Andolana originals

ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ವಶ

‘ಆಂದೋಲನ’ ಪ್ರತಿನಿಧಿ ನೀಡಿದ ಮಾಹಿತಿ ಮೇರೆಗೆ ಪೊಲೀಸರಿಂದ ಕಾರ್ಯಾಚರಣೆ
ಮಂಜು ಕೋಟೆ

ಎಚ್.ಡಿ.ಕೋಟೆ: ಅಕ್ರಮವಾಗಿ ಶೇಖರಣೆ ಮಾಡಿ ಸಾಗಣೆ ಮಾಡಲು ಮುಂದಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಇಟ್ನಾ ಹುಲಿಕುರ, ಹುನಗನಹಳ್ಳಿ, ಮನುಗನಹಳ್ಳಿ, ಲಂಕೆ, ಬೆಳತೂರು, ಸವೆ ಇನ್ನಿತರ ಗ್ರಾಮಗಳ ವ್ಯಾಪ್ತಿಯಲ್ಲಿರುವ ಸಾಮಾಜಿಕ ಅರಣ್ಯ ಪ್ರದೇಶದ ಬೆಟ್ಟದಲ್ಲಿರುವ ಬೆಲೆ ಬಾಳುವ ಕಲ್ಲುಗಳನ್ನು ಕೆಲವರು ಅಕ್ರಮವಾಗಿ ಸಂಗ್ರಹಿಸಿ ರಾತ್ರೋರಾತ್ರಿ ಲಾರಿಗಳ ಮೂಲಕ ತಮಿಳುನಾಡು, ರಾಜಸ್ಥಾನ, ಕೇರಳ ರಾಜ್ಯ ಗಳಿಗೆ ಸಾಗಿಸುತ್ತಿದ್ದು, ಈ ದಂಧೆಗೆ ಕಡಿವಾಣ ಹಾಕಲು ಹತ್ತು ವರ್ಷಗಳ ಹಿಂದೆಯೇ ಅಂದಿನ ಜಿಲ್ಲಾಧಿಕಾರಿಗಳು, ತಹಸಿಲ್ದಾರ್, ಎಸ್‌ಪಿ, ಸರ್ಕಲ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ, ಮತ್ತೆ ಗಣಿಗಾರಿಕೆ ಕೆಲವು ತಿಂಗಳಿನಿಂದ ಗೌಪ್ಯವಾಗಿ ನಡೆಯುತ್ತಿರುವುದು ಕಂಡುಬಂದಿದೆ.

ಕಬಿನಿ ಜಲಾಶಯದ ಬಳಿ ಇರುವ ಗಣೇಶ್‌ ಗುಡಿ ಗ್ರಾಮದಲ್ಲಿನ ತಾರಕ ನಾಲೆ ಸಮೀಪದ ದೀಪಕ್ ಎಂಬುವರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹಲವು ಗ್ರಾಮಗಳ ವ್ಯಾಪ್ತಿಯಿಂದ ಅಕ್ರಮವಾಗಿ ಗ್ರಾನೈಟ್ ಗಣಿಗಾರಿಕೆಯ ಕಲ್ಲುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಶೇಖರಣೆ ಮಾಡಿ, ಶನಿವಾರ ರಾತ್ರಿ ಜೆಸಿಬಿ ಮೂಲಕ ಟಿಪ್ಪರ್‌ಗೆ ತುಂಬಿಸಿಕೊಂಡು ಹೊರ ರಾಜ್ಯಕ್ಕೆ ಕಳಿಸುತ್ತಿದ್ದ ವಿಚಾರ ತಿಳಿದ ‘ಆಂದೋಲನ’ ಪ್ರತಿನಿಧಿ ತಕ್ಷಣ ಅಂತರಸಂತೆ ಸಬ್ ಇನ್‌ಸ್ಪೆಕ್ಟರ್ ಚಂದ್ರಹಾಸ್ ಅವರಿಗೆ ತಿಳಿಸಿದರು. ತಕ್ಷಣ ಚಂದ್ರಹಾಸ್ ಮತ್ತು ಗೋಪಾಲ್‌, ಇನ್ನಿತರ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಟಿಪ್ಪರ್ ಮತ್ತು ಗಣಿಗಾರಿಕೆಯ ಗ್ರಾನೈಟ್ ಕಲ್ಲು, ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ಕಲ್ಲುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ, ಪರೀಕ್ಷೆ ಮಾಡಿ, ವರದಿ ನೀಡುವಂತೆ ತಿಳಿಸಿದ್ದಾರೆ.

‘ಆಂದೋಲನ’ ಪ್ರತಿನಿಧಿ ಮೂಲಕ ವಿಷಯ ತಿಳಿದ ತಕ್ಷಣ ನಾನು ಮತ್ತು ಸಿಬ್ಬಂದಿ ಹೋಗಿ ಗ್ರಾನೈಟ್ ಕಲ್ಲುಗಳನ್ನು ತುಂಬಿಕೊಂಡಿದ್ದ ವಾಹನ ಮತ್ತು ಅದಕ್ಕೆ ಬಳಸುತ್ತಿದ್ದ ಜೆಸಿಬಿಯನ್ನು ವಶಪಡಿಸಿಕೊಂಡಿದ್ದೇವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಚಂದ್ರಹಾಸ, ಎಸ್‌ಐ, ಅಂತರಸಂತೆ

ತಾಲ್ಲೂಕಿನಲ್ಲಿ ಯಾವುದೇ ಗಣಿಗಾರಿಕೆ ಮತ್ತು ಅಕ್ರಮಗಳು ನಡೆಯಲು ಬಿಡುವುದಿಲ್ಲ. ಪೊಲೀಸರು ವಶಪಡಿಸಿಕೊಂಡಿರುವ ಗಣಿಗಾರಿಕೆ ಕಲ್ಲುಗಳ ಬಗ್ಗೆ ಪರಿಶೀಲಿಸಿ ನಮ್ಮ ಇಲಾಖೆಯಿಂದಲೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

-ಶ್ರೀನಿವಾಸ್, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

6 mins ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

24 mins ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

1 hour ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

1 hour ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

1 hour ago

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

2 hours ago