Andolana originals

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್.

ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ ಮಹಾರಾಜ ಸಂಸ್ಕೃತ ಮಹಾ ಪಾಠಶಾಲೆ ಕಟ್ಟಡ ಮೈಸೂರಿನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದೆ. ಕ್ರಿ.ಶ.೧೮೬೮ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್‌ರಿಂದ ಈ ಸಂಸ್ಥೆ ಪ್ರಾರಂಭವಾಗಿದ್ದು, ನಿರ್ವಹಣೆಯ ಕೊರತೆಯಿಂದ ದುಸ್ಥಿತಿಯಲ್ಲಿದೆ.

ಸುಮಾರು ೧೫೦ ವರ್ಷಗಳ ಇತಿಹಾಸವಿರುವ ಈ ಪಾಠಶಾಲೆಯ ಕಟ್ಟಡದಲ್ಲಿ ಹಳೆಯ ಸಂಸ್ಕೃತ ಹಸ್ತಪ್ರತಿಗಳ ಅಪರೂಪದ ಸಂಗ್ರಹವನ್ನು ಮಾಡಿರುವ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಶೈಕ್ಷಣಿಕ ವಲಯದಲ್ಲಿ ವಿಶಿಷ್ಟ ಗುರುತು ಮೂಡಿಸಿದೆ.

ಗೋಡೆಗಳೆಲ್ಲಾ ಬಿರುಕುಗಳು: ಹಲವಾರು ತರಗತಿ ಕೊಠಡಿಗಳ ಗೋಡೆಗಳಲ್ಲಿ ಬಿರುಕುಗಳು ಮೂಡಿದ್ದು, ಇಂತಹ ಅಪಾಯಕಾರಿ ಸ್ಥಿತಿಯಲ್ಲೇ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳು ಕುಳಿತು ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚು ಮಳೆಂಯಾದರೆ ಅನಾಹುತಕ್ಕೆ ಎಡೆಮಾಡಿ ಕೊಡುವ ಸ್ಥಿತಿ ಇದೆ. ಈ ಪಾಠಶಾಲೆಯಲ್ಲಿ ಜೂನ್ ೧ರಿಂದ ಪ್ರವೇಶಾತಿ ಹಾಗೂ ತರಗತಿಗಳು ಪ್ರಾರಂಭವಾಗಲಿದ್ದು, ಸುರಕ್ಷತೆಯ ಬಗ್ಗೆ ಭೀತಿ ಎದುರಾಗಿದೆ.

ನಿರ್ವಹಣೆ ಕೊರತೆ: ಈ ಹಿಂದೆ ಮೈಸೂರು ಅರಸರು ಈ ಕಟ್ಟಡವನ್ನು ಸಂಸ್ಕೃತ ಪಾಠಶಾಲೆಗೆಂದು ಸಂಸ್ಕೃತ, ವೇದ ಹಾಗೂ ಆಗಮವನ್ನು ಕಲಿಸಲು ದಾನವಾಗಿ ಕೊಟ್ಟಿದ್ದರು. ಇದನ್ನು ನಿರ್ವಹಣೆ ಮಾಡುವಲ್ಲಿ ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿರುವುದು ಕಂಡುಬರುತ್ತಿದೆ. ಆಗಮ ಹಾಗೂ ವೇದ ಕಲಿಕಾ ವಿಭಾಗದ ಕಟ್ಟಡ ಶಿಥಿಲವಾಗಿದ್ದು, ನೀರು ಸೋರುತ್ತದೆ. ಸಾಹಿತ್ಯ ವಿಭಾಗ (ಕಚೇರಿ ಕಟ್ಟಡ)ವೂ ಶಿಥಿಲಗೊಂಡಿವೆ.

ಪತ್ರ ವ್ಯವಹಾರ : ಒಂದೂವರೆ ಶತಮಾನ ಕಂಡಿರುವ, ಹಳೆಯದಾದ ಕಟ್ಟಡವಿದು. ಇಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯನಿರ್ವಹಿಸುವ ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ಕಟ್ಟಡವನ್ನು ದುರಸ್ತಿ ಮಾಡಿಕೊಡಬೇಕು ಎಂದು ಅಲ್ಲಿನ ಪ್ರಾಂಶುಪಾಲರು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಮಳೆಯಾದಾಗ ಅಲ್ಲಲ್ಲಿ ಸೋರುವುದು ಸಾಮಾನ್ಯವಾಗಿದೆ. ಹೀಗಾಗಿ, ಅದನ್ನು ತಪ್ಪಿಸಲು ಅಗತ್ಯ ದುರಸ್ತಿ ಮಾಡಬೇಕು. ಗೋಡೆಗಳಿಗೆ ಸುಣ್ಣದ ಗಾರೆಯ ಪ್ಲಾಸ್ಟರಿಂಗ್ ಆಗಬೇಕು. ಗೋಡೆಗಳಲ್ಲಿನ ಬಿರುಕು ಮುಚ್ಚಿಸಿ ಪ್ಲಾಸ್ಟರಿಂಗ್ ಮಾಡಬೇಕು. ಚಾವಣಿಯಲ್ಲಿ ಈಗ ಇರುವ ಪದರವನ್ನು ತೆಗೆದು ಸುಣ್ಣ ಮಿಶ್ರಿತ ಜಲ  ನಿರೋಧಕ ಅಳವಡಿಸಬೇಕು. ಹಾಳಾಗಿರುವ ಮರದ ಕಿಟಕಿ ಹಾಗೂ ಬಾಗಿಲುಗಳ ದುರಸ್ತಿ ಆಗಬೇಕು. ಮರದ ಕಂಬ, ಬಾಗಿಲು ಮತ್ತು ಕಿಟಕಿಗಳಿಗೆ ಪಾಲಿಶ್ ಆಗಬೇಕು ಹಾಗೂ ಕಟ್ಟಡದ ಹೊರಭಾಗಕ್ಕೆ ಬಣ್ಣ ಬಳಿಯಬೇಕು ಎಂದು ಮನವಿ ಮಾಡಲಾಗಿದೆ.

೧ ಕೋಟಿ ರೂ. ಮೊತ್ತದ ಅಂದಾಜು ಪಟ್ಟಿ ಸಲ್ಲಿಕೆ: ಕಟ್ಟಡಗಳ ದುರಸ್ತಿಯ ಅಗತ್ಯವಿರುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮಳೆ ಬಂದಾಗ ವಿವಿಧೆಡೆ ಸೋರುತ್ತದೆ. ಶಿಥಿಲಾವಸ್ಥೆಗೆ ತಲುಪಿರುವುದರಿಂದ ಎದುರಾಗ ಬಹುದಾದ ಅಪಾಯಗಳ ಬಗ್ಗೆಯೂ ತಿಳಿಸಲಾಗಿದೆ. ಪಾರಂಪರಿಕ ಕಟ್ಟಡವಾದ್ದರಿಂದ ಪುರಾತತ್ವ ಇಲಾಖೆ ಜತೆಗೂ ಪತ್ರ ವ್ಯವಹಾರ ನಡೆಸಿದ್ದೇವೆ. ಈಚೆಗೆ ಲೋಕೋಪಯೋಗಿ ಇಲಾಖೆ ಮೂಲಕ ೧ ಕೋಟಿ ರೂ. ಮೊತ್ತಕ್ಕೆ ಅಂದಾಜುಪಟ್ಟಿ ಸಲ್ಲಿಕೆಯಾಗಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ್ದಾರೆ. ಕಟ್ಟಡಗಳು ದುರಸ್ತಿ ಆಗುವವರೆಗೂ ಆತಂಕ ಇದ್ದದ್ದೇ ಎಂದು ‘ಆಂದೋಲನ’ ಪತ್ರಿಕೆಗೆ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಪಿ. ಸತ್ಯನಾರಾಯಣ ಮಾಹಿತಿ ನೀಡಿದರು.

ಆಗಮ ಕಲಿಕೆಗೆ ೧೫೦ ರಿಂದ ೨೦೦ ವಿದ್ಯಾರ್ಥಿಗಳು ದಾಖಲು: ಈ ಪಾಠಶಾಲೆಯಲ್ಲಿ ಕಳೆದ ವರ್ಷ ೭೦ ಮಕ್ಕಳು ಕಲಿತು ಹೋಗಿದ್ದಾರೆ. ಜೂನ್ ೧ರಿಂದ ಪ್ರವೇಶಾತಿ ಆರಂಭವಾಗಲಿದೆ. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಅರ್ಚಕರಾಗಿ ನೇಮಕಾತಿ ಹೊಂದ ಬೇಕಾದರೆ ಧಾರ್ಮಿಕ ದತ್ತಿ ಇಲಾಖೆ ಯಿಂದ ನಡೆಸುವ ಆಗಮ ಪರೀಕ್ಷೆ ಉತ್ತೀರ್ಣರಾಗಿರಬೇಕು. ಆದ್ದರಿಂದ, ಇಲ್ಲಿಗೆ ಆಗಮ ಕೋರ್ಸ್ ಓದಲೆಂದು ವಿವಿಧ ಜಿಲ್ಲೆಗಳ ಮಕ್ಕಳು ಬರುತ್ತಾರೆ. ೬ನೇ ತರಗತಿಗೆ ಇಲ್ಲಿ ಬಂದು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ.

