Andolana originals

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ

ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ ಬ್ಲಾಕ್ ನಿರ್ಮಾಣ

೧೭೬ ತರಗತಿ ಕೊಠಡಿಗಳ ದುರಸ್ತಿಗೆ ಕ್ರಮ

೨೦೨೫-೨೬ನೇ ಹಣಕಾಸು ವರ್ಷದಲ್ಲೇ ಕಾಮಗಾರಿಗೆ ಸೂಚ

ಗಿರೀಶ್ ಹುಣಸೂರು

ಮೈಸೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಕೊಠಡಿಗಳ ಕೊರತೆ ಹೋಗಲಾಡಿಸಲು ಹೊಸ ತರಗತಿ ಕೊಠಡಿಗಳ ನಿರ್ಮಾಣ, ಶೌಚಾಲಯ ಬ್ಲಾಕ್‌ಗಳ ನಿರ್ಮಾಣ ಹಾಗೂ ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೭೨೫ ಕೋಟಿ ರೂ. ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ೫೦ ಕೋಟಿ ರೂ.ಗಳನ್ನು ಒದಗಿಸುವುದಾಗಿ ಪ್ರಕಟಿಸಿದ್ದರು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ಕ್ರಿಯಾ ಯೋಜನೆ ೨೦೨೫-೨೬ನೇ ಸಾಲಿಗೆ, ೨೦೨೩-೨೪ನೇ ಸಾಲಿನ ಏಕರೂಪ ದರಪಟ್ಟಿಯ ದರಗಳು ಹಾಗೂ ದರಪಟ್ಟಿಗೆ ಸಂಬಂಧಿಸಿದ ತಿದ್ದುಪಡಿಗಳನ್ನು ಅಳವಡಿಸಿಕೊಂಡು ಸಿದ್ಧಪಡಿಸಿ, ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಕ್ಕೆ ನಿಗದಿಪಡಿಸಲಾದ ಘಟಕ ವೆಚ್ಚಗಳನ್ನು ಮತ್ತು ಜಿಲ್ಲಾ ಉಪನಿರ್ದೇಶಕರಿಂದ ನಿಯಮಗಳ ಪ್ರಕಾರ ಜಿಲ್ಲಾಮಟ್ಟದ ಟೆಂಡರ್ ಮೂಲಕ ಲೋಕೋಪಯೋಗಿ ಇಲಾಖೆಯಿಂದ ನಿಯಮಾನು ಸಾರ ಅನುಷ್ಠಾನಗೊಳಿಸುವಂತೆ ತಿಳಿಸಲಾಗಿದೆ. ಇದ ರಿಂದಾಗಿ ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳಲ್ಲಿನ ೧೩೫ ಪದವಿಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ ೧೮೫ ಕೊಠಡಿಗಳು ನಿರ್ಮಾಣ ವಾಗಲಿವೆ. ರ‍್ಯಾಂಪ್ ಸಹಿತ ಪ್ರತಿ ಕೊಠಡಿ ನಿರ್ಮಾಣದ ಘಟಕ ವೆಚ್ಚವನ್ನು ೨೮.೨೫ ಲಕ್ಷ ರೂ. ನಿಗದಿಪಡಿಸಲಾಗಿದೆ. ೧೮೫ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ೫,೨೮೩.೮೫ ಲಕ್ಷ ರೂ. ಅನುದಾನ ನಿಗದಿಪಡಿಸಿದೆ. ಇನ್ನು ಈ ಜಿಲ್ಲೆಗಳಲ್ಲಿನ ಪಿಯು ಕಾಲೇಜುಗಳ ಪೈಕಿ ಬಾಲಕರ ೪೬ ಶೌಚಾಲಯ ಬ್ಲಾಕ್ ನಿರ್ಮಾಣಕ್ಕಾಗಿ ತಲಾ ೧೦.೬ ಲಕ್ಷ ರೂ., ಬಾಲಕಿಯರ ೫೦ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ ತಲಾ ೯.೯೫ ಲಕ್ಷ ರೂ.ಗಳನ್ನು ನಿಗದಿಪಡಿಸಿದ್ದು, ಒಟ್ಟಾರೆ ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕೆ ೯೮೫.೧೦ ಲಕ್ಷರೂ. ನಿಗದಿಪಡಿಸಿದೆ. ರಾಜ್ಯದ ೧೭೬ ಪಿಯು ಕಾಲೇಜು ಕೊಠಡಿಗಳ ದುರಸ್ತಿಗಾಗಿ ೩೪೩.೪೩ ಲಕ್ಷ ರೂ. ಸೇರಿದಂತೆ ಒಟ್ಟಾರೆ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ೬,೬೧೨.೩೮ ಲಕ್ಷ ರೂ. ಅನುದಾನವನ್ನು ನಿಗದಿಪಡಿಸಿ ಅನುಮೋದನೆ ನೀಡಲಾಗಿದೆ.

ಈ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾಯ ಜಿಪಂ ಸಿಇಒ ಹಾಗೂ ಡಿಡಿಪಿಯುಗಳದ್ದಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕಾಮಗಾರಿಗಳ ಅನುದಾನ ಬಳಕೆಯಲ್ಲಿ ಅಥವಾ ಅನುಷ್ಠಾನದಲ್ಲಿ ಯಾವುದೇ ಪುನರಾವರ್ತನೆ ಆಗದಂತೆ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಬೇಕು ಎಂದು ತಿಳಿಸಲಾಗಿದೆ.

ಸರ್ಕಾರಿ ಕಾಲೇಜು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ನಿಯಮಗಳನುಸಾರ ೨೮.೨೫ ಲಕ್ಷ ರೂ. ಘಟಕ ವೆಚ್ಚದಂತೆ ಕಾಮಗಾರಿ ನಿರ್ವಹಿಸಬೇಕು. ಉದ್ದೇಶಿತ ಕಾಮಗಾರಿಗಳನ್ನು ನಿರ್ದಿಷ್ಟಪಡಿಸಲಾದ ಸಂಸ್ಥೆಯಿಂದ ನಿಯಮಗಳನುಸಾರ ನಿರ್ವಹಿಸತಕ್ಕದ್ದು ಎಂದು ಹೇಳಲಾಗಿದೆ.

” ಅನುದಾನ ಬಳಕೆ ಮತ್ತು ಕಾಮಗಾರಿ ಅನುಷ್ಠಾನ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಷರತ್ತುಗಳು ಮತ್ತು ನಿಬಂಧನೆಗಳನ್ನು ವಿಧಿಸಲಾಗಿದ್ದು, ೨೦೨೫-೨೬ನೇ ಆರ್ಥಿಕ ಸಾಲಿನ ಅಂತ್ಯದೊಳಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.”

-ಆರ್.ವಿ.ಶುಭಮಂಗಳ , ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧಿನ ಕಾರ್ಯದರ್ಶಿ (ಯೋಜನೆ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ.

 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

10 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

13 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

13 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

13 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

13 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

13 hours ago