Andolana originals

ಕಬಿನಿ ಭಾಗದ ರೈತರ ಬೇಡಿಕೆ ಈಡೇರಿಸುವತ್ತ ಸರ್ಕಾರದ ಚಿತ್ತ

ಕೆ.ಬಿ.ರಮೇಶನಾಯಕ

  • ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ನೀರೇ ತಲುಪದ ೮೬ ಸಾವಿರ ಎಕರೆ ಪ್ರದೇಶಗಳಿಗೆ ನೀರುಣಿಸಲು ಯೋಜನೆ
  • ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಬಿನಿ ಎಡ-ಬಲ ದಂಡೆ ನಾಲೆಗಳಿಗೆ ನೀರು
  • ೧೨೧೬.೯೭ ಕೋಟಿ ರೂ. ಮೊತ್ತದ ಯೋಜನೆಗಳ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ

ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರುಣಿಸಲು ಸಾಧ್ಯವಾಗದೆ ಇದ್ದ ಕೊರಗನ್ನು ನೀಗಿಸಲು ಮುಂದಾಗಿರುವ ರಾಜ್ಯ ಸರ್ಕಾರವು ಐದು ವರ್ಷಗಳ ಸಮಗ್ರ ಯೋಜನೆ ರೂಪಿಸಿದ್ದು, ರೈತರ ೩ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಸಿಗುವಂತೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ.

ಕಬಿನಿ ಜಲಾಶಯದ ಎಡ ಮತ್ತು ಬಲದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ಸೇರಿದ ಪ್ರದೇಶಗಳಿಗೆ ನೀರು ತಲುಪುವಂತೆ ಮಾಡಲು ೧೨೧೬.೯೭ ಕೋಟಿ ರೂ. ಮೊತ್ತದ ಯೋಜನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಶುರುವಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿದೆ.

ವರುಣ ನಾಲೆಯನ್ನು ತಂದು ಕೊಟ್ಟು ಮೈಸೂರು ತಾಲ್ಲೂಕಿನ ಸಾವಿರಾರು ಎಕರೆ ಪ್ರದೇಶಗಳಿಗೆ ನೀರು ಒದಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಬಿನಿ ಭಾಗದ ರೈತರ ಹಲವು ವರ್ಷಗಳ ಬೇಡಿಕೆ ಮತ್ತು ತಮ್ಮ ಜಮೀನಿಗೆ ನೀರಿಲ್ಲ ಎನ್ನುವ ಕೊರಗನ್ನು ದೂರ ಮಾಡಿದ್ದಾರೆ.

ಕಬಿನಿ ಅಣೆಕಟ್ಟಿಗೆ ೫೦ ವರ್ಷ: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸಮೀಪ ಕಪಿಲಾ ನದಿಗೆ ಅಣೆಕಟ್ಟನ್ನು ೧೯೭೪ರಲ್ಲಿ ನಿರ್ಮಿಸಲಾಗಿದ್ದು, ಡ್ಯಾಂ ಕಟ್ಟುವಾಗ ೩.೨ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಒದಗಿಸುವಂತೆ ಅಚ್ಚುಕಟ್ಟು ನಿರ್ಮಿಸಲಾಗಿದೆ. ಈ ಅಣೆಕಟ್ಟೆಯಿಂದ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ವನ್ನು ಒದಗಿಸುವ ಜತೆಗೆ, ಬೆಂಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಮೀಸಲಿಡಲಾಗಿದೆ. ಕಬನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ೩.೪ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಹರಿಸಬೇಕಿತ್ತಾದರೂ ಈತನಕ ೨.೧೬ ಲಕ್ಷ ಎಕರೆಗೆ ಮಾತ್ರ ನೀರು ಕೊಡಲಾಗುತ್ತಿದೆ. ೬೫ ಎಕರೆ ಪ್ರದೇಶಗಳಿಗೆ ನೀರು ಕೊಟ್ಟಿಲ್ಲದಿದ್ದರೆ, ೨೫ ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಕೈಗಾರಿಕಾರಣ, ನಗರೀಕರಣ ಹಾಗೂಬೇರೆ ಬೇರೆ ಕಾರಣಗಳಿಂದ ನೀರು ಹರಿಸುತ್ತಿಲ್ಲ. ಹೀಗಾಗಿ, ಪ್ರತಿ ವರ್ಷ ನೀರು ಹರಿಸಿದರೂ ಕೊನೆಯ ಭಾಗಕ್ಕೆ ನೀರು ತಲುಪದ ಕಾರಣ ರೈತರು ಸಮಸ್ಯೆ ಎದುರಿಸುತ್ತಿರುವುದನ್ನು ಮನಗಂಡು ರಾಜ್ಯ ಸರ್ಕಾರ ಐದು ವರ್ಷಗಳ ಸಮಗ್ರ ಯೋಜನೆಯಡಿ ನೀರು ದೊರೆಯುವಂತೆ ಮಾಡಲು ಪ್ಲಾನ್ ಮಾಡಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕಕ್ಕೆ ಲಭ್ಯವಾಗಿರುವ ನೀರನ್ನು ಬಳಸಿಕೊಳ್ಳಬೇಕಿದ್ದು, ಇದುವರೆಗೂ ನಾಲೆಗಳ ಆಧುನೀಕರಣ, ಪಿಕಪ್ ನಾಲೆಗಳ ಆಧುನೀಕರಣ ಮಾಡದೆ ಹಾಗೂ ನಾಲೆಗಳಲ್ಲಿ ಹೂಳು ತೆಗೆಸದೆ ಇರುವುದರಿಂದ ಮೊದಲ ಹಂತದಲ್ಲಿ ೧೨೧೬.೯೭ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ಕೊಟ್ಟಿದೆ. ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ದೊರೆತಿರುವ ಕಾರಣ ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಕಾಮಗಾರಿ ಶುರು ಮಾಡಲು ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.

