Andolana originals

ಕಸಕ್ಕೆ ಬೆಂಕಿ: ದಟ್ಟ ಹೊಗೆಯಿಂದ ಸಂಕಷ್ಟ

ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ 

ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಾಗಿ ವಾಸಿಸುವ ಜಯಲಕ್ಷ್ಮೀ ಪುರಂ ೫ನೇ ಮೇನ್‌ನ ೩ನೇ ಬ್ಲಾಕ್‌ನ ರಸ್ತೆಯು ಕಸದ ಪ್ರದೇಶವಾಗಿ ಮಾರ್ಪಟ್ಟಿದೆ.

ಕೆಲವು ನಿವಾಸಿಗಳು, ತರಕಾರಿ ಮಾರಾಟದ ವ್ಯಾಪಾರಿಗಳು ಮತ್ತು ಆಹಾರ ಟ್ರಕ್ ಚಾಲಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದ ಈ ರಸ್ತೆಯು ಕಸದ ಕೊಂಪೆಯಾಗಿಬದ ಲಾಗಿದೆ. ಜೊತೆಗೆ ಕೆಲವೊಮ್ಮೆ ಇದಕ್ಕೆ ಬೆಂಕಿಯನ್ನೂ ಹಚ್ಚಲಾಗುತ್ತಿದ್ದು, ಇದರಿಂದ ಹೊರಬರುವ ದಟ್ಟ ಹೊಗೆಯು ರೋಗಗಳನ್ನು ಹರಡುತ್ತಿದೆ.

ಇತ್ತೀಚೆಗೆ ನಾಲ್ಕು ಪ್ರತ್ಯೇಕ ಸ್ಥಳಗಳಲ್ಲಿ ಕಸಕ್ಕೆ ಬೆಂಕಿ ಹಚ್ಚಿದ ಪರಿಣಾಮ ನಿವಾಸಿಗಳೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿದ್ದರು. ಆದರೆ, ಇಂದಿಗೂ ಕಸ ಹಾಕುವುದು, ಕಸಕ್ಕೆ ಬೆಂಕಿ ಹಚ್ಚಿ ಹೋಗುವುದು ಮಾತ್ರ ನಿಂತಿಲ್ಲ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ಜನರ ಆರೋಗ್ಯವೂ ಹದಗೆಡುತ್ತಿದೆ. ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರಿಗೆ ಉಸಿರಾಟದ ಸಮಸ್ಯೆ ಕಾಡತೊಡಗಿದೆ.

ಕಸ ಹಾಗೂ ಪ್ಲಾಸ್ಟಿಕ್ ಸುಡುತ್ತಿರುವುದರಿಂದ ಉತ್ಪತ್ತಿಯಾಗುವ ವಿಷಕಾರಿ ಹೊಗೆಯು ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರಿಗೆ ಶ್ವಾಸಕೋಶದ ಸಮಸ್ಯೆ, ಕಣ್ಣಿನ ರೋಗಗಳು, ಅಲರ್ಜಿ ಮತ್ತು ಇನ್ನಿತರೆ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸ್ವಚ್ಛತೆಗೆ ಒತ್ತು ಕೊಡಬೇಕು. ಅಧಿಕಾರಿಗಳು ತ್ವರಿತವಾಗಿ ಕ್ರಮವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮೂತ್ರ ವಿಸರ್ಜನೆಯ ತಾಣ: ಜನರು ಈ ರಸ್ತೆಯನ್ನು ಸಾರ್ವಜನಿಕ ಶೌಚಾಲಯದಂತೆ ಬಳಸುತ್ತಿದ್ದಾರೆ. ಕೆಲವರು ವಾಹನಗಳಲ್ಲಿ ಬಂದು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ಈ ಪ್ರದೇಶದ ನಿವಾಸಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಕೂಡಲೇ ಈ ಪ್ರದೇಶದಲ್ಲಿ ಪೊಲೀಸ್ ಗಸ್ತು ನಿಯೋಜಿಸಬೇಕು. ಕಸ ಎಸೆಯದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕಸದ ಬುಟ್ಟಿಗಳನ್ನು ಇಡಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

” ಸುಶಿಕ್ಷಿತರೇ ಕಸ ಎಸೆದು ಹೋಗುತ್ತಾರೆ. ಕೊನೆಗೆ ಅದಕ್ಕೆ ಬೆಂಕಿ ಹಚ್ಚುತ್ತಾರೆ. ಇದರಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳು ತುಂಬಾ ಗಂಭೀರವಾಗಿವೆ. ನಮ್ಮ ಮನೆಯಲ್ಲಿ ಹಿರಿಯರಿದ್ದಾರೆ. ಅವರಿಗೆ ಕೆಮ್ಮು ಬರುತ್ತಿದ್ದು, ಕಣ್ಣುಗಳು ಉರಿಯುತ್ತವೆ. ನಾವು ಈ ಕುರಿತು ನಗರಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ.”

-ಸುನೀತಾ ರಾವ್, ನಿವಾಸಿ, ಜಯಲಕ್ಷ್ಮೀಪುರಂ

” ನಾವು ಸ್ವಚ್ಛಗೊಳಿಸುತ್ತಲೇ ಇದ್ದೇವೆ. ಜನರು ತಂದು ಹಾಕುತ್ತಲೇ ಇದ್ದಾರೆ. ಕೊನೆಗೆ ಯಾರೋ ಅದಕ್ಕೆ ಬೆಂಕಿ ಹಚ್ಚಿ ಹೋಗುತ್ತಾರೆ. ಜನರು ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆಯುವ ಬದಲು ಅದನ್ನು ತಮ್ಮ ಮನೆಯಲ್ಲೇ ಬೇರ್ಪಡಿಸಿ ಕಸ ಸಂಗ್ರಹಿಸಲು ಬಂದವರಿಗೆ ಕೊಡಬೇಕು. ಇದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯ.”

-ಪುಟ್ಟರಾಜು, ಮೇಸ್ತ್ರಿ, ನಗರಪಾಲಿಕೆ

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

5 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

6 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

7 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

7 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

8 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

10 hours ago