Andolana originals

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್.

ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ… ಕುಳಿತುಕೊಳ್ಳಲು ಕುರ್ಚಿ ಇಲ್ಲ… ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ ಹೇಳಲಾಗದು… ಇನ್ನು ಸ್ವಚ್ಛತೆ ನಾಪತ್ತೆ ಎಂಬಂತಾಗಿದೆ. ಇಂತಹ ದುರವಸ್ಥೆ ಇರುವುದು ಸರ್ಕಾರಿ ಕಚೇರಿಯಲ್ಲಿ! ಅದರಲ್ಲೂ ಇಲ್ಲಿಗೆ ಬರುವ ವರು ಹೆಚ್ಚಾಗಿ ಮಹಿಳೆಯರು, ಮಕ್ಕಳು!  ವಿಜಯನಗರ ಎರಡನೇ ಹಂತದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಮೂಲಸೌಕರ್ಯಗಳೇ ಇಲ್ಲ. ಇಲ್ಲಿಗೆ ಹೆಚ್ಚಾಗಿ ಅಂಗನವಾಡಿ ಕಾರ್ಯಕರ್ತೆಯರು ಬರುತ್ತಾರೆ.

ಪ್ರತಿ ದಿನ ಕೆಲಸಕ್ಕೆ ಸಂಬಂಧಿತ ಅವರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ಆಶಯದಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಅಲ್ಲದೆ, ಸಾರ್ವಜನಿಕರು ತಮ್ಮ ಊರಿನ ಅಂಗನವಾಡಿ ಕೇಂದ್ರ, ಕಾರ್ಯಕರ್ತೆಯರು, ಸಹಾ ಯಕಿಯರ ಕಾರ್ಯವೈಖರಿ ಬಗ್ಗೆ ಮಾತನಾಡಲು ಈ ಕಚೇರಿಗೆ ಬರುತ್ತಾರೆ. ಒಮ್ಮೊಮ್ಮೆ ಸಂಜೆಯವರೆಗೂ ಕಾಯುವುದು ಅನಿವಾರ್ಯವಾಗುತ್ತದೆ.

ಇಂತಹ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಕುಡಿಯಲು ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳೇ ಇಲ್ಲ. ಕಚೇರಿ ಕಟ್ಟಡದ ಯಾವ ಭಾಗದಲ್ಲೂ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ದೂರದಿಂದ ಬರುವ ಜನರು ತಮ್ಮ ಕೆಲಸಕ್ಕೆ ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಬಾಯಾರಿಕೆಯಾದರೆ ಅಂಗಡಿಗಳಲ್ಲಿ ಹಣ ಕೊಟ್ಟು ನೀರು ಖರೀದಿಸಬೇಕಾಗಿದೆ.

ಇಲ್ಲಿರುವ ಶೌಚಾಲಯಕ್ಕೆ ಬೀಗವೇ ಇಲ್ಲದಂತಾಗಿದೆ. ಕಚೇರಿ ಸಿಬ್ಬಂದಿ ಮಾತ್ರ ಸುಸಜ್ಜಿತವಾದ ಶೌಚಾಲಯಗಳನ್ನು ಬಳಸುತ್ತಾರೆ.

ಉಳಿದ ಸಮಯದಲ್ಲಿ ಬಂದ್ ಮಾಡಲಾಗುತ್ತದೆ. ಅಂಗನವಾಡಿ ಸಿಬ್ಬಂದಿಗೆ ಬಳಕೆಗೆ ಅವಕಾಶವಿಲ್ಲ. ಹಾಗಾಗಿ ಅಶುಚಿತ್ವ ಶೌಚಾಲಯದಿಂದಾಗಿ ಅವರುಪಾಡು ಶೋಚನೀಯವಾಗಿದೆ. ವಿವಿಧ ವಿಭಾಗಗಳ ತ್ಯಾಜ್ಯಗಳು ಹಾಗೂ ಕಸ ಮತ್ತಿತರ ವಸ್ತುಗಳನ್ನುಕಟ್ಟಡದ ಸುತ್ತ ಎಲ್ಲೆಂದರಲ್ಲಿ ಎಸೆಯಲಾಗಿದೆ. ಕಟ್ಟಡದ ಒಳ ಆವರಣವನ್ನೂ ಬಿಡದೆ ಕಸ ಸುರಿಯಲಾಗಿದೆ.

” ಪಾರಂಪರಿಕ ಮತ್ತು ಸ್ವಚ್ಛ ನಗರ ಎಂದು ದೇಶದಲ್ಲೇ ಪ್ರಸಿದ್ಧಿ ಹೊಂದಿರುವ ಮೈಸೂರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲೇ ಅಶುಚಿತ್ವ ತಾಂಡವವಾಡುತ್ತಿದೆ ಎಂದರೆ ಅದು ನಾಚಿಕೆಗೇಡು. ಕನಿಷ್ಠ ತಮ್ಮ ಇಲಾಖೆಯ ಡಿ ಗ್ರೂಪ್ ನೌಕರರಿಂದ ಸ್ವಚ್ಛ ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಅವರು ತೋರುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಬೇಕು”

-ಹೆಸರು ಹೇಳಲಿಚ್ಛಿಸದ ಅಂಗನವಾಡಿ ಕಾರ್ಯಕರ್ತೆ

” ಸಮಸ್ಯೆ ಕುರಿತು ಈಗಷ್ಟೇ ತಿಳಿದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವ್ಯವಸ್ಥೆಯಾಗಿರುವ ಮೂಲ ಸೌಕರ್ಯಗಳನ್ನು ಸರಿಪಡಿಸಲಾಗುವುದು. ಜೊತೆಗೆ ನಮ್ಮ ಸಿಬ್ಬಂದಿಗಳಿಂದ ಅಶುಚಿತ್ವವಾದರೆ ಅವರಿಗೂ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಲಾಗುವುದು”

-ನಾಗರಾಜು, ಜಂಟಿ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago