ಓದುಗರ ಪತ್ರ
ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ ಮೈಸೂರು ವಿಶ್ವವಿದ್ಯಾನಿಲಯ, ಮುಂದೆ ದೇಶದ ಹೆಮ್ಮೆಯ ಹಾಗೂ ಪ್ರತಿಷ್ಠಿತ ವಿವಿಯಾಗಿ ರೂಪುಗೊಂಡು, ದೇಶದ ಇತರೆ ವಿವಿಗಳಿಗೂ ಮಾದರಿಯಾಗಿತ್ತು. ಆದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ವಿಭಜನೆ ಮಾಡಿ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದ ನಂತರ, ಮೈಸೂರು ವಿವಿಯ ಅವನತಿ ಪ್ರಾರಂಭವಾಯಿತು.
ಪ್ರಸ್ತುತ ಮೈಸೂರು ವಿವಿಯ ಅನೇಕ ವಿಭಾಗಗಳಿಗೆ ಪ್ರವೇಶ ಶೂನ್ಯಮಟ್ಟಕ್ಕೆ ಇಳಿದಿರುವುದರ ಜೊತೆಗೆ, ಖಾಯಂ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಕೊರತೆ ಹೆಚ್ಚಾಗಿದೆ ಎಂದು ಹೇಳಲಾಗಿದ್ದು ಸರ್ಕಾರದ ಅನುದಾನ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದರಿಂದ ವಿವಿಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ.
ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರೇ ಹೇಳಿರುವ ಹಾಗೆ, ವಿವಿಯ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವುದಕ್ಕೆ ಆರ್ಥಿಕ ಸಮಸ್ಯೆ ಎದುರಾಗಿದೆ. ಅಂತರಿಕ ಸಂಪನ್ಮೂಲಗಳ ಕ್ರೋಡೀಕರಣ ಕಷ್ಟಸಾಧ್ಯವಾಗಿದೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ವಿದ್ಯಾರ್ಥಿಗಳ ಪ್ರವೇಶಾತಿಯ ಕೊರತೆಯಿಂದಾಗಿ, ೯ ಅಧ್ಯಯನ ವಿಭಾಗಗಳು ಮುಚ್ಚುವ ಭೀತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಮಧ್ಯ ಪ್ರವೇಶಿಸಿ, ಶತಮಾನದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದ ಪುನಶ್ಚೇತನಕ್ಕೆ ಮುಂದಾಗಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…