Andolana originals

ರಸ್ತೆ ಬದಿಯಲ್ಲಿ ಕಸದ ರಾಶಿ, ಜನರಿಗೆ ರೋಗದ ಭೀತಿ!

ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ ದುರ್ವಾಸನೆ ಅಡರುತ್ತಿದೆ.

ಈ ರಸ್ತೆಯ ಬದಿಯಲ್ಲಿ ಕಸ ಎಸೆಯುವುದು ಸಾಮಾನ್ಯ ಸಂಗತಿಯಂತೆಯೇ ಆಗಿದೆ. ಈ ನಡುವೆ ಇಲ್ಲಿ ಬೀಸಾಡಿದ ಕಸವನ್ನು ತೆರವು ಗೊಳಿಸ ದಿರುವುದರಿಂದ ಕಸ ರಾಶಿ ರಾಶಿಯಾಗಿ ಹರಡಿ ಕೊಂಡಿದೆ. ಕಸ ಕೊಳೆತು ವಾಸನೆ ಬರುತ್ತಿರುವುದರಿಂದ ರಸ್ತೆಯಲ್ಲಿ ಓಡಾಡುವ ಜನರು ಮೂಗು ಮುಚ್ಚಿಕೊಂಡು ಸಂಚರಿಸ ಬೇಕಾದ ಪರಿಸ್ಥಿತಿ ಉದ್ಭವಿಸಿದೆ.

ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿ ಸುವ ವಾಹನವನ್ನು ಪ್ರತಿದಿನ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಮುಂದಕ್ಕೆ ಕಳುಹಿಸಿ ದರೂ ಕೆಲವು ಜನರು ಅನಾಗರಿಕರಂತೆ, ಮೈಸೂರಿನ ಸ್ವಚ್ಛತೆಗೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಪ್ರತಿದಿನ ರಾತ್ರಿ ವೇಳೆ ಪ್ಲಾಸಿಕ್, ಮನೆಯ ಕಸ, ಹೋಟೆಲ್ ತ್ಯಾಜ್ಯ, ಅನುಪಯುಕ್ತ ತರಕಾರಿ ಮುಂತಾದ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಇಲ್ಲಿ ಎಸೆದು ಕೈತೊಳೆದುಕೊಳ್ಳುತ್ತಾರೆ.

ರಸ್ತೆಯ ಸಮೀಪವಿರುವ ಮನೆಗಳಲ್ಲಿ ವಾಸಿಸುವವರಿಗೆ ದುರ್ವಾಸನೆ ಕಾಡುತ್ತಿದೆ.

ಅಲ್ಲದೆ ಬೀದಿ ನಾಯಿಗಳು, ಬಿಡಾಡಿ ದನಗಳು ರಸ್ತೆ ಬದಿಯಲ್ಲಿ ಬೀಸಾಡಿದ ಚೀಲಗಳನ್ನು ಕಚ್ಚಿ ಎಳೆದೊಯ್ದು ರಸ್ತೆಯ ಮಧ್ಯೆ ತಂದು ಬಿಡುವುದಲ್ಲದೆ, ಮನೆಗಳ ಸನಿಹವೂ ಎಳೆದೊಯ್ದು ಚೀಲದಲ್ಲಿದ್ದ ಕಸವನ್ನು ಚೆಲ್ಲಾಪಿಲ್ಲಿ ಮಾಡುತ್ತವೆ. ಇದು ಇಲ್ಲಿ ಸಂಚರಿಸುವವರಿಗೆ ಮತ್ತು ರಸ್ತೆ ಸನಿಹವಿರುವ ಮನೆಗಳಲ್ಲಿ ವಾಸಿಸುವವರಿಗೆ ಅಸಹನೀಯವಾಗಿದೆ. ಕಸ ಬೀದಿಯಲ್ಲಿ ಹರಡುವುದರಿಂದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಎದುರಾಗಿದೆ. ಪಕ್ಕದಲ್ಲೇ ಹೋಟೆಲ್‌ಗಳು, ಟೀ ಅಂಗಡಿಗಳನ್ನು ಇಟ್ಟು ಕೊಂಡಿರುವವರಿಗೆ ವ್ಯಾಪಾರವೂ ಕಡಿಮೆಯಾಗಿದೆ.

ಪಂಜು ಗಂಗೊಳ್ಳಿ ಅವರ ಲೇಖನಗಳನ್ನು ಓದಲು ಈ ಲಿಂಕ್‌ ಬಳಸಿ.. 

ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿಲ್ಲದ ಕಾರಣ ಮಳೆ ಬಂದರೆ ಮಳೆ ನೀರಿನ ಜೊತೆ ಸೇರಿ ಕೊಳಚೆ ನೀರೂ ರಸ್ತೆಯಲ್ಲೇ ಹರಿಯುತ್ತದೆ. ಈ ಸ್ಥಳವು ಹಂದಿಗಳು, ನಾಯಿಗಳು ಹಾಗೂ ಬಿಡಾಡಿ ದನಗಳ ತಾಣವಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಮೈಸೂರು ಮಹಾ ನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿ ಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರು ರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಆಂದೋಲನ ಪುರವಣಿಯಲ್ಲಿ ಬರುವ ಲೇಖನಗಳ ಓದಿಗೆ ಈ ಲಿಂಕ್‌ ಬಳಸಿ.. 

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

32 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago