Andolana originals

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್.

ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ… ಕುಳಿತುಕೊಳ್ಳಲು ಕುರ್ಚಿ ಇಲ್ಲ… ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ ಹೇಳಲಾಗದು… ಇನ್ನು ಸ್ವಚ್ಛತೆ ನಾಪತ್ತೆ ಎಂಬಂತಾಗಿದೆ. ಇಂತಹ ದುರವಸ್ಥೆ ಇರುವುದು ಸರ್ಕಾರಿ ಕಚೇರಿಯಲ್ಲಿ! ಅದರಲ್ಲೂ ಇಲ್ಲಿಗೆ ಬರುವ ವರು ಹೆಚ್ಚಾಗಿ ಮಹಿಳೆಯರು, ಮಕ್ಕಳು!  ವಿಜಯನಗರ ಎರಡನೇ ಹಂತದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಮೂಲಸೌಕರ್ಯಗಳೇ ಇಲ್ಲ. ಇಲ್ಲಿಗೆ ಹೆಚ್ಚಾಗಿ ಅಂಗನವಾಡಿ ಕಾರ್ಯಕರ್ತೆಯರು ಬರುತ್ತಾರೆ.

ಪ್ರತಿ ದಿನ ಕೆಲಸಕ್ಕೆ ಸಂಬಂಧಿತ ಅವರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ಆಶಯದಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಅಲ್ಲದೆ, ಸಾರ್ವಜನಿಕರು ತಮ್ಮ ಊರಿನ ಅಂಗನವಾಡಿ ಕೇಂದ್ರ, ಕಾರ್ಯಕರ್ತೆಯರು, ಸಹಾ ಯಕಿಯರ ಕಾರ್ಯವೈಖರಿ ಬಗ್ಗೆ ಮಾತನಾಡಲು ಈ ಕಚೇರಿಗೆ ಬರುತ್ತಾರೆ. ಒಮ್ಮೊಮ್ಮೆ ಸಂಜೆಯವರೆಗೂ ಕಾಯುವುದು ಅನಿವಾರ್ಯವಾಗುತ್ತದೆ.

ಇಂತಹ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಕುಡಿಯಲು ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳೇ ಇಲ್ಲ. ಕಚೇರಿ ಕಟ್ಟಡದ ಯಾವ ಭಾಗದಲ್ಲೂ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ದೂರದಿಂದ ಬರುವ ಜನರು ತಮ್ಮ ಕೆಲಸಕ್ಕೆ ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಬಾಯಾರಿಕೆಯಾದರೆ ಅಂಗಡಿಗಳಲ್ಲಿ ಹಣ ಕೊಟ್ಟು ನೀರು ಖರೀದಿಸಬೇಕಾಗಿದೆ.

ಇಲ್ಲಿರುವ ಶೌಚಾಲಯಕ್ಕೆ ಬೀಗವೇ ಇಲ್ಲದಂತಾಗಿದೆ. ಕಚೇರಿ ಸಿಬ್ಬಂದಿ ಮಾತ್ರ ಸುಸಜ್ಜಿತವಾದ ಶೌಚಾಲಯಗಳನ್ನು ಬಳಸುತ್ತಾರೆ.

ಉಳಿದ ಸಮಯದಲ್ಲಿ ಬಂದ್ ಮಾಡಲಾಗುತ್ತದೆ. ಅಂಗನವಾಡಿ ಸಿಬ್ಬಂದಿಗೆ ಬಳಕೆಗೆ ಅವಕಾಶವಿಲ್ಲ. ಹಾಗಾಗಿ ಅಶುಚಿತ್ವ ಶೌಚಾಲಯದಿಂದಾಗಿ ಅವರುಪಾಡು ಶೋಚನೀಯವಾಗಿದೆ. ವಿವಿಧ ವಿಭಾಗಗಳ ತ್ಯಾಜ್ಯಗಳು ಹಾಗೂ ಕಸ ಮತ್ತಿತರ ವಸ್ತುಗಳನ್ನುಕಟ್ಟಡದ ಸುತ್ತ ಎಲ್ಲೆಂದರಲ್ಲಿ ಎಸೆಯಲಾಗಿದೆ. ಕಟ್ಟಡದ ಒಳ ಆವರಣವನ್ನೂ ಬಿಡದೆ ಕಸ ಸುರಿಯಲಾಗಿದೆ.

” ಪಾರಂಪರಿಕ ಮತ್ತು ಸ್ವಚ್ಛ ನಗರ ಎಂದು ದೇಶದಲ್ಲೇ ಪ್ರಸಿದ್ಧಿ ಹೊಂದಿರುವ ಮೈಸೂರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲೇ ಅಶುಚಿತ್ವ ತಾಂಡವವಾಡುತ್ತಿದೆ ಎಂದರೆ ಅದು ನಾಚಿಕೆಗೇಡು. ಕನಿಷ್ಠ ತಮ್ಮ ಇಲಾಖೆಯ ಡಿ ಗ್ರೂಪ್ ನೌಕರರಿಂದ ಸ್ವಚ್ಛ ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಅವರು ತೋರುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಬೇಕು”

-ಹೆಸರು ಹೇಳಲಿಚ್ಛಿಸದ ಅಂಗನವಾಡಿ ಕಾರ್ಯಕರ್ತೆ

” ಸಮಸ್ಯೆ ಕುರಿತು ಈಗಷ್ಟೇ ತಿಳಿದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವ್ಯವಸ್ಥೆಯಾಗಿರುವ ಮೂಲ ಸೌಕರ್ಯಗಳನ್ನು ಸರಿಪಡಿಸಲಾಗುವುದು. ಜೊತೆಗೆ ನಮ್ಮ ಸಿಬ್ಬಂದಿಗಳಿಂದ ಅಶುಚಿತ್ವವಾದರೆ ಅವರಿಗೂ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಲಾಗುವುದು”

-ನಾಗರಾಜು, ಜಂಟಿ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

10 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

16 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago