Andolana originals

ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು

ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ, ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯವು ಭರದಿಂದ ಸಾಗಿದೆ. ರೈತರು ಉತ್ಸಾಹದಿಂದ ಶುಂಠಿ ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ.

ಕಳೆದ ವರ್ಷ ಹಸಿ ಶುಂಠಿಗೆ ಉತ್ತಮ ಬೆಲೆ ದೊರೆತಿದ್ದು, ರೈತರ ಉತ್ಸಾಹ ಇಮ್ಮಡಿಯಾಗಿದೆ. ಹನಗೋಡು ಹೋಬಳಿ ವ್ಯಾಪ್ತಿಯಲ್ಲಿ ಈ ವರ್ಷ ಶುಂಠಿ ಕೃಷಿಯು ಹೆಚ್ಚಿನ ಆದ್ಯತೆ ಪಡೆಯುತ್ತಿದೆ. ಈ ಭಾಗದಲ್ಲಿ ಹೊಗೆಸೊಪ್ಪು ಪ್ರಮುಖ ವಾಣಿಜ್ಯ ಬೆಳೆ ಎನಿಸಿಕೊಂಡಿದ್ದರೂ ಶುಂಠಿ ಬೆಳೆಯುವ ಕೃಷಿ ಭೂಮಿಯು ವಿಸ್ತಾರ ಗೊಳ್ಳುತ್ತಿದೆ. ಮತ್ತೊಂದು ಮುಖ್ಯ ವಾಣಿಜ್ಯ ಬೆಳೆಯಾಗಿ ಪರಿಣಮಿಸುತ್ತಿದೆ.

ಶುಂಠಿ ಬೆಳೆಯಲ್ಲಿ ಉತ್ತಮ ಇಳುವರಿಯ ದೃಷ್ಟಿಯಿಂದ ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಬಿತ್ತನೆ ಮಾಡುವುದು ಸಾಮಾನ್ಯ. ಈಗಾಗಲೇ ಶುಂಠಿ ನಾಟಿ ಪ್ರಾರಂಭವಾಗಿದೆ. ಉತ್ತಮ ಲಾಭ ಗಳಿಸುವ ನಿರೀಕ್ಷೆಯಲ್ಲಿ ಉತ್ಸಾಹದಿಂದಲೇ ಚಟುವಟಿಕೆ ಆರಂಭಿಸಿರುವ ಬೆಳೆಗಾರರಿಗೆ ಪಿವಿಸಿ ಪೈಪ್, ಕೋಳಿ ಗೊಬ್ಬರ, ಬಿತ್ತನೆ ಬೀಜದ ಬೆಲೆ ಮತ್ತು ಕೂಲಿಯಲ್ಲಿನ ಹೆಚ್ಚಳವು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

೨೦೨೫ ರ ಜನವರಿಯಲ್ಲಿ ಹಸಿಶುಂಠಿ ಬೆಲೆಯು ಪ್ರತಿ ೬೦ ಕೆ.ಜಿ.ಯ ಚೀಲಕ್ಕೆ ೧ ಸಾವಿರ ರೂ.ನಿಂದ ೧,೨೦೦ ರೂ.ಗೆ ಮಾರಾಟವಾಗಿತ್ತು. ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಈ ಬೆಲೆ ೩ ಸಾವಿರ ರೂ. ತಲುಪಿತ್ತು.

