ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ ದುರ್ವಾಸನೆ ಅಡರುತ್ತಿದೆ.
ಈ ರಸ್ತೆಯ ಬದಿಯಲ್ಲಿ ಕಸ ಎಸೆಯುವುದು ಸಾಮಾನ್ಯ ಸಂಗತಿಯಂತೆಯೇ ಆಗಿದೆ. ಈ ನಡುವೆ ಇಲ್ಲಿ ಬೀಸಾಡಿದ ಕಸವನ್ನು ತೆರವು ಗೊಳಿಸ ದಿರುವುದರಿಂದ ಕಸ ರಾಶಿ ರಾಶಿಯಾಗಿ ಹರಡಿ ಕೊಂಡಿದೆ. ಕಸ ಕೊಳೆತು ವಾಸನೆ ಬರುತ್ತಿರುವುದರಿಂದ ರಸ್ತೆಯಲ್ಲಿ ಓಡಾಡುವ ಜನರು ಮೂಗು ಮುಚ್ಚಿಕೊಂಡು ಸಂಚರಿಸ ಬೇಕಾದ ಪರಿಸ್ಥಿತಿ ಉದ್ಭವಿಸಿದೆ.
ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿ ಸುವ ವಾಹನವನ್ನು ಪ್ರತಿದಿನ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಮುಂದಕ್ಕೆ ಕಳುಹಿಸಿ ದರೂ ಕೆಲವು ಜನರು ಅನಾಗರಿಕರಂತೆ, ಮೈಸೂರಿನ ಸ್ವಚ್ಛತೆಗೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಪ್ರತಿದಿನ ರಾತ್ರಿ ವೇಳೆ ಪ್ಲಾಸಿಕ್, ಮನೆಯ ಕಸ, ಹೋಟೆಲ್ ತ್ಯಾಜ್ಯ, ಅನುಪಯುಕ್ತ ತರಕಾರಿ ಮುಂತಾದ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಇಲ್ಲಿ ಎಸೆದು ಕೈತೊಳೆದುಕೊಳ್ಳುತ್ತಾರೆ.
ರಸ್ತೆಯ ಸಮೀಪವಿರುವ ಮನೆಗಳಲ್ಲಿ ವಾಸಿಸುವವರಿಗೆ ದುರ್ವಾಸನೆ ಕಾಡುತ್ತಿದೆ.
ಅಲ್ಲದೆ ಬೀದಿ ನಾಯಿಗಳು, ಬಿಡಾಡಿ ದನಗಳು ರಸ್ತೆ ಬದಿಯಲ್ಲಿ ಬೀಸಾಡಿದ ಚೀಲಗಳನ್ನು ಕಚ್ಚಿ ಎಳೆದೊಯ್ದು ರಸ್ತೆಯ ಮಧ್ಯೆ ತಂದು ಬಿಡುವುದಲ್ಲದೆ, ಮನೆಗಳ ಸನಿಹವೂ ಎಳೆದೊಯ್ದು ಚೀಲದಲ್ಲಿದ್ದ ಕಸವನ್ನು ಚೆಲ್ಲಾಪಿಲ್ಲಿ ಮಾಡುತ್ತವೆ. ಇದು ಇಲ್ಲಿ ಸಂಚರಿಸುವವರಿಗೆ ಮತ್ತು ರಸ್ತೆ ಸನಿಹವಿರುವ ಮನೆಗಳಲ್ಲಿ ವಾಸಿಸುವವರಿಗೆ ಅಸಹನೀಯವಾಗಿದೆ. ಕಸ ಬೀದಿಯಲ್ಲಿ ಹರಡುವುದರಿಂದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಎದುರಾಗಿದೆ. ಪಕ್ಕದಲ್ಲೇ ಹೋಟೆಲ್ಗಳು, ಟೀ ಅಂಗಡಿಗಳನ್ನು ಇಟ್ಟು ಕೊಂಡಿರುವವರಿಗೆ ವ್ಯಾಪಾರವೂ ಕಡಿಮೆಯಾಗಿದೆ.
ಪಂಜು ಗಂಗೊಳ್ಳಿ ಅವರ ಲೇಖನಗಳನ್ನು ಓದಲು ಈ ಲಿಂಕ್ ಬಳಸಿ..
ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿಲ್ಲದ ಕಾರಣ ಮಳೆ ಬಂದರೆ ಮಳೆ ನೀರಿನ ಜೊತೆ ಸೇರಿ ಕೊಳಚೆ ನೀರೂ ರಸ್ತೆಯಲ್ಲೇ ಹರಿಯುತ್ತದೆ. ಈ ಸ್ಥಳವು ಹಂದಿಗಳು, ನಾಯಿಗಳು ಹಾಗೂ ಬಿಡಾಡಿ ದನಗಳ ತಾಣವಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಮೈಸೂರು ಮಹಾ ನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿ ಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರು ರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…