ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಕೆಲ ತಿಂಗಳ ಹಿಂದಷ್ಟೇ ಒಂದು ಬಸ್ ತಂಗುದಾಣವನ್ನು ನಿರ್ಮಿಸಲಾಯಿತು.
ಆದರೆ ಈ ಬಸ್ ತಂಗುದಾಣವನ್ನು ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸುತ್ತಲೂ ಗಿಡಗಂಟಿಗಳು ಬೆಳೆದುಕೊಂಡು ವಿದ್ಯಾರ್ಥಿಗಳು, ಉಪನ್ಯಾಸಕರು ಈ ನಿಲ್ದಾಣದೊಳಗೆ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಆಂದೋಲನ’ ದಿನಪತ್ರಿಕೆಯ ಶುಕ್ರವಾರದ ಸಂಚಿಕೆಯ ಓದುಗರ ಪತ್ರ ವಿಭಾಗದಲ್ಲಿ ‘ಬಸ್ ತಂಗುದಾಣದ ಸುತ್ತಲಿನ ಗಿಡಗಂಟಿ ತೆರವುಗೊಳಿಸಿ’ ಎಂಬ ಶೀರ್ಷಿಕೆಯಡಿ ನನ್ನದೊಂದು ಪತ್ರ ಪ್ರಕಟಗೊಂಡಿತ್ತು.
ಬಳಿಕ ಅಂತರಸಂತೆ ಗ್ರಾಮ ಪಂಚಾಯಿತಿಯವರು ಎಚ್ಚೆತ್ತುಕೊಂಡು ಬಸ್ ತಂಗುದಾಣದ ಸುತ್ತ ಬೆಳೆದುಕೊಂಡಿದ್ದ ಗಿಡಗಂಟಿಗಳನ್ನು ತೆರವು ಮಾಡಿಸಿದ್ದಾರೆ.
-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…