Andolana originals

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆ ನಿರೀಕ್ಷೆ

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ ಮಾಹಿತಿ ಹವಾಮಾನ ಇಲಾಖೆಯಿಂದ ಲಭ್ಯವಾಗಿದೆ. ಈಗಾಗಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮುಂಗಾರು ಮಳೆಯೂ ಉತ್ತಮವಾಗಿ ಸುರಿದಲ್ಲಿ ಕೃಷಿಕರಿಗೆ ಅನುಕೂಲವಾಗಲಿದೆ.

ಕೆಲ ದಿನಗಳ ಹಿಂದೆ ಮಂಜಿನ ನಗರಿ ಮಡಿಕೇರಿ ಸೇರಿ ಕೊಡಗಿನಾದ್ಯಂತ ರಣ ಬಿಸಿಲಿಗೆ ಮನೆಯಿಂದ ಹೊರಬರುವುದೇ ಕಷ್ಟವೆಂಬ೦ತಾಗಿತ್ತು. ಫೆಬ್ರವರಿ ತಿಂಗಳಲ್ಲೇ ಜಿಲ್ಲೆಯ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ವರ್ಷದ ಬಹುತೇಕ ಸಮಯ ತಂಪಾದ ವಾತಾವರಣದಲ್ಲಿರುವ ಕೊಡಗಿನ ಜನ ಬಿಸಿಲಿಗೆ ಬಳಲಿ ಬಸವಳಿದಿದ್ದರು. ಫೆಬ್ರವರಿ ಅಂತ್ಯದಿಂದ ಅಲ್ಲಲ್ಲಿ ಸುರಿಯಲಾರಂಭಿಸಿದ ಮಳೆ ಜಿಲ್ಲೆಯನ್ನು ಮತ್ತೆ ತಂಪು ಮಾಡಿತು. ಇತ್ತೀಚಿನ ದಿನಗಳಲ್ಲಿ ಆಗೊಮ್ಮೆ ಈಗೊಮ್ಮೆ ಸುರಿದ ಮಳೆಗೆ ಒಂದಷ್ಟು
ವಾತಾವರಣ ಬದಲಾಗಿದೆ.

ಜಿಲ್ಲೆಗೆ ಮುಂಗಾರು ಪ್ರವೇಶವಾಗಲು ಇನ್ನು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಒಂದೂವರೆ ತಿಂಗಳಷ್ಟೇ ಬಾಕಿ ಉಳಿದಿದೆ. ಬೇಸಿಗೆಯ ಬೇಗೆಯನ್ನು ತಣಿಸಲು ಪೂರ್ವ ಮುಂಗಾರು ಮಳೆ ಬೇಕಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚೇ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಾಂತ ಮಹಾಸಾಗರದ ಮಧ್ಯೆ ಮತ್ತು ಪಶ್ಚಿಮ ಭಾಗಗಳಲ್ಲಿ ತಾಪಮಾನ ತಗ್ಗಿದ್ದು, ಲಾನಿನಾ ಪ್ರಭಾವ ಕಂಡುಬರುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಈ ಬಾರಿ ಮುಂಗಾರು ಮತ್ತು ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯ ದಿನಗಳಲ್ಲಿ ವಿಪರೀತವೆಂಬಷ್ಟು ಉಷ್ಣಾಂಶ ದಾಖಲಾಗುವ ಸಾಧ್ಯತೆ ಇಲ್ಲ ಎಂದು ಭಾರತೀಯಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೊಡಗು ಸೇರಿದಂತೆ ಪೂರ್ವ ಮುಂಗಾರಿನ ಜತೆ ಮುಂಗಾರು ಮಳೆಯೂ ಉತ್ತಮವಾಗಿರಲಿದ್ದು, ಬೇಸಿಗೆಯ ಬಿಸಿಯೂ ಕಡಿಮೆ ಪ್ರಮಾಣದಲ್ಲಿರಲಿದೆ.

ಭಾರತದಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿತ್ತು. 2023ರಲ್ಲಿ ಎಲ್ ನಿನೋ ದುರ್ಬಲ ಗೊಂಡು ಲಾ ನಿನಾ ಆರಂಭವಾಗುವ ಸೂಚನೆಯಿತ್ತು. ಹೀಗಾಗಿ ಕಳೆದ ಸಾಲಿನಲ್ಲಿ ಮಳೆಯ ಪ್ರಮಾಣ ಹೆಚ್ಚಿತ್ತು. ಈಗ ಶಾಂತ ಸಾಗರದಲ್ಲಿ ಸಂಪೂರ್ಣ ಲಾನಿನಾ ಪರಿಣಾಮವಿದೆ. ಇದರಿಂದ ಶಾಂತ ಮಹಾಸಾಗರದ ಈಶಾನ್ಯ ಭಾಗದಲ್ಲಿ ಸಮುದ್ರದ ನೀರು ಸಂಪೂರ್ಣ ತಣ್ಣಗಾಗಿದೆ. ಇದರ ಪರಿಣಾಮವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಭಾಗದಲ್ಲಿ ಹೆಚ್ಚು ಮಳೆಯಾದರೆ, ದಕ್ಷಿಣ ಅಮೆರಿಕಾ ಬರ, ಉತ್ತರ ಅಮೆರಿಕಾದಲ್ಲಿ ತೀವ್ರ ಚಳಿ, ಆಫ್ರಿಕಾದ ಈಶಾನ್ಯ ಭಾಗದಲ್ಲಿ ಬರ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಹೆಚ್ಚು ಮಳೆಯಾಗುತ್ತದೆ.

ಲಾನಿನಾ ಪರಿಣಾಮದಿಂದ ಈ ಬಾರಿ ಮುಂಗಾರು ಮಳೆ ಕಳೆದ ವರ್ಷಕ್ಕಿಂತ ಹೆಚ್ಚಿರಲಿದೆ. ಪೂರ್ವ ಮುಂಗಾರು ಉತ್ತಮವಾಗಿರಲಿದ್ದು, ಮೇ ತಿಂಗಳಲ್ಲಿಯೂ ತಾಪಮಾನದಲ್ಲಿ ತುಸು ಕಡಿಮೆ ಉಷ್ಣಾಂಶ ಕಂಡುಬರಲಿದೆ. ಜತೆಗೆ ಈ ಸಾಲಿನಲ್ಲಿ ಹಿಂಗಾರು ಮಳೆ ಕೊರತೆ ಕಂಡುಬರಲಿದೆ. -ಡಾ.ಸುಮಂತ್, ತಾಂತ್ರಿಕ ಅಧಿಕಾರಿ, ಹವಾಮಾನ ವಿಭಾಗ, ನಾಗನಹಳ್ಳಿ

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago