Andolana originals

ರಾಮಾನುಜ ರಸ್ತೆ ಬದಿಯಲ್ಲಿ ಕಸದ ರಾಶಿ

ಮೈಸೂರು: ನಗರದ ರಾಮಾನುಜ ರಸ್ತೆಯ ೧೭ ಕ್ರಾಸ್‌ನ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆರಾಚುತ್ತಿದೆ. ಈಗ ಮಳೆ ಬೀಳುತ್ತಿರುವುದರಿಂದ ಕಸದ ರಾಶಿ ಕೊಳೆತು ನಾರುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವುದು ಅನಿವಾರ್ಯವಾಗಿದೆ.

ಮಹಾನಗರ ಪಾಲಿಕೆಯವರು ನಿಯಮಿತವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಕಸದ ರಾಶಿ ಕಂಡು ಬರುತ್ತಿದ್ದು, ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳು ಕಸವನ್ನು ಹರಡುತ್ತಿರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿಸುವ ವಾಹನವು ಪ್ರತಿದಿನವೂ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಬಾಗಿಲಿಗೆ ಆಗಮಿಸುತ್ತಿದ್ದರೂ ಸಾರ್ವಜನಿಕರು ಪ್ರತಿದಿನ ರಾತ್ರಿ ವೇಳೆ ಕಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಇಲ್ಲಿಗೆ ಎಸೆಯುತ್ತಿದ್ದಾರೆ.

ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇ ಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರುರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಆಪಾದಿಸಿದ್ದಾರೆ.

” ರಾತ್ರಿ ವೇಳೆ ಫಾಸ್ಟ್‌ಫುಡ್‌  ವ್ಯಾಪಾರಿಗಳು ಹಾಗೂ ಅಕ್ಕಪಕ್ಕದ ಮನೆಯವರು ಕಸವನ್ನು ತಂದು ಹಾಕುತ್ತಿದ್ದಾರೆ. ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಸದ ದುರ್ವಾಸನೆಯಿಂದ ಮನೆಯಲ್ಲಿ ಇರಲು ಕಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”

– ಡಾ.ಪಂಡಿತಾರಾಧ್ಯ, ಸ್ಥಳೀಯ ನಿವಾಸಿ

” ಮಹಾನಗರ ಪಾಲಿಕೆಯವರು ಕಸವನ್ನು ತೆರವುಗೊಳಿಸಿದರೂ ರಸ್ತೆಯಲ್ಲೇ ಕಸವನ್ನು ತೆಗೆದು ಸ್ವಚ್ಛಗೊಳಿಸಿದರೂ ರಾತ್ರಿ ವೇಳೆ ಹೋಟೆಲ್‌ಗಳವರು ತ್ಯಾಜ್ಯವನ್ನು ಎಸೆಯುತ್ತಿದ್ದಾರೆ. ಕಸದ ದುರ್ವಾಸನೆಯಿಂದ ರೋಗಗಳು ಹರಡುವ ಭೀತಿಎದುರಾಗಿದೆ.”

 -ಆನಂದ್, ಸ್ಥಳೀಯ ನಿವಾಸಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago