Andolana originals

ಓದುಗರ ಪತ್ರ: ಮೈಸೂರು ವಿವಿ ಪುನಶ್ಚೇತನಕ್ಕೆ ಸರ್ಕಾರ ಮುಂದಾಗಲಿ

ಒಂದು ಕಾಲಕ್ಕೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯ, ಕಳೆದ ೨-೩ ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದು ಬೇಸರದ ಸಂಗತಿ. ೧೯೧೬ರಲ್ಲಿ ಪ್ರಾರಂಭವಾದ ಮೈಸೂರು ವಿಶ್ವವಿದ್ಯಾನಿಲಯ, ಮುಂದೆ ದೇಶದ ಹೆಮ್ಮೆಯ ಹಾಗೂ ಪ್ರತಿಷ್ಠಿತ ವಿವಿಯಾಗಿ ರೂಪುಗೊಂಡು, ದೇಶದ ಇತರೆ ವಿವಿಗಳಿಗೂ ಮಾದರಿಯಾಗಿತ್ತು. ಆದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ವಿಭಜನೆ ಮಾಡಿ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದ ನಂತರ, ಮೈಸೂರು ವಿವಿಯ ಅವನತಿ ಪ್ರಾರಂಭವಾಯಿತು.

ಪ್ರಸ್ತುತ ಮೈಸೂರು ವಿವಿಯ ಅನೇಕ ವಿಭಾಗಗಳಿಗೆ ಪ್ರವೇಶ ಶೂನ್ಯಮಟ್ಟಕ್ಕೆ ಇಳಿದಿರುವುದರ ಜೊತೆಗೆ, ಖಾಯಂ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಕೊರತೆ ಹೆಚ್ಚಾಗಿದೆ ಎಂದು ಹೇಳಲಾಗಿದ್ದು ಸರ್ಕಾರದ ಅನುದಾನ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದರಿಂದ ವಿವಿಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ.

ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರೇ ಹೇಳಿರುವ ಹಾಗೆ, ವಿವಿಯ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವುದಕ್ಕೆ ಆರ್ಥಿಕ ಸಮಸ್ಯೆ ಎದುರಾಗಿದೆ. ಅಂತರಿಕ ಸಂಪನ್ಮೂಲಗಳ ಕ್ರೋಡೀಕರಣ ಕಷ್ಟಸಾಧ್ಯವಾಗಿದೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ವಿದ್ಯಾರ್ಥಿಗಳ ಪ್ರವೇಶಾತಿಯ ಕೊರತೆಯಿಂದಾಗಿ, ೯ ಅಧ್ಯಯನ ವಿಭಾಗಗಳು ಮುಚ್ಚುವ ಭೀತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಮಧ್ಯ ಪ್ರವೇಶಿಸಿ, ಶತಮಾನದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದ ಪುನಶ್ಚೇತನಕ್ಕೆ ಮುಂದಾಗಬೇಕಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago