Andolana originals

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ

ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ ಬ್ಲಾಕ್ ನಿರ್ಮಾಣ

೧೭೬ ತರಗತಿ ಕೊಠಡಿಗಳ ದುರಸ್ತಿಗೆ ಕ್ರಮ

೨೦೨೫-೨೬ನೇ ಹಣಕಾಸು ವರ್ಷದಲ್ಲೇ ಕಾಮಗಾರಿಗೆ ಸೂಚ

ಗಿರೀಶ್ ಹುಣಸೂರು

ಮೈಸೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಕೊಠಡಿಗಳ ಕೊರತೆ ಹೋಗಲಾಡಿಸಲು ಹೊಸ ತರಗತಿ ಕೊಠಡಿಗಳ ನಿರ್ಮಾಣ, ಶೌಚಾಲಯ ಬ್ಲಾಕ್‌ಗಳ ನಿರ್ಮಾಣ ಹಾಗೂ ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೭೨೫ ಕೋಟಿ ರೂ. ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ೫೦ ಕೋಟಿ ರೂ.ಗಳನ್ನು ಒದಗಿಸುವುದಾಗಿ ಪ್ರಕಟಿಸಿದ್ದರು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ಕ್ರಿಯಾ ಯೋಜನೆ ೨೦೨೫-೨೬ನೇ ಸಾಲಿಗೆ, ೨೦೨೩-೨೪ನೇ ಸಾಲಿನ ಏಕರೂಪ ದರಪಟ್ಟಿಯ ದರಗಳು ಹಾಗೂ ದರಪಟ್ಟಿಗೆ ಸಂಬಂಧಿಸಿದ ತಿದ್ದುಪಡಿಗಳನ್ನು ಅಳವಡಿಸಿಕೊಂಡು ಸಿದ್ಧಪಡಿಸಿ, ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಕ್ಕೆ ನಿಗದಿಪಡಿಸಲಾದ ಘಟಕ ವೆಚ್ಚಗಳನ್ನು ಮತ್ತು ಜಿಲ್ಲಾ ಉಪನಿರ್ದೇಶಕರಿಂದ ನಿಯಮಗಳ ಪ್ರಕಾರ ಜಿಲ್ಲಾಮಟ್ಟದ ಟೆಂಡರ್ ಮೂಲಕ ಲೋಕೋಪಯೋಗಿ ಇಲಾಖೆಯಿಂದ ನಿಯಮಾನು ಸಾರ ಅನುಷ್ಠಾನಗೊಳಿಸುವಂತೆ ತಿಳಿಸಲಾಗಿದೆ. ಇದ ರಿಂದಾಗಿ ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳಲ್ಲಿನ ೧೩೫ ಪದವಿಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ ೧೮೫ ಕೊಠಡಿಗಳು ನಿರ್ಮಾಣ ವಾಗಲಿವೆ. ರ‍್ಯಾಂಪ್ ಸಹಿತ ಪ್ರತಿ ಕೊಠಡಿ ನಿರ್ಮಾಣದ ಘಟಕ ವೆಚ್ಚವನ್ನು ೨೮.೨೫ ಲಕ್ಷ ರೂ. ನಿಗದಿಪಡಿಸಲಾಗಿದೆ. ೧೮೫ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ೫,೨೮೩.೮೫ ಲಕ್ಷ ರೂ. ಅನುದಾನ ನಿಗದಿಪಡಿಸಿದೆ. ಇನ್ನು ಈ ಜಿಲ್ಲೆಗಳಲ್ಲಿನ ಪಿಯು ಕಾಲೇಜುಗಳ ಪೈಕಿ ಬಾಲಕರ ೪೬ ಶೌಚಾಲಯ ಬ್ಲಾಕ್ ನಿರ್ಮಾಣಕ್ಕಾಗಿ ತಲಾ ೧೦.೬ ಲಕ್ಷ ರೂ., ಬಾಲಕಿಯರ ೫೦ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ ತಲಾ ೯.೯೫ ಲಕ್ಷ ರೂ.ಗಳನ್ನು ನಿಗದಿಪಡಿಸಿದ್ದು, ಒಟ್ಟಾರೆ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕೆ ೯೮೫.೧೦ ಲಕ್ಷರೂ. ನಿಗದಿಪಡಿಸಿದೆ. ರಾಜ್ಯದ ೧೭೬ ಪಿಯು ಕಾಲೇಜು ಕೊಠಡಿಗಳ ದುರಸ್ತಿಗಾಗಿ ೩೪೩.೪೩ ಲಕ್ಷ ರೂ. ಸೇರಿದಂತೆ ಒಟ್ಟಾರೆ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೬,೬೧೨.೩೮ ಲಕ್ಷ ರೂ. ಅನುದಾನವನ್ನು ನಿಗದಿಪಡಿಸಿ ಅನುಮೋದನೆ ನೀಡಲಾಗಿದೆ.

ಈ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾಯ ಜಿಪಂ ಸಿಇಒ ಹಾಗೂ ಡಿಡಿಪಿಯುಗಳದ್ದಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕಾಮಗಾರಿಗಳ ಅನುದಾನ ಬಳಕೆಯಲ್ಲಿ ಅಥವಾ ಅನುಷ್ಠಾನದಲ್ಲಿ ಯಾವುದೇ ಪುನರಾವರ್ತನೆ ಆಗದಂತೆ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಬೇಕು ಎಂದು ತಿಳಿಸಲಾಗಿದೆ.

ಸರ್ಕಾರಿ ಕಾಲೇಜು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ನಿಯಮಗಳನುಸಾರ ೨೮.೨೫ ಲಕ್ಷ ರೂ. ಘಟಕ ವೆಚ್ಚದಂತೆ ಕಾಮಗಾರಿ ನಿರ್ವಹಿಸಬೇಕು. ಉದ್ದೇಶಿತ ಕಾಮಗಾರಿಗಳನ್ನು ನಿರ್ದಿಷ್ಟಪಡಿಸಲಾದ ಸಂಸ್ಥೆಯಿಂದ ನಿಯಮಗಳನುಸಾರ ನಿರ್ವಹಿಸತಕ್ಕದ್ದು ಎಂದು ಹೇಳಲಾಗಿದೆ.

” ಅನುದಾನ ಬಳಕೆ ಮತ್ತು ಕಾಮಗಾರಿ ಅನುಷ್ಠಾನ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಷರತ್ತುಗಳು ಮತ್ತು ನಿಬಂಧನೆಗಳನ್ನು ವಿಧಿಸಲಾಗಿದ್ದು, ೨೦೨೫-೨೬ನೇ ಆರ್ಥಿಕ ಸಾಲಿನ ಅಂತ್ಯದೊಳಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.”

-ಆರ್.ವಿ.ಶುಭಮಂಗಳ , ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧಿನ ಕಾರ್ಯದರ್ಶಿ (ಯೋಜನೆ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ.

 

 

 

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

6 hours ago