Andolana originals

ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ವಶ

‘ಆಂದೋಲನ’ ಪ್ರತಿನಿಧಿ ನೀಡಿದ ಮಾಹಿತಿ ಮೇರೆಗೆ ಪೊಲೀಸರಿಂದ ಕಾರ್ಯಾಚರಣೆ
ಮಂಜು ಕೋಟೆ

ಎಚ್.ಡಿ.ಕೋಟೆ: ಅಕ್ರಮವಾಗಿ ಶೇಖರಣೆ ಮಾಡಿ ಸಾಗಣೆ ಮಾಡಲು ಮುಂದಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಇಟ್ನಾ ಹುಲಿಕುರ, ಹುನಗನಹಳ್ಳಿ, ಮನುಗನಹಳ್ಳಿ, ಲಂಕೆ, ಬೆಳತೂರು, ಸವೆ ಇನ್ನಿತರ ಗ್ರಾಮಗಳ ವ್ಯಾಪ್ತಿಯಲ್ಲಿರುವ ಸಾಮಾಜಿಕ ಅರಣ್ಯ ಪ್ರದೇಶದ ಬೆಟ್ಟದಲ್ಲಿರುವ ಬೆಲೆ ಬಾಳುವ ಕಲ್ಲುಗಳನ್ನು ಕೆಲವರು ಅಕ್ರಮವಾಗಿ ಸಂಗ್ರಹಿಸಿ ರಾತ್ರೋರಾತ್ರಿ ಲಾರಿಗಳ ಮೂಲಕ ತಮಿಳುನಾಡು, ರಾಜಸ್ಥಾನ, ಕೇರಳ ರಾಜ್ಯ ಗಳಿಗೆ ಸಾಗಿಸುತ್ತಿದ್ದು, ಈ ದಂಧೆಗೆ ಕಡಿವಾಣ ಹಾಕಲು ಹತ್ತು ವರ್ಷಗಳ ಹಿಂದೆಯೇ ಅಂದಿನ ಜಿಲ್ಲಾಧಿಕಾರಿಗಳು, ತಹಸಿಲ್ದಾರ್, ಎಸ್‌ಪಿ, ಸರ್ಕಲ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ, ಮತ್ತೆ ಗಣಿಗಾರಿಕೆ ಕೆಲವು ತಿಂಗಳಿನಿಂದ ಗೌಪ್ಯವಾಗಿ ನಡೆಯುತ್ತಿರುವುದು ಕಂಡುಬಂದಿದೆ.

ಕಬಿನಿ ಜಲಾಶಯದ ಬಳಿ ಇರುವ ಗಣೇಶ್‌ ಗುಡಿ ಗ್ರಾಮದಲ್ಲಿನ ತಾರಕ ನಾಲೆ ಸಮೀಪದ ದೀಪಕ್ ಎಂಬುವರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹಲವು ಗ್ರಾಮಗಳ ವ್ಯಾಪ್ತಿಯಿಂದ ಅಕ್ರಮವಾಗಿ ಗ್ರಾನೈಟ್ ಗಣಿಗಾರಿಕೆಯ ಕಲ್ಲುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಶೇಖರಣೆ ಮಾಡಿ, ಶನಿವಾರ ರಾತ್ರಿ ಜೆಸಿಬಿ ಮೂಲಕ ಟಿಪ್ಪರ್‌ಗೆ ತುಂಬಿಸಿಕೊಂಡು ಹೊರ ರಾಜ್ಯಕ್ಕೆ ಕಳಿಸುತ್ತಿದ್ದ ವಿಚಾರ ತಿಳಿದ ‘ಆಂದೋಲನ’ ಪ್ರತಿನಿಧಿ ತಕ್ಷಣ ಅಂತರಸಂತೆ ಸಬ್ ಇನ್‌ಸ್ಪೆಕ್ಟರ್ ಚಂದ್ರಹಾಸ್ ಅವರಿಗೆ ತಿಳಿಸಿದರು. ತಕ್ಷಣ ಚಂದ್ರಹಾಸ್ ಮತ್ತು ಗೋಪಾಲ್‌, ಇನ್ನಿತರ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಟಿಪ್ಪರ್ ಮತ್ತು ಗಣಿಗಾರಿಕೆಯ ಗ್ರಾನೈಟ್ ಕಲ್ಲು, ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ಕಲ್ಲುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ, ಪರೀಕ್ಷೆ ಮಾಡಿ, ವರದಿ ನೀಡುವಂತೆ ತಿಳಿಸಿದ್ದಾರೆ.

‘ಆಂದೋಲನ’ ಪ್ರತಿನಿಧಿ ಮೂಲಕ ವಿಷಯ ತಿಳಿದ ತಕ್ಷಣ ನಾನು ಮತ್ತು ಸಿಬ್ಬಂದಿ ಹೋಗಿ ಗ್ರಾನೈಟ್ ಕಲ್ಲುಗಳನ್ನು ತುಂಬಿಕೊಂಡಿದ್ದ ವಾಹನ ಮತ್ತು ಅದಕ್ಕೆ ಬಳಸುತ್ತಿದ್ದ ಜೆಸಿಬಿಯನ್ನು ವಶಪಡಿಸಿಕೊಂಡಿದ್ದೇವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಚಂದ್ರಹಾಸ, ಎಸ್‌ಐ, ಅಂತರಸಂತೆ

ತಾಲ್ಲೂಕಿನಲ್ಲಿ ಯಾವುದೇ ಗಣಿಗಾರಿಕೆ ಮತ್ತು ಅಕ್ರಮಗಳು ನಡೆಯಲು ಬಿಡುವುದಿಲ್ಲ. ಪೊಲೀಸರು ವಶಪಡಿಸಿಕೊಂಡಿರುವ ಗಣಿಗಾರಿಕೆ ಕಲ್ಲುಗಳ ಬಗ್ಗೆ ಪರಿಶೀಲಿಸಿ ನಮ್ಮ ಇಲಾಖೆಯಿಂದಲೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

-ಶ್ರೀನಿವಾಸ್, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

24 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

25 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

27 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

28 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

33 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

39 mins ago