Andolana originals

ಶಾಲೆ ಆವರಣದಲ್ಲಿ ಗ್ರಾಮೀಣ ಸಂಕ್ರಾಂತಿ ಆಚರಣೆ

ಭೇರ್ಯ ಮಹೇಶ್‌

ಭೇರ್ಯ : ಶಾಲಾ ಆವರಣದಲ್ಲಿ ರಾಶಿ ಹಾಕಿದ್ದ ರಾಗಿ, ಭತ್ತ ಪೂಜೆಗೆ ಸಿದ್ಧವಾಗಿದ್ದವು. ಸೀರೆ, ಪಂಚೆಯುಟ್ಟು ಗ್ರಾಮೀಣ ಸೊಗಡಿನಲ್ಲಿ ಕಂಗೊಳಿಸುತ್ತಿದ್ದ ವಿದ್ಯಾರ್ಥಿಗಳು ಭತ್ತ ಕುಟ್ಟುತ್ತಿದ್ದರು. ರಾಗಿ ಬೀಸಿ ಮುದ್ದೆಗೆ ಹಿಟ್ಟು ಸಿದ್ಧಪಡಿಸುವಲ್ಲಿ ತಲ್ಲೀನರಾಗಿದ್ದರು. ಮೊಸರು ಕಡೆದು ಬೆಣ್ಣೆ ತೆಗೆಯುತ್ತಿದ್ದರು. .

ಇಂತಹದೊಂದು ಅಪರೂಪದ ದೃಶ್ಯ ಸಮೀಪದ ಸುಗ್ಗನಹಳ್ಳಿ ಗ್ರಾಮದ ಹಾಸನ- ಮೈಸೂರು ಹೆದ್ದಾರಿಯ ಪಕ್ಕದಲ್ಲಿರುವ ವಿಜೇತ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕಂಡುಬಂದಿತು. ಶಾಲೆಯಲ್ಲಿ ಅಪ್ಪಟ ಹಳ್ಳಿ ಪರಿಸರದಲ್ಲಿ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಪೂಜೆಗೆ ನಾಟಿ ಹಸುಗಳು ಸಾಕ್ಷಿಯಾದವು.

ಸಂಕ್ರಾಂತಿಯ ಅಂಗವಾಗಿ ಶಾಲೆ ಯನ್ನು ವಿಶೇಷವಾಗಿ ಅಲಂಕರಿಸ ಲಾಗಿತ್ತು. ರಂಗೋಲಿ ಬಿಡಿಸಿ ಚಿತ್ತಾರ ಮೂಡಿಸಲಾಗಿತ್ತು. ಬಾಳೆಕಂದು, ಮಾವಿನ ತೋರಣ, ಕಬ್ಬಿನ ಜಲ್ಲೆ, ತೆಂಗಿನ ಗರಿಗಳು ಹಬ್ಬವನ್ನು ಕಳೆಗಟ್ಟುವಂತೆ ಮಾಡಿದ್ದವು. ಗೋ ಪೂಜೆ, ಆಹಾರ ತಯಾರಿಕೆ, ರಾಶಿ ಪೂಜೆಯಂತಹ ಸುಗ್ಗಿ ಹಬ್ಬಗಳು ಸಡಗರವನ್ನು ಹೆಚ್ಚಿಸಿದವು.

ಸಾಂಪ್ರದಾಯಿಕ ಉಡುಪು ತೊಟ್ಟು ಬಂದಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯವರು ಲಗುಬಗೆಯಿಂದ ಓಡಾಡುತ್ತಿದ್ದರು. ಬಿಳಿ ಪಂಚೆ, ಬಿಳಿ ಜುಬ್ಬಾ ಧರಿಸಿ ಪರಂಪರೆಯ ಹಿರಿಮೆಯನ್ನು ಸಾರಿದರು. ನೇಗಿಲ ನೊಗಕ್ಕೆ ಎತ್ತುಗಳನ್ನು ಹೂಡಿ ಉಳುಮೆ ಮಾಡಿದ ಪರಿ ಮೆಚ್ಚುವಂತಿತ್ತು. ಅಲಂಕೃತ ಎತ್ತಿನ ಗಾಡಿಗಳು ಆಕರ್ಷಕವಾಗಿದ್ದವು.

ಶಾಲೆಯ ಪ್ರವೇಶ ದ್ವಾರದ ಬಳಿ ಗೋ ಪೂಜೆ ನೆರವೇರಿಸುವ ಮೂಲಕ ಸಂಕ್ರಾಂತಿಯ ಸುಗ್ಗಿ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಮೆಕ್ಕೆಜೋಳ, ಭತ್ತ, ಕಡಲೆಕಾಳು, ಹೆಸರು ಕಾಳು, ಗೋಽ, ಬೆಲ್ಲ, ಅಡಿಕೆ, ಸಬ್ಬಕ್ಕಿ, ಸಿರಿಧಾನ್ಯ, ಕೆಂಪಕ್ಕಿ ಸೇರಿ ಹಲವು ಧಾನ್ಯಗಳ ರಾಶಿಗೆ ನಮಿಸಲಾಯಿತು.

ಹಸುಗಳಿಗೆ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣು ತಿನ್ನಿಸಲಾಯಿತು. ಪಂಚಾಯಿತಿ ಕಟ್ಟೆ, ನೇಗಿಲಯೋಗಿ, ಬಳೆಗಾರ ವೇಷಧಾರಿಗಳು ಕಣ್ಮನ ಸೆಳೆದರು. ಪೂಜೆಯ ನಂತರ ಎಲ್ಲರಿಗೂ ಎಳ್ಳು, ಬೆಲ್ಲ, ಕಬ್ಬು ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು. ಒಟ್ಟಾರೆ ಮಕ್ಕಳು ಸಂಕ್ರಾಂತಿ ಸಂಭ್ರಮದಲ್ಲಿ ಮಿಂಚಿ ಮಿಂದೆದ್ದರು.

ಶಾಲಾ ಮಕ್ಕಳನ್ನು ಸಿಂಗಾರಗೊಳಿಸಿದ ಎತ್ತಿನಗಾಡಿಯಲ್ಲಿ ಕೂರಿಸಿಕೊಂಡು ಶಾಲೆಯ ಸಂಸ್ಥಾಪಕ ಹೆಚ್. ಎಸ್. ಮಹೇಶ್ ಮೆರವಣಿಗೆ ಮಾಡಿ, ಗ್ರಾಮೀಣ ಪ್ರದೇಶದಲ್ಲಿ ಆಚರಿಸುವ ಸಂಕ್ರಾಂತಿ ಹಬ್ಬದ ಬಗ್ಗೆ ಮಕ್ಕಳಿಗೆ ಮನದಟ್ಟು ಮಾಡಿದರು.

ಹೊಸ ಅಗ್ರಹಾರ ಗ್ರಾ. ಪಂ. ಅಧ್ಯಕ್ಷ ಮಲ್ಲಿಕಾರ್ಜುನ, ವಿಜೇತ ಇಂಟರ್ ನ್ಯಾಷನಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷೆ ಬೇಬಿ ಮಹೇಶ್, ಕಾರ್ಯದರ್ಶಿ ಹೆಚ್. ಎಸ್. ಶ್ವೇತ, ಸಹಕಾರ ಸಂಘದ ನಿರ್ದೇಶಕ ರಾಮೇಗೌಡ, ಉದ್ಯಮಿ ಪ್ರಕಾಶ್, ಶಾಲಾ ಶಿಕ್ಷಕರು, ಮಕ್ಕಳು, ಪೋಷಕರು ಹಾಜರಿದ್ದರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago