ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ
ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಾಗಿ ವಾಸಿಸುವ ಜಯಲಕ್ಷ್ಮೀ ಪುರಂ ೫ನೇ ಮೇನ್ನ ೩ನೇ ಬ್ಲಾಕ್ನ ರಸ್ತೆಯು ಕಸದ ಪ್ರದೇಶವಾಗಿ ಮಾರ್ಪಟ್ಟಿದೆ.
ಕೆಲವು ನಿವಾಸಿಗಳು, ತರಕಾರಿ ಮಾರಾಟದ ವ್ಯಾಪಾರಿಗಳು ಮತ್ತು ಆಹಾರ ಟ್ರಕ್ ಚಾಲಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದ ಈ ರಸ್ತೆಯು ಕಸದ ಕೊಂಪೆಯಾಗಿಬದ ಲಾಗಿದೆ. ಜೊತೆಗೆ ಕೆಲವೊಮ್ಮೆ ಇದಕ್ಕೆ ಬೆಂಕಿಯನ್ನೂ ಹಚ್ಚಲಾಗುತ್ತಿದ್ದು, ಇದರಿಂದ ಹೊರಬರುವ ದಟ್ಟ ಹೊಗೆಯು ರೋಗಗಳನ್ನು ಹರಡುತ್ತಿದೆ.
ಇತ್ತೀಚೆಗೆ ನಾಲ್ಕು ಪ್ರತ್ಯೇಕ ಸ್ಥಳಗಳಲ್ಲಿ ಕಸಕ್ಕೆ ಬೆಂಕಿ ಹಚ್ಚಿದ ಪರಿಣಾಮ ನಿವಾಸಿಗಳೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿದ್ದರು. ಆದರೆ, ಇಂದಿಗೂ ಕಸ ಹಾಕುವುದು, ಕಸಕ್ಕೆ ಬೆಂಕಿ ಹಚ್ಚಿ ಹೋಗುವುದು ಮಾತ್ರ ನಿಂತಿಲ್ಲ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ಜನರ ಆರೋಗ್ಯವೂ ಹದಗೆಡುತ್ತಿದೆ. ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರಿಗೆ ಉಸಿರಾಟದ ಸಮಸ್ಯೆ ಕಾಡತೊಡಗಿದೆ.
ಕಸ ಹಾಗೂ ಪ್ಲಾಸ್ಟಿಕ್ ಸುಡುತ್ತಿರುವುದರಿಂದ ಉತ್ಪತ್ತಿಯಾಗುವ ವಿಷಕಾರಿ ಹೊಗೆಯು ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರಿಗೆ ಶ್ವಾಸಕೋಶದ ಸಮಸ್ಯೆ, ಕಣ್ಣಿನ ರೋಗಗಳು, ಅಲರ್ಜಿ ಮತ್ತು ಇನ್ನಿತರೆ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸ್ವಚ್ಛತೆಗೆ ಒತ್ತು ಕೊಡಬೇಕು. ಅಧಿಕಾರಿಗಳು ತ್ವರಿತವಾಗಿ ಕ್ರಮವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮೂತ್ರ ವಿಸರ್ಜನೆಯ ತಾಣ: ಜನರು ಈ ರಸ್ತೆಯನ್ನು ಸಾರ್ವಜನಿಕ ಶೌಚಾಲಯದಂತೆ ಬಳಸುತ್ತಿದ್ದಾರೆ. ಕೆಲವರು ವಾಹನಗಳಲ್ಲಿ ಬಂದು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ಈ ಪ್ರದೇಶದ ನಿವಾಸಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಕೂಡಲೇ ಈ ಪ್ರದೇಶದಲ್ಲಿ ಪೊಲೀಸ್ ಗಸ್ತು ನಿಯೋಜಿಸಬೇಕು. ಕಸ ಎಸೆಯದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕಸದ ಬುಟ್ಟಿಗಳನ್ನು ಇಡಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
” ಸುಶಿಕ್ಷಿತರೇ ಕಸ ಎಸೆದು ಹೋಗುತ್ತಾರೆ. ಕೊನೆಗೆ ಅದಕ್ಕೆ ಬೆಂಕಿ ಹಚ್ಚುತ್ತಾರೆ. ಇದರಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳು ತುಂಬಾ ಗಂಭೀರವಾಗಿವೆ. ನಮ್ಮ ಮನೆಯಲ್ಲಿ ಹಿರಿಯರಿದ್ದಾರೆ. ಅವರಿಗೆ ಕೆಮ್ಮು ಬರುತ್ತಿದ್ದು, ಕಣ್ಣುಗಳು ಉರಿಯುತ್ತವೆ. ನಾವು ಈ ಕುರಿತು ನಗರಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ.”
-ಸುನೀತಾ ರಾವ್, ನಿವಾಸಿ, ಜಯಲಕ್ಷ್ಮೀಪುರಂ
” ನಾವು ಸ್ವಚ್ಛಗೊಳಿಸುತ್ತಲೇ ಇದ್ದೇವೆ. ಜನರು ತಂದು ಹಾಕುತ್ತಲೇ ಇದ್ದಾರೆ. ಕೊನೆಗೆ ಯಾರೋ ಅದಕ್ಕೆ ಬೆಂಕಿ ಹಚ್ಚಿ ಹೋಗುತ್ತಾರೆ. ಜನರು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆಯುವ ಬದಲು ಅದನ್ನು ತಮ್ಮ ಮನೆಯಲ್ಲೇ ಬೇರ್ಪಡಿಸಿ ಕಸ ಸಂಗ್ರಹಿಸಲು ಬಂದವರಿಗೆ ಕೊಡಬೇಕು. ಇದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯ.”
-ಪುಟ್ಟರಾಜು, ಮೇಸ್ತ್ರಿ, ನಗರಪಾಲಿಕೆ
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…