ಇದರೊಂದಿಗೆ ಶಾಲಾ ಕಲಿಕೆಗೆಂದು ದಳವಾಯಿ, ಡಿ. ಬನುಮಯ್ಯ, ಜೆಎಸ್‌ಎಸ್, ಮರಿಮಲ್ಲಪ್ಪ ಮೊದಲಾದ ಶಾಲೆಗಳಿಗೂ ಹೋಗುತ್ತಾರೆ. ಆಗಮ(ಆಗಮ ಪ್ರವರ, ಆಗಮ ಪ್ರವೀಣ) ಕಲಿಯಲೆಂದೇ ವಾರ್ಷಿಕ ಸರಾಸರಿ ೧೫೦ ರಿಂದ ೨೦೦ ಮಂದಿ ಇರುತ್ತಾರೆ.

” ಮಳೆ ಬಂದಾಗ ನೀರು ಸೋರದಂತೆ ಮಾಡಿಕೊಡಬೇಕು. ಸುಣ್ಣ-ಬಣ್ಣ ಬಳಿಸಿಕೊಡಬೇಕು ಎಂದು ಕೋರಿದ್ದೇವೆ. ೧೦-೧೫ ವರ್ಷಗಳಿಂದ ನಮ್ಮ ಕಟ್ಟಡ ಬಣ್ಣ ಕಂಡಿಲ್ಲ. ಹಿಂದೆಲ್ಲಾ ದಸರಾ ಸಮಯದಲ್ಲಿ ನಮ್ಮ ಪಾಠಶಾಲೆಗೂ ಬಣ್ಣ ಬಳಿಯಲಾಗುತ್ತಿತ್ತು. ಆದರೆ, ಅದು ನಿಂತಿದೆ. ಪಾರಂಪರಿಕ ಕಟ್ಟಡವನ್ನು ಉತ್ತಮವಾಗಿ ದುರಸ್ತಿಪಡಿಸಿದರೆ ಸುರಕ್ಷತೆಯ ದೃಷ್ಟಿಯಿಂದ ಎದುರಾಗಿರುವ ಆತಂಕ ದೂರಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನಸೆಳೆದಿರುವೆ. ಜತೆಗೆ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರು ಅಂದಾಜು ಪಟ್ಟಿಯನ್ನು ಪರಿಶೀಲಿಸಿ ಅನುದಾನ ಬಿಡುಗಡೆಗೆ ಕ್ರಮವಹಿಸುವೆ ಎಂದು ತಿಳಿಸಿದ್ದಾರೆ.”

-ಪಿ. ಸತ್ಯನಾರಾಯಣ, ಪ್ರಾಂಶುಪಾಲರು, ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ

” ನಾನು ವಿದ್ಯಾಭ್ಯಾಸ ಮಾಡುವಾಗಲೂ ಕಟ್ಟಡದ ಗೋಡೆಗಳು ಶಿಥಿಲವಾಗಿದ್ದವು. ಮಳೆ ಬಂದರೆ ಸೋರುತ್ತಿದ್ದು ಪಾಠ ಕೇಳಲು ಆಗದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಶಾಲೆಯ ಭದ್ರತೆಗೆ ಸೆಕ್ಯುರಿಟಿ ಕೂಡ ಇಲ್ಲ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಗಮನಹರಿಸಿ ಕಟ್ಟಡದ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ವಿದ್ಯಾಥಿಗಳಿಗೆ ಅನುಕೂಲ ಮಾಡಿಕೊಡಬೇಕು.”

 -ಅಭಿಷೇಕ್ ಆರಾಧ್ಯ, ಹಳೆಯ ವಿದ್ಯಾರ್ಥಿ

” ಇದು ಮೈಸೂರಿನ ಹೃದಯ ಭಾಗದಲ್ಲಿರುವ ಕಟ್ಟಡವಾಗಿರುವುದರಿಂದ ಪಾರಂಪರಿಕ ನಗರಿಯ ಹೆಗ್ಗುರುತನ್ನು ನಾವು ಉಳಿಸಿಕೊಳ್ಳಬೇಕು. ಪಾರಂಪರಿಕತೆಯ ಮೌಲ್ಯವನ್ನು ನಾವು ಕಳೆದುಕೊಳ್ಳಬಾರದು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಂಸ್ಕೃತ ಶಾಲೆಯ ಕಟ್ಟಡವನ್ನು ಉಳಿಸಿಕೊಳ್ಳಬಹುದು. ಇದರಿಂದ ಶಿಥಿಲ ಕಟ್ಟಡದಿಂದಾಗುವ ಅನಾಹುತವನ್ನು ತಪ್ಪಿಸಬಹುದು.”

-ದೇವರಾಜು, ಸಾರ್ವಜನಿಕರು

 

 

ಆಂದೋಲನ ಡೆಸ್ಕ್

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

22 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

52 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago