ಯ ಇರಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿತ್ತು. ಈಗ ಗ್ರಾಮದಲ್ಲಿ ಉತ್ತಮ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿರುವುದು ಸಂತಸ ತಂದಿದೆ. ಈ ಶಾಲೆಗೆ ಬೇರೆ ಗ್ರಾಮಗಳಿಂದಲೂ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ನಿರೀಕ್ಷೆ ಇದೆ. ಶಾಗ್ಯ ಗ್ರಾಮದಿಂದ ಗಾಣಿಗ ಮಂಗಲ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಮಾಡಿದರೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ .”
-ನಾಗೇಂದ್ರ, ಅಧ್ಯಕ್ಷರು, ಆದಿವಾಸಿ ಹಿತರಕ್ಷಣಾ ಸಮಿತಿ
” ಕ್ಷೇತ್ರ ವ್ಯಾಪ್ತಿಯಲ್ಲಿರುವ ಆದಿವಾಸಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮವಹಿಸಿದ್ದೇನೆ. ಗಾಣಿಗ ಮಂಗಲ ಗ್ರಾಮದಲ್ಲಿರುವ ವಸತಿ ಶಾಲೆ ಶಿಥಿಲಗೊಂಡಿದ್ದರಿಂದ ೭.೫ ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಹಲವು ಕೇಂದ್ರ ಸ್ಥಾನದಲ್ಲಿ ಭರವಸೆಯ ಬೆಳಕು ಕಾರ್ಯಕ್ರಮದಡಿ ಪ್ರೋತ್ಸಾಹ ನೀಡಲಾಗಿದೆ. ಒಟ್ಟಾರೆ ನಮ್ಮ ಕ್ಷೇತ್ರದ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.”
-ಎಂ.ಆರ್.ಮಂಜುನಾಥ್, ಶಾಸಕರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…