Andolana originals

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಕಸ ವಿಲೇವಾರಿ: ಅನೈರ್ಮಲ್ಯ ಭೀತಿ

ಪಿ.ಶಿವಕುಮಾರ್

ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ಕಾರ್ಯವೈಖರಿಗೆ ಗ್ರಾಮಸ್ಥರ ಆಕ್ರೋಶ 

ದೊಡ್ಡ ಕವಲಂದೆ: ಚಾಮರಾಜನಗರ, ನಂಜನಗೂಡು, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವ ಸಾವಿರಾರು ವಾಹನಗಳು ಮತ್ತು ಪ್ರಯಾಣಿಕರಿಗೆ ರಸ್ತೆಯ ಬದಿಯಲ್ಲಿ ಬಿದ್ದಿರುವ ಕಸದ ರಾಶಿ ಸ್ವಾಗತ ಕೋರುತ್ತಿದೆ.

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ೧೫೦ರಲ್ಲಿ ಬರುವ ರಸ್ತೆಯಲ್ಲಿ ಕಸದ ಕಿರಿಕಿರಿ ಉಂಟಾಗಿದೆ.

ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಯಕಸ ವಿಲೇವಾರಿ ವಾಹನದಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ಕಸ ಹಾಕಲಾಗುತ್ತಿದೆ. ಅಲ್ಲದೆ ಕವಲಂದೆ ಗ್ರಾಮದಿಂದ ಚುಂಚನಹಳ್ಳಿ, ಉಮ್ಮತ್ತೂರು , ಕೊಳ್ಳೇಗಾಲ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲೂ ಕವಲಂದೆ ಗ್ರಾಪಂನ ಕಸದ ವಾಹನದ ಚಾಲಕ ರಸ್ತೆಯ ಎರಡು ಬದಿಯಲ್ಲಿ ಕಸ ಸುರಿದು ಹೋಗುತ್ತಿದ್ದಾನೆ. ಇನ್ನು ದೊಡ್ಡ ಕವಲಂದೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದಲ್ಲೂ ಕಸವನ್ನು ಸುರಿಯಲಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ರಸ್ತೆಗಳ ಅಂಚಿನಲ್ಲಿ ಅಪಾಯಕಾರಿ ತ್ಯಾಜ್ಯವನ್ನು ಬೀಸಾಡುವುದಲ್ಲದೆ ಅದಕ್ಕೆ ಬೆಂಕಿ ಹಚ್ಚಲಾಗುತ್ತಿದೆ. ಇದರಿಂದ ರಸ್ತೆಗೆ ದಟ್ಟ ಹೊಗೆ ಆವರಿಸಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೆ ಕಸದಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸೇರಿ ವಿಷಕಾರಕ ವಸ್ತುಗಳನ್ನು ಸುಡುವುದರಿಂದ ಬರುವ ಹೊಗೆಯಿಂದ ಅಸ್ತಮಾ ಮತ್ತು ಶ್ವಾಸಕೋಶ ಕಾಯಿಲೆ ಇರುವ ರೋಗಿಗಳಿಗೆ ಕಂಟಕ ಎದುರಾಗಿದೆ. ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಸ ವಿಲೇವಾರಿ ಘಟಕ ಮಾಡದೆ ರಸ್ತೆಗಳ ಬದಿಯಲ್ಲಿ ಕಸವನ್ನು ವಿಲೇವಾರಿ ಮಾಡಲಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಕಸ ವಿಲೇವಾರಿ ಮಾಡುತ್ತಿರುವ ವಾಹನದ ಚಾಲಕ ಮತ್ತು ಗ್ರಾಮ ಪಂಚಾಯಿತಿ ಅಽಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

” ಹೆದ್ದಾರಿಯ ಬದಿಗಳಲ್ಲಿ ಕಸ ವಿಲೇವಾರಿ ಮಾಡಬಾರದು. ಜಾಗದ ಸಮಸ್ಯೆ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕಗಳು ಇಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ತಾತ್ಕಾಲಿಕವಾಗಿ ಕಸ ವಿಲೇವಾರಿ ಘಟಕ ನಿರ್ಮಿಸಿ, ಕಸ ವಿಲೇವಾರಿ ಮಾಡಬೇಕು. ಈ ಬಗ್ಗೆ ಪಿಡಿಒ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು.”

-ಜೆರಾಲ್ಡ್ ರಾಜೇಶ್, ತಾಪಂ ಇಒ, ನಂಜನಗೂಡು.

”  ಹೆದ್ದಾರಿಯ ಎರಡೂ ಬದಿಯಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದ್ದು, ಇದರಿಂದ ನಮ್ಮ ಗ್ರಾಮೀಣ ಭಾಗದ ಸೌಂದರ್ಯ ಹಾಳಾಗುತ್ತಿದೆ. ದೊಡ್ಡ ಕವಲಂದೆ ಗ್ರಾಪಂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸಂಗ್ರಹಿಸಿದ ಕಸವನ್ನು ವಿಲೇವಾರಿ ಘಟಕದಲ್ಲಿಯೇ ವಿಲೇವಾರಿ ಮಾಡಬೇಕು ಎಂಬ ನಿಯಮ ಇದ್ದರೂ ಇದನ್ನು ಗಾಳಿಗೆ ತೂರಿ, ನಂಜನಗೂಡು ಮತ್ತು ಚಾ.ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ಚುಂಚನಹಳ್ಳಿ ರಸ್ತೆ, ಸರ್ಕಾರಿ ಕಾಲೇಜಿನ ಮುಂಭಾಗದಲ್ಲೂ ಕಸ ಸುರಿಯಲಾಗುತ್ತಿದೆ. ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.”

-ಗಟ್ಟವಾಡಿ ಮಹೇಶ್, ದಸಂಸ ತಾಲ್ಲೂಕು ಸಂಚಾಲಕ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

4 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago