Andolana originals

ಕಸಕ್ಕೆ ಬೆಂಕಿ: ದಟ್ಟ ಹೊಗೆಯಿಂದ ಸಂಕಷ್ಟ

ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ 

ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಾಗಿ ವಾಸಿಸುವ ಜಯಲಕ್ಷ್ಮೀ ಪುರಂ ೫ನೇ ಮೇನ್‌ನ ೩ನೇ ಬ್ಲಾಕ್‌ನ ರಸ್ತೆಯು ಕಸದ ಪ್ರದೇಶವಾಗಿ ಮಾರ್ಪಟ್ಟಿದೆ.

ಕೆಲವು ನಿವಾಸಿಗಳು, ತರಕಾರಿ ಮಾರಾಟದ ವ್ಯಾಪಾರಿಗಳು ಮತ್ತು ಆಹಾರ ಟ್ರಕ್ ಚಾಲಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದ ಈ ರಸ್ತೆಯು ಕಸದ ಕೊಂಪೆಯಾಗಿಬದ ಲಾಗಿದೆ. ಜೊತೆಗೆ ಕೆಲವೊಮ್ಮೆ ಇದಕ್ಕೆ ಬೆಂಕಿಯನ್ನೂ ಹಚ್ಚಲಾಗುತ್ತಿದ್ದು, ಇದರಿಂದ ಹೊರಬರುವ ದಟ್ಟ ಹೊಗೆಯು ರೋಗಗಳನ್ನು ಹರಡುತ್ತಿದೆ.

ಇತ್ತೀಚೆಗೆ ನಾಲ್ಕು ಪ್ರತ್ಯೇಕ ಸ್ಥಳಗಳಲ್ಲಿ ಕಸಕ್ಕೆ ಬೆಂಕಿ ಹಚ್ಚಿದ ಪರಿಣಾಮ ನಿವಾಸಿಗಳೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿದ್ದರು. ಆದರೆ, ಇಂದಿಗೂ ಕಸ ಹಾಕುವುದು, ಕಸಕ್ಕೆ ಬೆಂಕಿ ಹಚ್ಚಿ ಹೋಗುವುದು ಮಾತ್ರ ನಿಂತಿಲ್ಲ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ಜನರ ಆರೋಗ್ಯವೂ ಹದಗೆಡುತ್ತಿದೆ. ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರಿಗೆ ಉಸಿರಾಟದ ಸಮಸ್ಯೆ ಕಾಡತೊಡಗಿದೆ.

ಕಸ ಹಾಗೂ ಪ್ಲಾಸ್ಟಿಕ್ ಸುಡುತ್ತಿರುವುದರಿಂದ ಉತ್ಪತ್ತಿಯಾಗುವ ವಿಷಕಾರಿ ಹೊಗೆಯು ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರಿಗೆ ಶ್ವಾಸಕೋಶದ ಸಮಸ್ಯೆ, ಕಣ್ಣಿನ ರೋಗಗಳು, ಅಲರ್ಜಿ ಮತ್ತು ಇನ್ನಿತರೆ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸ್ವಚ್ಛತೆಗೆ ಒತ್ತು ಕೊಡಬೇಕು. ಅಧಿಕಾರಿಗಳು ತ್ವರಿತವಾಗಿ ಕ್ರಮವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮೂತ್ರ ವಿಸರ್ಜನೆಯ ತಾಣ: ಜನರು ಈ ರಸ್ತೆಯನ್ನು ಸಾರ್ವಜನಿಕ ಶೌಚಾಲಯದಂತೆ ಬಳಸುತ್ತಿದ್ದಾರೆ. ಕೆಲವರು ವಾಹನಗಳಲ್ಲಿ ಬಂದು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ಈ ಪ್ರದೇಶದ ನಿವಾಸಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಕೂಡಲೇ ಈ ಪ್ರದೇಶದಲ್ಲಿ ಪೊಲೀಸ್ ಗಸ್ತು ನಿಯೋಜಿಸಬೇಕು. ಕಸ ಎಸೆಯದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕಸದ ಬುಟ್ಟಿಗಳನ್ನು ಇಡಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

” ಸುಶಿಕ್ಷಿತರೇ ಕಸ ಎಸೆದು ಹೋಗುತ್ತಾರೆ. ಕೊನೆಗೆ ಅದಕ್ಕೆ ಬೆಂಕಿ ಹಚ್ಚುತ್ತಾರೆ. ಇದರಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳು ತುಂಬಾ ಗಂಭೀರವಾಗಿವೆ. ನಮ್ಮ ಮನೆಯಲ್ಲಿ ಹಿರಿಯರಿದ್ದಾರೆ. ಅವರಿಗೆ ಕೆಮ್ಮು ಬರುತ್ತಿದ್ದು, ಕಣ್ಣುಗಳು ಉರಿಯುತ್ತವೆ. ನಾವು ಈ ಕುರಿತು ನಗರಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ.”

-ಸುನೀತಾ ರಾವ್, ನಿವಾಸಿ, ಜಯಲಕ್ಷ್ಮೀಪುರಂ

” ನಾವು ಸ್ವಚ್ಛಗೊಳಿಸುತ್ತಲೇ ಇದ್ದೇವೆ. ಜನರು ತಂದು ಹಾಕುತ್ತಲೇ ಇದ್ದಾರೆ. ಕೊನೆಗೆ ಯಾರೋ ಅದಕ್ಕೆ ಬೆಂಕಿ ಹಚ್ಚಿ ಹೋಗುತ್ತಾರೆ. ಜನರು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆಯುವ ಬದಲು ಅದನ್ನು ತಮ್ಮ ಮನೆಯಲ್ಲೇ ಬೇರ್ಪಡಿಸಿ ಕಸ ಸಂಗ್ರಹಿಸಲು ಬಂದವರಿಗೆ ಕೊಡಬೇಕು. ಇದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯ.”

-ಪುಟ್ಟರಾಜು, ಮೇಸ್ತ್ರಿ, ನಗರಪಾಲಿಕೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

35 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

37 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

40 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

43 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

54 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

58 mins ago