Andolana originals

ಓದುಗರ ಪತ್ರ: ಮೈಸೂರು ವಿವಿ ಪುನಶ್ಚೇತನಕ್ಕೆ ಸರ್ಕಾರ ಮುಂದಾಗಲಿ

ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ ಮೈಸೂರು ವಿಶ್ವವಿದ್ಯಾನಿಲಯ, ಮುಂದೆ ದೇಶದ ಹೆಮ್ಮೆಯ ಹಾಗೂ ಪ್ರತಿಷ್ಠಿತ ವಿವಿಯಾಗಿ ರೂಪುಗೊಂಡು, ದೇಶದ ಇತರೆ ವಿವಿಗಳಿಗೂ ಮಾದರಿಯಾಗಿತ್ತು. ಆದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ವಿಭಜನೆ ಮಾಡಿ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದ ನಂತರ, ಮೈಸೂರು ವಿವಿಯ ಅವನತಿ ಪ್ರಾರಂಭವಾಯಿತು.

ಪ್ರಸ್ತುತ ಮೈಸೂರು ವಿವಿಯ ಅನೇಕ ವಿಭಾಗಗಳಿಗೆ ಪ್ರವೇಶ ಶೂನ್ಯಮಟ್ಟಕ್ಕೆ ಇಳಿದಿರುವುದರ ಜೊತೆಗೆ, ಖಾಯಂ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಕೊರತೆ ಹೆಚ್ಚಾಗಿದೆ ಎಂದು ಹೇಳಲಾಗಿದ್ದು ಸರ್ಕಾರದ ಅನುದಾನ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದರಿಂದ ವಿವಿಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ.

ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರೇ ಹೇಳಿರುವ ಹಾಗೆ, ವಿವಿಯ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವುದಕ್ಕೆ ಆರ್ಥಿಕ ಸಮಸ್ಯೆ ಎದುರಾಗಿದೆ. ಅಂತರಿಕ ಸಂಪನ್ಮೂಲಗಳ ಕ್ರೋಡೀಕರಣ ಕಷ್ಟಸಾಧ್ಯವಾಗಿದೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ವಿದ್ಯಾರ್ಥಿಗಳ ಪ್ರವೇಶಾತಿಯ ಕೊರತೆಯಿಂದಾಗಿ, ೯ ಅಧ್ಯಯನ ವಿಭಾಗಗಳು ಮುಚ್ಚುವ ಭೀತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಮಧ್ಯ ಪ್ರವೇಶಿಸಿ, ಶತಮಾನದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದ ಪುನಶ್ಚೇತನಕ್ಕೆ ಮುಂದಾಗಬೇಕಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

53 mins ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

3 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

4 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

7 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

11 hours ago