ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಕೆಲ ತಿಂಗಳ ಹಿಂದಷ್ಟೇ ಒಂದು ಬಸ್ ತಂಗುದಾಣವನ್ನು ನಿರ್ಮಿಸಲಾಯಿತು.
ಆದರೆ ಈ ಬಸ್ ತಂಗುದಾಣವನ್ನು ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸುತ್ತಲೂ ಗಿಡಗಂಟಿಗಳು ಬೆಳೆದುಕೊಂಡು ವಿದ್ಯಾರ್ಥಿಗಳು, ಉಪನ್ಯಾಸಕರು ಈ ನಿಲ್ದಾಣದೊಳಗೆ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಆಂದೋಲನ’ ದಿನಪತ್ರಿಕೆಯ ಶುಕ್ರವಾರದ ಸಂಚಿಕೆಯ ಓದುಗರ ಪತ್ರ ವಿಭಾಗದಲ್ಲಿ ‘ಬಸ್ ತಂಗುದಾಣದ ಸುತ್ತಲಿನ ಗಿಡಗಂಟಿ ತೆರವುಗೊಳಿಸಿ’ ಎಂಬ ಶೀರ್ಷಿಕೆಯಡಿ ನನ್ನದೊಂದು ಪತ್ರ ಪ್ರಕಟಗೊಂಡಿತ್ತು.
ಬಳಿಕ ಅಂತರಸಂತೆ ಗ್ರಾಮ ಪಂಚಾಯಿತಿಯವರು ಎಚ್ಚೆತ್ತುಕೊಂಡು ಬಸ್ ತಂಗುದಾಣದ ಸುತ್ತ ಬೆಳೆದುಕೊಂಡಿದ್ದ ಗಿಡಗಂಟಿಗಳನ್ನು ತೆರವು ಮಾಡಿಸಿದ್ದಾರೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…