Andolana originals

ಓದುಗರ ಪತ್ರ: ಮೈಸೂರು ವಿವಿ ಪುನಶ್ಚೇತನಕ್ಕೆ ಸರ್ಕಾರ ಮುಂದಾಗಲಿ

ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ ಮೈಸೂರು ವಿಶ್ವವಿದ್ಯಾನಿಲಯ, ಮುಂದೆ ದೇಶದ ಹೆಮ್ಮೆಯ ಹಾಗೂ ಪ್ರತಿಷ್ಠಿತ ವಿವಿಯಾಗಿ ರೂಪುಗೊಂಡು, ದೇಶದ ಇತರೆ ವಿವಿಗಳಿಗೂ ಮಾದರಿಯಾಗಿತ್ತು. ಆದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ವಿಭಜನೆ ಮಾಡಿ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದ ನಂತರ, ಮೈಸೂರು ವಿವಿಯ ಅವನತಿ ಪ್ರಾರಂಭವಾಯಿತು.

ಪ್ರಸ್ತುತ ಮೈಸೂರು ವಿವಿಯ ಅನೇಕ ವಿಭಾಗಗಳಿಗೆ ಪ್ರವೇಶ ಶೂನ್ಯಮಟ್ಟಕ್ಕೆ ಇಳಿದಿರುವುದರ ಜೊತೆಗೆ, ಖಾಯಂ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಕೊರತೆ ಹೆಚ್ಚಾಗಿದೆ ಎಂದು ಹೇಳಲಾಗಿದ್ದು ಸರ್ಕಾರದ ಅನುದಾನ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದರಿಂದ ವಿವಿಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ.

ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರೇ ಹೇಳಿರುವ ಹಾಗೆ, ವಿವಿಯ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವುದಕ್ಕೆ ಆರ್ಥಿಕ ಸಮಸ್ಯೆ ಎದುರಾಗಿದೆ. ಅಂತರಿಕ ಸಂಪನ್ಮೂಲಗಳ ಕ್ರೋಡೀಕರಣ ಕಷ್ಟಸಾಧ್ಯವಾಗಿದೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ವಿದ್ಯಾರ್ಥಿಗಳ ಪ್ರವೇಶಾತಿಯ ಕೊರತೆಯಿಂದಾಗಿ, ೯ ಅಧ್ಯಯನ ವಿಭಾಗಗಳು ಮುಚ್ಚುವ ಭೀತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಮಧ್ಯ ಪ್ರವೇಶಿಸಿ, ಶತಮಾನದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದ ಪುನಶ್ಚೇತನಕ್ಕೆ ಮುಂದಾಗಬೇಕಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

5 mins ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

16 mins ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

29 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

10 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

12 hours ago