Andolana originals

ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ವಶ

‘ಆಂದೋಲನ’ ಪ್ರತಿನಿಧಿ ನೀಡಿದ ಮಾಹಿತಿ ಮೇರೆಗೆ ಪೊಲೀಸರಿಂದ ಕಾರ್ಯಾಚರಣೆ
ಮಂಜು ಕೋಟೆ

ಎಚ್.ಡಿ.ಕೋಟೆ: ಅಕ್ರಮವಾಗಿ ಶೇಖರಣೆ ಮಾಡಿ ಸಾಗಣೆ ಮಾಡಲು ಮುಂದಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಇಟ್ನಾ ಹುಲಿಕುರ, ಹುನಗನಹಳ್ಳಿ, ಮನುಗನಹಳ್ಳಿ, ಲಂಕೆ, ಬೆಳತೂರು, ಸವೆ ಇನ್ನಿತರ ಗ್ರಾಮಗಳ ವ್ಯಾಪ್ತಿಯಲ್ಲಿರುವ ಸಾಮಾಜಿಕ ಅರಣ್ಯ ಪ್ರದೇಶದ ಬೆಟ್ಟದಲ್ಲಿರುವ ಬೆಲೆ ಬಾಳುವ ಕಲ್ಲುಗಳನ್ನು ಕೆಲವರು ಅಕ್ರಮವಾಗಿ ಸಂಗ್ರಹಿಸಿ ರಾತ್ರೋರಾತ್ರಿ ಲಾರಿಗಳ ಮೂಲಕ ತಮಿಳುನಾಡು, ರಾಜಸ್ಥಾನ, ಕೇರಳ ರಾಜ್ಯ ಗಳಿಗೆ ಸಾಗಿಸುತ್ತಿದ್ದು, ಈ ದಂಧೆಗೆ ಕಡಿವಾಣ ಹಾಕಲು ಹತ್ತು ವರ್ಷಗಳ ಹಿಂದೆಯೇ ಅಂದಿನ ಜಿಲ್ಲಾಧಿಕಾರಿಗಳು, ತಹಸಿಲ್ದಾರ್, ಎಸ್‌ಪಿ, ಸರ್ಕಲ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ, ಮತ್ತೆ ಗಣಿಗಾರಿಕೆ ಕೆಲವು ತಿಂಗಳಿನಿಂದ ಗೌಪ್ಯವಾಗಿ ನಡೆಯುತ್ತಿರುವುದು ಕಂಡುಬಂದಿದೆ.

ಕಬಿನಿ ಜಲಾಶಯದ ಬಳಿ ಇರುವ ಗಣೇಶ್‌ ಗುಡಿ ಗ್ರಾಮದಲ್ಲಿನ ತಾರಕ ನಾಲೆ ಸಮೀಪದ ದೀಪಕ್ ಎಂಬುವರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹಲವು ಗ್ರಾಮಗಳ ವ್ಯಾಪ್ತಿಯಿಂದ ಅಕ್ರಮವಾಗಿ ಗ್ರಾನೈಟ್ ಗಣಿಗಾರಿಕೆಯ ಕಲ್ಲುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಶೇಖರಣೆ ಮಾಡಿ, ಶನಿವಾರ ರಾತ್ರಿ ಜೆಸಿಬಿ ಮೂಲಕ ಟಿಪ್ಪರ್‌ಗೆ ತುಂಬಿಸಿಕೊಂಡು ಹೊರ ರಾಜ್ಯಕ್ಕೆ ಕಳಿಸುತ್ತಿದ್ದ ವಿಚಾರ ತಿಳಿದ ‘ಆಂದೋಲನ’ ಪ್ರತಿನಿಧಿ ತಕ್ಷಣ ಅಂತರಸಂತೆ ಸಬ್ ಇನ್‌ಸ್ಪೆಕ್ಟರ್ ಚಂದ್ರಹಾಸ್ ಅವರಿಗೆ ತಿಳಿಸಿದರು. ತಕ್ಷಣ ಚಂದ್ರಹಾಸ್ ಮತ್ತು ಗೋಪಾಲ್‌, ಇನ್ನಿತರ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಟಿಪ್ಪರ್ ಮತ್ತು ಗಣಿಗಾರಿಕೆಯ ಗ್ರಾನೈಟ್ ಕಲ್ಲು, ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ಕಲ್ಲುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ, ಪರೀಕ್ಷೆ ಮಾಡಿ, ವರದಿ ನೀಡುವಂತೆ ತಿಳಿಸಿದ್ದಾರೆ.

‘ಆಂದೋಲನ’ ಪ್ರತಿನಿಧಿ ಮೂಲಕ ವಿಷಯ ತಿಳಿದ ತಕ್ಷಣ ನಾನು ಮತ್ತು ಸಿಬ್ಬಂದಿ ಹೋಗಿ ಗ್ರಾನೈಟ್ ಕಲ್ಲುಗಳನ್ನು ತುಂಬಿಕೊಂಡಿದ್ದ ವಾಹನ ಮತ್ತು ಅದಕ್ಕೆ ಬಳಸುತ್ತಿದ್ದ ಜೆಸಿಬಿಯನ್ನು ವಶಪಡಿಸಿಕೊಂಡಿದ್ದೇವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಚಂದ್ರಹಾಸ, ಎಸ್‌ಐ, ಅಂತರಸಂತೆ

ತಾಲ್ಲೂಕಿನಲ್ಲಿ ಯಾವುದೇ ಗಣಿಗಾರಿಕೆ ಮತ್ತು ಅಕ್ರಮಗಳು ನಡೆಯಲು ಬಿಡುವುದಿಲ್ಲ. ಪೊಲೀಸರು ವಶಪಡಿಸಿಕೊಂಡಿರುವ ಗಣಿಗಾರಿಕೆ ಕಲ್ಲುಗಳ ಬಗ್ಗೆ ಪರಿಶೀಲಿಸಿ ನಮ್ಮ ಇಲಾಖೆಯಿಂದಲೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

-ಶ್ರೀನಿವಾಸ್, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

14 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

33 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

2 hours ago