Andolana originals

ರಸ್ತೆ ಬದಿಯಲ್ಲಿ ಕಸದ ರಾಶಿ, ಜನರಿಗೆ ರೋಗದ ಭೀತಿ!

ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ ದುರ್ವಾಸನೆ ಅಡರುತ್ತಿದೆ.

ಈ ರಸ್ತೆಯ ಬದಿಯಲ್ಲಿ ಕಸ ಎಸೆಯುವುದು ಸಾಮಾನ್ಯ ಸಂಗತಿಯಂತೆಯೇ ಆಗಿದೆ. ಈ ನಡುವೆ ಇಲ್ಲಿ ಬೀಸಾಡಿದ ಕಸವನ್ನು ತೆರವು ಗೊಳಿಸ ದಿರುವುದರಿಂದ ಕಸ ರಾಶಿ ರಾಶಿಯಾಗಿ ಹರಡಿ ಕೊಂಡಿದೆ. ಕಸ ಕೊಳೆತು ವಾಸನೆ ಬರುತ್ತಿರುವುದರಿಂದ ರಸ್ತೆಯಲ್ಲಿ ಓಡಾಡುವ ಜನರು ಮೂಗು ಮುಚ್ಚಿಕೊಂಡು ಸಂಚರಿಸ ಬೇಕಾದ ಪರಿಸ್ಥಿತಿ ಉದ್ಭವಿಸಿದೆ.

ಮೈಸೂರು ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹಿ ಸುವ ವಾಹನವನ್ನು ಪ್ರತಿದಿನ ಬೆಳಿಗ್ಗೆ ನಗರದ ಪ್ರತಿ ನಾಗರಿಕರ ಮನೆಯ ಮುಂದಕ್ಕೆ ಕಳುಹಿಸಿ ದರೂ ಕೆಲವು ಜನರು ಅನಾಗರಿಕರಂತೆ, ಮೈಸೂರಿನ ಸ್ವಚ್ಛತೆಗೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಪ್ರತಿದಿನ ರಾತ್ರಿ ವೇಳೆ ಪ್ಲಾಸಿಕ್, ಮನೆಯ ಕಸ, ಹೋಟೆಲ್ ತ್ಯಾಜ್ಯ, ಅನುಪಯುಕ್ತ ತರಕಾರಿ ಮುಂತಾದ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಇಲ್ಲಿ ಎಸೆದು ಕೈತೊಳೆದುಕೊಳ್ಳುತ್ತಾರೆ.

ರಸ್ತೆಯ ಸಮೀಪವಿರುವ ಮನೆಗಳಲ್ಲಿ ವಾಸಿಸುವವರಿಗೆ ದುರ್ವಾಸನೆ ಕಾಡುತ್ತಿದೆ.

ಅಲ್ಲದೆ ಬೀದಿ ನಾಯಿಗಳು, ಬಿಡಾಡಿ ದನಗಳು ರಸ್ತೆ ಬದಿಯಲ್ಲಿ ಬೀಸಾಡಿದ ಚೀಲಗಳನ್ನು ಕಚ್ಚಿ ಎಳೆದೊಯ್ದು ರಸ್ತೆಯ ಮಧ್ಯೆ ತಂದು ಬಿಡುವುದಲ್ಲದೆ, ಮನೆಗಳ ಸನಿಹವೂ ಎಳೆದೊಯ್ದು ಚೀಲದಲ್ಲಿದ್ದ ಕಸವನ್ನು ಚೆಲ್ಲಾಪಿಲ್ಲಿ ಮಾಡುತ್ತವೆ. ಇದು ಇಲ್ಲಿ ಸಂಚರಿಸುವವರಿಗೆ ಮತ್ತು ರಸ್ತೆ ಸನಿಹವಿರುವ ಮನೆಗಳಲ್ಲಿ ವಾಸಿಸುವವರಿಗೆ ಅಸಹನೀಯವಾಗಿದೆ. ಕಸ ಬೀದಿಯಲ್ಲಿ ಹರಡುವುದರಿಂದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಎದುರಾಗಿದೆ. ಪಕ್ಕದಲ್ಲೇ ಹೋಟೆಲ್‌ಗಳು, ಟೀ ಅಂಗಡಿಗಳನ್ನು ಇಟ್ಟು ಕೊಂಡಿರುವವರಿಗೆ ವ್ಯಾಪಾರವೂ ಕಡಿಮೆಯಾಗಿದೆ.

ಪಂಜು ಗಂಗೊಳ್ಳಿ ಅವರ ಲೇಖನಗಳನ್ನು ಓದಲು ಈ ಲಿಂಕ್‌ ಬಳಸಿ.. 

ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿಲ್ಲದ ಕಾರಣ ಮಳೆ ಬಂದರೆ ಮಳೆ ನೀರಿನ ಜೊತೆ ಸೇರಿ ಕೊಳಚೆ ನೀರೂ ರಸ್ತೆಯಲ್ಲೇ ಹರಿಯುತ್ತದೆ. ಈ ಸ್ಥಳವು ಹಂದಿಗಳು, ನಾಯಿಗಳು ಹಾಗೂ ಬಿಡಾಡಿ ದನಗಳ ತಾಣವಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಮೈಸೂರು ಮಹಾ ನಗರಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲಿನ ತ್ಯಾಜ್ಯವನ್ನು ತೆರವುಗೊಳಿಸಿ, ಇಲ್ಲಿ ಸಂಚರಿ ಸುವವರಿಗೆ ಮತ್ತು ಅಕ್ಕ ಪಕ್ಕದ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ಬಾರಿ ತಾವೇ ಸ್ವಚ್ಛತೆಯನ್ನು ಮಾಡಿಸಿದ್ದರೂ ವಾಹನಗಳಲ್ಲಿ ಬರುವವರು ರಾತ್ರಿ ಸಮಯದಲ್ಲಿ ಕಸವನ್ನು ತಂದು ಬೀಸಾಡಿ ಹೋಗುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಆಂದೋಲನ ಪುರವಣಿಯಲ್ಲಿ ಬರುವ ಲೇಖನಗಳ ಓದಿಗೆ ಈ ಲಿಂಕ್‌ ಬಳಸಿ.. 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago