ಓದುಗರ ಪತ್ರ
ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ ಚೌಧರಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಇದೊಂದು ಸ್ವಾಗತಾರ್ಹ ಬೆಳವಣಿಗೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಮುಂದಿನ ತಿಂಗಳು ಸೆಪ್ಟೆಂಬರ್ ೯ ರಂದು, ಜಿಎಸ್ಟಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆದರೆ, ಈಗ ಪಾಲಿಸಿಯನ್ನು ತೆಗೆದುಕೊಳ್ಳುವ ಗ್ರಾಹಕರು ಹಾಲಿ ಇರುವ ಜಿಎಸ್ಟಿಯನ್ನು ಪಾವತಿಸಲೇ ಬೇಕು, ಕೆಲವು ಗ್ರಾಹಕರು ಸೆಪ್ಟೆಂಬರ್ ೯ ರ ವರೆಗೆ ಕಾದು ನೋಡಿ ನಂತರ ಪಾಲಿಸಿ ತೆಗೆದುಕೊಳ್ಳಲು ಬಯಸುತ್ತಾರೆ. ಇದರಿಂದಾಗಿ ವಿಮಾ ಕಂಪೆನಿಗಳ ಹೊಸ ವ್ಯವಹಾರವು ಕುಂಠಿತವಾಗುವ ಸಾಧ್ಯತೆ ಇರುತ್ತದೆ, ಆದ್ದರಿಂದ ಆಗಸ್ಟ್ ೨೦(೨೦೨೫) ರಿಂದ ತೆಗೆದುಕೊಳ್ಳುವ ಪಾಲಿಸಿಗಳಿಗೆ ಜಿಎಸ್ಟಿ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳ ಬೇಕಾಗುತ್ತದೆ, ಜಿಎಸ್ಟಿ ಗೊಂದಲದ ಬಗ್ಗೆ ಕೇಂದ್ರ ಸರ್ಕಾರ ಶೀಘ್ರವಾಗಿ ಕ್ರಮ ಕೈಗೊಳ್ಳಲಿ.
– ಬೂಕನಕೆರೆ ವಿಜೇಂದ್ರ , ಕುವೆಂಪು ನಗರ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…