Andolana originals

ರಾಮಾನುಜ ರಸ್ತೆ ಬದಿಯಲ್ಲಿ ಕಸದ ರಾಶಿ

ಮೈಸೂರು: ನಗರದ ರಾಮಾನುಜ ರಸ್ತೆಯ ೧೭ ಕ್ರಾಸ್‌ನ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆರಾಚುತ್ತಿದೆ. ಈಗ ಮಳೆ ಬೀಳುತ್ತಿರುವುದರಿಂದ ಕಸದ ರಾಶಿ ಕೊಳೆತು ನಾರುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವುದು ಅನಿವಾರ್ಯವಾಗಿದೆ.

ಮಹಾನಗರ ಪಾಲಿಕೆಯವರು ನಿಯಮಿತವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಕಸದ ರಾಶಿ ಕಂಡು ಬರುತ್ತಿದ್ದು, ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳು ಕಸವನ್ನು ಹರಡುತ್ತಿರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿಸುವ ವಾಹನವು ಪ್ರತಿದಿನವೂ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಬಾಗಿಲಿಗೆ ಆಗಮಿಸುತ್ತಿದ್ದರೂ ಸಾರ್ವಜನಿಕರು ಪ್ರತಿದಿನ ರಾತ್ರಿ ವೇಳೆ ಕಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಇಲ್ಲಿಗೆ ಎಸೆಯುತ್ತಿದ್ದಾರೆ.

ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇ ಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರುರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಆಪಾದಿಸಿದ್ದಾರೆ.

” ರಾತ್ರಿ ವೇಳೆ ಫಾಸ್ಟ್‌ಫುಡ್‌  ವ್ಯಾಪಾರಿಗಳು ಹಾಗೂ ಅಕ್ಕಪಕ್ಕದ ಮನೆಯವರು ಕಸವನ್ನು ತಂದು ಹಾಕುತ್ತಿದ್ದಾರೆ. ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಸದ ದುರ್ವಾಸನೆಯಿಂದ ಮನೆಯಲ್ಲಿ ಇರಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”

– ಡಾ.ಪಂಡಿತಾರಾಧ್ಯ, ಸ್ಥಳೀಯ ನಿವಾಸಿ

” ಮಹಾನಗರ ಪಾಲಿಕೆಯವರು ಕಸವನ್ನು ತೆರವುಗೊಳಿಸಿದರೂ ರಸ್ತೆಯಲ್ಲೇ ಕಸವನ್ನು ತೆಗೆದು ಸ್ವಚ್ಛಗೊಳಿಸಿದರೂ ರಾತ್ರಿ ವೇಳೆ ಹೋಟೆಲ್‌ಗಳವರು ತ್ಯಾಜ್ಯವನ್ನು ಎಸೆಯುತ್ತಿದ್ದಾರೆ. ಕಸದ ದುರ್ವಾಸನೆಯಿಂದ ರೋಗಗಳು ಹರಡುವ ಭೀತಿಎದುರಾಗಿದೆ.”

 -ಆನಂದ್, ಸ್ಥಳೀಯ ನಿವಾಸಿ

ಆಂದೋಲನ ಡೆಸ್ಕ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

11 mins ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

2 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

3 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

4 hours ago