ಕೊಳ್ಳೇಗಾಲ, ಹನೂರು ಭಾಗಕ್ಕೆ ನೀರು: ಕೊಳ್ಳೇಗಾಲ, ಹನೂರು ಭಾಗದ ಪ್ರದೇಶಗಳಿಗೆ ನೀರು ತಲುಪಿಸಲು ರೂಪಿಸಿರುವ ಯೋಜನೆಗೆ ಒಪ್ಪಿಗೆ ದೊರೆತಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಜಲಾಶಯ ಯೋಜನೆ, ಹನೂರು ತಾಲ್ಲೂಕಿನ ಉಡುತೊರೆಹಳ್ಳ ಯೋಜನೆ, ಗುಂಡಾಲ್ ನದಿಗೆ ಅಡ್ಡಲಾಗಿ ದುರ್ಗಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯಿಂದ ಎಂಟು ಕೆರೆಗಳಿಗೆ ನೀರು ಒದಗಿಸುವುದು ಸೇರಿದೆ. ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣ ವ್ಯಾಪ್ತಿಯ ಚಿಕ್ಕನಂದಿ ಏತ ನೀರಾವರಿ ಯೋಜನೆಯಿಂದ ಡಿ.ದೇವರಾಜ ಅರಸು ನಾಲೆಯ ಕೊನೆಯ ಭಾಗದ ಕೆರೆಗಳನ್ನು ತುಂಬಿಸಲು ಹೆಚ್ಚುವರಿ ನೀರನ್ನು ಹರಿವನ್ನು ಸರಿದೂಗಿಸಲು ಡಿ.ಡಿ. ಅರಸು ನಾಲೆಯ ಸರಪಳಿ ೭೪ ಕಿ.ಮೀ.ನಿಂದ ಮುಂದಕ್ಕೆ ರೀಮಾಡಲಿಂಗ್ ಮಾಡುವ ಕಾಮಗಾರಿಯು ನಡೆಯಲಿದೆ.

ಕಬಿನಿ ಅಣೆಕಟ್ಟು ದುರಸ್ತಿ ಭಾಗ್ಯ: ಕಬಿನಿ ಜಲಾಶಯ ನಿರ್ಮಾಣಗೊಂಡು ೫೦ ವರ್ಷಗಳು ಕಳೆದಿದ್ದು, ನೀರಿನ ರಭಸಕ್ಕೆ ಜಲಾಶಯದ ಕಲ್ಲಿನ ಕಟ್ಟಡದ ಗೋಡೆಗಳ ಜಾಯಿಂಟ್‌ಗಳು ಹಾನಿಗೊಳಗಾಗಿವೆ. ಹಲವು ಭಾಗಗಳಲ್ಲಿ ಕಲ್ಲು ಕಬ್ಬಿಣದ ಜಾಯಿಂಟ್ ಹಾಳಾಗಿರುವುದು ಮತ್ತು ಕಾಂಕ್ರೀಟ್ ಭಾಗಗಳಲ್ಲಿ ಬಿರುಕು ಬಿಟ್ಟಿರುವುದರಿಂದ ೩೨.೨೫ ಕೋಟಿ ವೆಚ್ಚದಲ್ಲಿ ದುರಸ್ತಿ ಕಾರ್ಯ ನಡೆಯಲಿದೆ.

” ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳ ಕೊನೆಯ ಭಾಗಕ್ಕೆ ನೀರು ಒದಗಿಸುವುದು ನಮ್ಮ ಕರ್ತವ್ಯ. ನಾಲೆಗಳ ಆಧುನೀಕರಣ, ಪಿಕಪ್ ನಾಳೆಗಳ ಆಧುನೀಕರಣ ಜತೆಗೆ ನಾಲೆಗಳ ಹೂಳು ತೆಗೆಸುವುದಕ್ಕೆ ಪ್ಲಾನ್ ಮಾಡಲಾಗಿದೆ. ೩ ಲಕ್ಷ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸಲು ನಿಗದಿಯಾಗಿದ್ದರೂ ನಾವು ಕೊಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮೊದಲ ಹಂತದ ಯೋಜನೆಯಡಿ ಕಾಮಗಾರಿ ಶುರು ಮಾಡಲಾಗುತ್ತದೆ. ಇದರಿಂದಾಗಿ ಕೊನೆಯ ಭಾಗಕ್ಕೂ ನೀರು ತಲುಪಿಸಬಹುದು.”

-ಕೆ.ಮಹೇಶ್, ಅಧೀಕ್ಷಕ ಅಭಿಯಂತರ. ಕಬಿನಿ ಮತ್ತು ವರುಣ ನಾಲಾ ವೃತ್ತ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago