Andolana originals

ನಾಳೆ ಅದ್ಧೂರಿ ಜಂಬೂಸವಾರಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಅರಮನೆ ನಗರಿ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ.

ನವರಾತ್ರಿ ಶುರುವಾದ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನ ರಾಜಬೀದಿಗಳಲ್ಲಿ ವಿಜಯದಶಮಿ ದಿನವಾದ ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರವಣಿಗೆಯನ್ನು ನೋಡಲು ಲಕ್ಷಾಂತರ ಮಂದಿ ಕಾತರದಿಂದ ಕಾಯುತ್ತಿದ್ದಾರೆ.

ಅ.2ರ ಗುರುವಾರ ಮಧ್ಯಾಹ್ನ 1 ರಿಂದ 1.18 ರೊಳಗೆ ಅರಮನೆಯ ಬಲರಾಮ ದ್ವಾರ ದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಬೂಸವಾರಿಗೆ ನಾಂದಿ ಹಾಡುವರು. ಸಂಜೆ 4.42 ರಿಂದ 5.06 ರೊಳಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ತರುವ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವಮೂರ್ತಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.

ಈ ಬಾರಿಯೂ ಸುಮಾರು ಎರಡು ಗಂಟೆಗಳ ಕಾಲ ತಡವಾಗಿ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಹೊರಡಲಿದ್ದಾನೆ. ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಜನರು ಸಮೃದ್ಧಿಯಾಗಿರುವ ಕಾರಣ ಅದ್ದೂರಿ ದಸರಾ ಮಹೋತ್ಸವ ಆಚರಿಸಲು ಸರ್ಕಾರ ತೀರ್ಮಾನಿಸಿ ಅದರಂತೆ ಕಾರ್ಯಕ್ರಮ ರೂಪಿಸಿತ್ತು.

ನಾಡಹಬ್ಬ ಉದ್ಘಾಟಕರ ಆಯ್ಕೆಯ ವಿಚಾರದಲ್ಲಿ ಪರ-ವಿರುದ್ಧ ಚರ್ಚೆ ನಡುವೆಯೂ ಚಾಮುಂಡಿಬೆಟ್ಟದಲ್ಲಿ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ನಡೆದುಕೊಂಡ ರೀತಿ ಇಡೀ ನಾಡಿನ ಗಮನ ಸೆಳೆಯುವ ಜತೆಗೆ ಟೀಕಾಕಾರರ ಬಾಯಿ ಮುಚ್ಚಿಸಿತ್ತು.

ವಿಜಯದಶಮಿಗೆ ಲಕ್ಷಾಂತರ ಜನರ ಆಗಮನ ನಿರೀಕ್ಷೆ
ನವರಾತ್ರಿ ಆರಂಭವಾದ ದಿನದಿಂದ ಪ್ರವಾಸಿಗರು ಬರುತ್ತಿದ್ದರೂ, ಕಳೆದ ನಾಲೈದು ದಿನಗಳಿಂದ ಮೈಸೂರಿಗೆ ಸಾವಿರಾರು ಪ್ರವಾಸಿಗರು ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ವಿಜಯದಶಮಿ ದಿನದಂದು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಪ್ರವಾಸಿಗರ ದಂಡೇ ಹರಿದು ಬರತೊಡಗಿದ್ದು, ಅಂದು ಸ್ಥಳೀಯರು, ಸುತ್ತಮುತ್ತಲ ಪ್ರದೇಶಗಳಿಂದ ಬಂದು ಸೇರುವುದರಿಂದ ಅಂದಾಜು ಐದಾರು ಲಕ್ಷ ಜನರು ಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ:-ಮೈಸೂರು | ಆಯುಧಪೂಜೆ, ವಿಜಯದಶಮಿಗೆ ಖರೀದಿ ಭರಾಟೆ ಜೋರು

ವಿಜಯದಶಮಿ ಮೆರವಣಿಗೆಯಲ್ಲಿ 31 ಜಿಲ್ಲಾ ಪಂಚಾಯಿತಿಗಳು, ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿಗಳು ಸೇರಿ 58 ಸ್ತಬ್ಧಚಿತ್ರಗಳು, 125ಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಭಾಗವಹಿಸಲಿವೆ. ಇದರೊಂದಿಗೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಸೇರಿ ಇತರ ಗಜಪಡೆ, ಅಶ್ವಾರೋಹಿ ಪಡೆಗಳು, ಆನೆಗಾಡಿಗಳು ಪಾಲ್ಗೊಳ್ಳಲಿವೆ.

ಏಳು ಮಂದಿಗೆ ಅವಕಾಶ:
ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ವೇಳೆ ಶಿಷ್ಟಾಚಾರದ ಪ್ರಕಾರ ಏಳು ಮಂದಿ ಗಣ್ಯರಿಗೆ ಮಾತ್ರ ಅವಕಾಶವಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು, ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಅವರಿಗೆ ವೇದಿಕೆ ಏರಲು ಮಾತ್ರ ಅವಕಾಶವಿದೆ. ಉಳಿದಂತೆ ಇತರೆ ಜನಪ್ರತಿನಿಧಿಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ, ಬೇರೆಯವರು ವೇದಿಕೆ ಏರದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ.

ರಾತ್ರಿ 7ಕ್ಕೆ ಪಂಜಿನ ಕವಾಯತು:
ಜಂಬೂಸವಾರಿ ನಂತರ ನಗರದ ಬನ್ನಿಮಂಟಪದ ಮೈದಾನದಲ್ಲಿ ಸಂಜೆ 7ಕ್ಕೆ ಪಂಜಿನ ಕವಾಯತು(ಟಾರ್ಚ್ ಲೈಟ್ ಪೆರೇಡ್) ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಚಿಮಾದ ಕೆ.ವೆಂಕಟೇಶ್, ಡಾ.ಜಿ. ಪರಮೇಶ್ವರ್, ರಾಜ ವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಅನೇಕರು ಉಪಸ್ಥಿತರಿರುತ್ತಾರೆ.

ನಾಡಗೀತೆ ಬಳಿಕ ಎರಡು ಗಂಟೆಗಳ ಕಾಲ ನಡೆಯುವ ಸಾಹಸಮಯ, ರೋಮಾಂಚನಕಾರಿ ಸಾಹಸ ಪ್ರದರ್ಶನ, ಮೈನವಿರೇಳಿಸುವ ಬೈಕ್, ಅಶ್ವಾರೋಹಿ ಪಡೆಗಳ ಸಾಹಸ ಚಮತ್ಕಾರ, ಡೋನ್ ಶೋ ನಡೆಯುವ ಮೂಲಕ ಹನ್ನೊಂದು ದಿನಗಳ ಕಾಲದ ನಾಡಹಬ್ಬಕ್ಕೆ ತೆರೆ ಬೀಳಲಿದೆ.

ಸಕಲ ಸಿದ್ಧತೆ
ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಗಜಪಡೆ ತಾಲೀಮು ನಡೆಸಿದ್ದು, ಮೆರವಣಿಗೆಗೆ ಸಜ್ಜಾಗಿವೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

2 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

2 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

3 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

3 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

4 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

12 hours ago