Andolana originals

ಮಗಳು, ಮೊಮ್ಮಗಳ ಜೀವ ಉಳಿಸಿ ಕತ್ತಲಲ್ಲಿ ಕಣ್ಮರೆಯಾದ ಅಜ್ಜಿ

  • ಸಾಲೋಮನ್‌

ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ… ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ… ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ ಕಳುಹಿಸಿ, ಇನ್ನೇನು ತಾನು ಹತ್ತಬೇಕು ಎನ್ನುವಷ್ಟ ರಲ್ಲಿ ನೆಲ ಕುಸಿಯಿತು! ಕ್ಷಣ ಮಾತ್ರದಲ್ಲಿ ಅಜ್ಜಿ ಕಾರಿರುಳಲ್ಲಿ ಪ್ರವಾಹದಲ್ಲಿ ಕಣ್ಮರೆಯಾಗಿಬಿಟ್ಟರು…

ಇದು ವಯನಾಡಿನ ‘ವೆಲ್ಲಮಲಾ ಶಾಲೆ ಸಮೀಪದಲ್ಲಿ ನಡೆದ ಘಟನೆ. ದುರಂತದಲ್ಲಿ ಊರಿಗೆ ಊರೇ ಕೊಚ್ಚಿ ಹೋಗಿ ಸ್ಮಶಾನವಾದ ಪ್ರದೇಶದಿಂದ ರಾತೋರಾತ್ರಿ ಜೀವ ಉಳಿಸಿಕೊಂಡು ಗಡಿಭಾಗದ ಮೇಪ್ಪಾಡಿಯ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತ ಮಹೇಶ್ ‘ಆಂದೋಲನ’ ದಿನಪತ್ರಿಕೆಯೊಂದಿಗೆ ಮಾತನಾಡುತ್ತಾ ತಮ್ಮ ಅನುಭವವನ್ನು ಹಂಚಿಕೊಂಡರು.

ಘಟನೆ ನಡೆದ ಆ ಕರಾಳ ರಾತ್ರಿಯಲ್ಲಿ ‘ಸೆಂಟ್ರಲ್ ರಾಕ್ ಎಸ್ಟೇಟ್’ನಲ್ಲಿದ್ದ ಮಹೇಶ್ ಹಾಗೂ ಅವರ ತಂದೆ-ತಾಯಿಯನ್ನು ನೆರೆಮನೆಯವರು ಕೂಗಿ ಕೊಂಡು ಎಚ್ಚರಿಸಿದಾಗ ರಾತ್ರಿ 1.30. ಅಕ್ಕ ಪಕ್ಕದ ಮೂರ್ನಾಲ್ಕು ಮನೆಗಳಿಗೆ ನೀರು ನುಗ್ಗಿತ್ತು. ಅದರಿಂದ ಆ ಮನೆಗಳವರು ಸುರಕ್ಷತೆಗಾಗಿ ಎತ್ತರದ ಪ್ರದೇಶದ ಕಡೆಗೆ ಹೋಗುತ್ತಿದ್ದರು. ಎಸ್ಟೇಟ್‌ನಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಇದ್ದರು, ಸುಮಾರು 20 ಮಂದಿ ಎಚ್ಚೆತ್ತು ಬೇರೆ ಸ್ಥಳಕ್ಕೆ ಹೋದರು. ಒಂದಷ್ಟು ಜನರು ಪ್ರವಾಹದಲ್ಲಿ ಕೊಚ್ಚಿ ಹೋದರು ಎಂದು ತಿಳಿದು ಬಂತು. ಬಹಳ ಕತ್ತಲು ಇದ್ದುದರಿಂದ ಸುತ್ತಲೂ ಏನು ನಡೆಯುತ್ತಿದೆ ಎಂದು ಗೊತ್ತೇ ಆಗುತ್ತಿರಲಿಲ್ಲ. ಕೊಚ್ಚಿಹೋದ ಅಜ್ಜಿಯ ಬದುಕುಳಿದ ಮಗಳು, ಮೊಮ್ಮಗಳು ನನ್ನೊಂದಿಗೆ ದುರಂತವನ್ನು ವಿವರಿಸಿದರು ಎಂದು ಮಹೇಶ್ ಸ್ಮರಿಸಿದರು.

ಅದು ಮಂಜರೆ ಗ್ರಾಮ, ಸುಮಾರು 500 ಮನೆಗಳಿದ್ದಿರಬಹುದು. ಅವುಗಳೆಲ್ಲ ಕೊಚ್ಚಿಹೋಗಿವೆ. ಬೆಳಿಗ್ಗೆ 6 ಗಂಟೆ ಹೊತ್ತಿಗೆ ಸೂರ್ಯೋದಯ ವಾದಾಗಲೇ, ಇಡೀ ಪ್ರದೇಶ ಕೊಚ್ಚಿ ಹೋಗಿ ಕೆಸರು ಗದ್ದೆಯಂತಾಗಿದ್ದು ಗೊತ್ತಾಯಿತು. ನಿತ್ಯ ನಮ್ಮೊಟ್ಟಿಗೆ ಪ್ರೀತಿಯಿಂದ ಮಾತನಾಡುತ್ತಾ ಕಷ್ಟು ಸುಖ ಹಂಚಿಕೊಂಡವರು ಬೆಳಗಾಗುವಷ್ಟರಲ್ಲಿ ಕಣ್ಣೆದುರೇ ಹೆಣವಾಗಿ ಇಡೀ ದೇಹವೆಲ್ಲ ಸಂಪೂರ್ಣ ಕೆಸರಾಗಿ ಗುರುತೇ ಸಿಗದಂತಾಗಿದ್ದವು ಎಂದ ಮಹೇಶ್ ಅವರ ಧ್ವನಿಯಲ್ಲಿ ಅಪಾರ ನೋವು ಇತ್ತು.

“ಅದು ನನ್ನ ಬದುಕಿನ ಕರಾಳ ರಾತ್ರಿ’
ಸೋಮವಾರ ರಾತ್ರಿ ಬದುಕಿನ ಕರಾಳ ರಾತ್ರಿಯಾಗಿದ್ದು, ಮಂಗಳವಾರ ಮುಂಜಾನೆ ಆ ಭೀಕರತೆಯನ್ನು ನೋಡಿ ಇಡೀ ದೇಹ ಕಂಪಿಸುತ್ತಿತ್ತು. ಈ ಸುಂದರ ಪ್ರದೇಶ ಹೀಗೆ ಕೆಸರಿನಂತೆ ಆಗುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಅಚ್ಚ ಹಸಿರಾಗಿ ಮೋಹಕ ನಗು ಬೀರುತ್ತಿದ್ದ ಊರನ್ನೇ ಆಪೋಶನ ತೆಗೆದುಕೊಂಡು ರೌದ್ರ ರೂಪ ತಾಳಿ ಅಟ್ಟಹಾಸ ಮೆರೆಯುತ್ತಿದೆ ಅನಿಸುತ್ತಿದೆ.

ಮಹೇಶ್, ಮೇಪ್ಪಾಡಿ, ವಯನಾಡು ಜಿಲ್ಲೆ, ಕೇರಳ

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago