Andolana originals

ನೆಲದಾಳದ ನೀರು ಕೃತಿ ಲೋಕಾರ್ಪಣೆ

ನೀರಿನ ಬಾಂಧವ್ಯ, ಅನುಭವನ್ನು ಬಟ್ಟಿ ಇಳಿಸಿರುವ ಶ್ರೀಧರ್‌ ಹೆಗಡೆ

ಶ್ರೀಧರ್‌ ಭಟ್
ನಂಜನಗೂಡು: ತಮ್ಮ ೩೫ ವರ್ಷಗಳ ಜಲದಾಳದ ನೀರಿನ ಅನುಭವವದ ಅರಿವನ್ನು ಪುಸ್ತಕ ರೂಪದಲ್ಲಿ ಬಟ್ಟಿ ಇಳಿಸಿ ಹೊರತಂದಿರುವವರು ಮೈಸೂರು ನಗರದ ನಿವಾಸಿ ಶ್ರೀಧರ್ ಹಗಡೆಯವರು. ‌

ಸ್ವತಃ ಭೂಗರ್ಭ ಶಾಸದಲ್ಲಿ ಶ್ರೀಧರ್ ಎಂ. ಎಸ್ಸಿ. ಮುಗಿಸಿ, ಓದುತ್ತಿದ್ದಾಗಲೇ ತಮ್ಮ ಅಧ್ಯಯನಕ್ಕಾಗಿ ಚಿನ್ನದ ಪದಕಗಳನ್ನು ಬಾಚಿಕೊಂಡಿದ್ದ ಶ್ರೀಧರ ಹೆಗಡೆಯವರು, ಈಗ ತಮ್ಮ ಸುದೀರ್ಘ ಜೀವನದ ನೀರಿನ ಸೆಲೆಗಳ ಮಹತ್ವವನ್ನು ತಮ್ಮ ‘ನೆಲದಾಳದ ನೀರು’ ಕೃತಿಯಲ್ಲಿ ತೆರದಿಟ್ಟಿದ್ದಾರೆ.

ಧಾರವಾಡ ವಿವಿಯಲ್ಲಿ ಭೂಗರ್ಭ ಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿ ಗಳಿಸಿದ ಇವರು, ತಮ್ಮ ವೈಯಕ್ತಿಕ ಸಾಮರ್ಥ್ಯದಿಂದ ಕೇಂದ್ರೀಯ ಅಂತರ್ಜಲ ಮಂಡಳಿಯ ಅಧಿಕಾರಿಯಾಗಿ ೩೫ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಈಗ ನಿವೃತ್ತರಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನೆಲೆಸಿದ್ದಾರೆ.

ತಮ್ಮ ವೃತ್ತಿ ಜೀವನದಲ್ಲಿ ತಾವು ಕಂಡ ತಮ್ಮ ನೀರಿನ ಬಾಂಧವ್ಯ, ಅನುಭವವನ್ನು ‘ನೆಲದಾಳದ ನೀರು’ ಕೃತಿಯ ಮೂಲಕ ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯ ಮಾಡಿದ್ದಾರೆ. ಅಂತರ್ಜಲ ಕ್ಷೀಣಿಸುತ್ತಿರುವ ಈ ಕಾಲದಲ್ಲಿ ಕೃಷಿ ನೀರಿಗಾಗಿ ೮೦೦ ಅಡಿಯಿಂದ ಸಾವಿರಾರು ಅಡಿಗಳವರೆಗೆ ಭೂಮಿಯನ್ನು ಕೊರೆದರೂ ನೀರು ಸಿಗುತ್ತದೆ ಎಂಬ ಭರವಸೆ ಇಲ್ಲದ ಈ ಪರಿಸ್ಥಿತಿಯಲ್ಲಿ ಈ ನೆಲದಾಳದ ನೀರು ಕೃತಿ ಕೃಷಿಕರಿಗೆ ಅತ್ಯಂತ
ವರದಾನವಾಗಿದೆ ಎಂದೇ ಹೇಳಬಹುದಾಗಿದೆ.

ಅಧುನಿಕ ವಿಜ್ಞಾನದ ಅನುಭವಕ್ಕೆ ಸಮನಾಗಿ ಭಾರತೀಯ ಪುರಾತನವಾದ ಜಲಸಂಸ್ಕೃತಿಯ ಬೇರುಗಳ ಅನುಭವವನ್ನು ದಾಖಲೆ ರೂಪದಲ್ಲಿ ಈ ಪುಸ್ತಕದಲ್ಲಿ ಹಿಡಿದಿಟ್ಟಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬಿದ್ರಕಾನು ಎಂಬ ಪುಟ್ಟಹಳ್ಳಿಯ ಕೃಷಿ ಮನೆತನದ ಶ್ರೀಧರ ಹೆಗಡೆಯವರ ಶ್ರಮ ಸಾರ್ತಕವಾಗಿದೆ.

ನಗರಗಳಲ್ಲಿ ಜನದಟ್ಟಣೆ ಹೆಚ್ಚಾದಂತೆ ಅಂತರ್ಜಲದ ಸಮತೋಲನಾ ವ್ಯತ್ಯಾಸವಾಗಿ ಅದರಿಂದ ಆಗಬಹುದಾದ ಅನಾಹುತಗಳು ನಾಯಿ ಕೊಡೆಗಳಂತೆ ನಿರ್ಮಾಣವಾಗುತ್ತಿರುವ ಕೊಳವೆ ಬಾವಿಗಳು, ಇದನ್ನು ತಪ್ಪಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅತ್ಯಂತ ನಿಖರವಾಗಿ ಭೂಗರ್ಭದಲ್ಲಿ ನೀರಿಗಾಗಿ ಲಭ್ಯವಿರುವ ಮಾರ್ಗಸೂಚಿಯನ್ನು ತಮ್ಮ ಕೃತಿಯಲ್ಲಿ ಅಡಕಗೊಳಿಸಿರುವುದು ಈ ಕೃತಿಯ ಗಟ್ಟಿತನಕ್ಕೆ ಸಾಕ್ಷಿಯಾಗಿದೆ.

ನೀರಿನ ಅನಿವಾರ್ಯತೆ ಹಾಗೂ ಅದರ ಮಿತಬಳಕೆ, ಉಪಯೋಗವಾದ ನೀರಿನ ಪುನರ್ ಬಳಕೆಗಳ ಕುರಿತಂತೆ ಸ್ಪಷ್ಟ ಸಂದೇಶವೂ ಈ ಕೃತಿಯಲ್ಲಿ ಅಡಕವಾಗಿದೆ. ಭಾರತದ ಅತ್ಯಂತ ಪ್ರಾಚೀನ ಗ್ರಂಥಗಳಾದ ವರಹಾ ಮಿಹಿರಾಚಾರ್ಯರ ಅಂತರ್ಜಲ ಶೋಧನಾ ಮಾಹಿತಿಗಳನ್ನು ಸ್ಪಷ್ಟವಾಗಿ ಕನ್ನಡದಲ್ಲಿ ಉಲ್ಲೇಖಿಸಿದ್ದರಿಂದ ಅಂತರ್ಜಲದ ಹುಡುಕಾಟಲ್ಲಿರುವವರಿಗೆ, ಕೊಳವೆ ಬಾವಿ ತೊಡಿಸುವವರಿಗೆ ಈ ಪುಸ್ತಕ ಆ ಬಗೆಗಿನ ಮಾಹಿತಿಯ ಕಣಜವಾಗಿದೆ.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

6 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

7 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

7 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

7 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

8 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

8 hours ago