ಜುಲೈ ಮತ್ತು ಆಗಸ್ಟ್‌ನಲ್ಲಿ ಹೊಸ ಶುಂಠಿಯು ಮಾರುಕಟ್ಟೆಗೆ ಬಂದಿದ್ದರಿಂದ ೩,೫೦೦ ರೂ.ಗಳಿಗೆ ಮಾರಾಟವಾಯಿತು. ಸೆಪ್ಟೆಂಬರ್‌ನಲ್ಲಿ ೩,೮೦೦ ರೂ., ಅಕ್ಟೋಬರ್‌ನಲ್ಲಿ ೩ ಸಾವಿರ ರೂ.ನಿಂದ ೩,೫೦೦ ರೂ. ತಲುಪಿತು. ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ೩,೦೦೦ ರೂ.ರಿಂದ ೨,೮೦೦ ರೂ., ಈ ವರ್ಷದ ಜನವರಿ-ಫೆಬ್ರವರಿ ತಿಂಗಳಲ್ಲಿ ೨,೩೦೦ ರೂ.ನಿಂದ ೩ ಸಾವಿರ ರೂ.ವರೆಗೆ ಬೆಲೆ ಸಿಕ್ಕಿತ್ತು. ಸದ್ಯಕ್ಕೆ ಶುಂಠಿಯ ಬೆಲೆ ೨,೫೦೦ ರೂ. ಇದೆ.

ಕಳೆದ ವರ್ಷ ೧೦೦೦ ರಿಂದ ೧,೨೦೦ ರೂ. ದೊರೆತಿದ್ದ ಬೀಜದ ಶುಂಠಿಯು, ಈ ವರ್ಷ ಪ್ರತಿ ೬೦ ಕೆ.ಜಿ.ಗೆ ೩,೫೦೦ ರೂ. ತಲುಪಿದ್ದು, ದುಬಾರಿ ಎನಿಸಿತು. ಜನವರಿಯ ನಂತರ ಮಾರುಕಟ್ಟೆಯಲ್ಲಿ ಶುಂಠಿಯ ಬೆಲೆ ಸ್ವಲ್ಪ ಇಳಿಮುಖವಾದ್ದರಿಂದ ಬೀಜದ ಬೆಲೆಯು ತುಸು ಕಡಿಮೆಯಾಗಿದೆ. ಸದ್ಯ ೨,೫೦೦ ರೂ.ಗೆ ಮಾರಾಟ ಆಗುತ್ತಿದೆ.

ಕೋಳಿಗೊಬ್ಬರ ದುಬಾರಿ: ಶುಂಠಿ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯುವಲ್ಲಿ ಕೋಳಿಗೊಬ್ಬರಕ್ಕೆ ರೈತರು ಮಹತ್ವ ನೀಡುತ್ತಿರುವುದರಿಂದ ಈ ಬಾರಿ ಕೋಳಿ ಕೊಬ್ಬರದ ಬೆಲೆಯೂ ದುಬಾರಿಯಾಗಿದೆ. ಟನ್‌ಗೆ ೩,೮೦೦ ರೂ.ನಿಂದ ಸಾವಿರದಿಂದ ೪,೦೦೦ ರೂ. ತಲುಪಿದೆ.

” ಈ ವರ್ಷ ಶುಂಠಿಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ಹುಣಸೂರು ತಾಲ್ಲೂಕಿನಲ್ಲಿ ಕಳೆದ ವರ್ಷ ೧,೩೦೦ ಹೆಕ್ಟೇರ್ ಪ್ರದೇಶದಲ್ಲಿ ಶುಂಠಿ ಬೆಳೆದಿದ್ದು, ಈ ವರ್ಷ ೧,೫೦೦ ಹೆಕ್ಟೇರ್ ದಾಟುವ ಸಾಧ್ಯತೆಯಿದೆ.”

-ಡಾ.ನಾಗರಾಜ್, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ

” ಒಂದು ಎಕರೆ ಪ್ರದೇಶದಲ್ಲಿ ಶುಂಠಿ ಬೆಳೆಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ೧ ಲಕ್ಷ ರೂ.ಗಿಂತ ಹೆಚ್ಚು ಖರ್ಚಾಗುತ್ತಿದೆ. ದರ ಉತ್ತಮವಾಗಿ ದೊರೆತಲ್ಲಿ ಲಾಭವಾಗುತ್ತದೆ.”

-ಚೇತನ್, ಶುಂಠಿ ಬೆಳೆಗಾರ, ಹಿಂಡಗೂಡು

 

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago