ಓದುಗರ ಪತ್ರ
ತಮ್ಮ ಪಕ್ಷ ಬಿಹಾರದಲ್ಲಿ ಪುನಃ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ೧೨೫ ಯೂನಿಟ್ ವಿದ್ಯುತ್ನ್ನು ಉಚಿತವಾಗಿ ನೀಡುವ ಭರವಸೆಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ.
ಅವರು ಈಗಾಗಲೇ ಮಹಿಳೆಯರಿಗೆ ೧,೧೦೦ ರೂ. ಮಾಸಿಕ ಪಿಂಚಣಿ ನೀಡುವುದಾಗಿ ಹೇಳಿದ್ದು, ಚುನಾವಣೆ ಮುಗಿಯುವ ಹೊತ್ತಿಗೆ ಇನ್ನೆಷ್ಟು ‘ಉಚಿತ’ಗಳ ಭರವಸೆ ನೀಡುವರೋ ಕಾದು ನೋಡಬೇಕಿದೆ. ಈ ‘ಉಚಿತ’ಗಳು ಸರಿಯೋ ತಪ್ಪೋ ಎನ್ನುವುದು ಬೇರೆ ವಿಚಾರ. ದಿನದ ೨೪ ಗಂಟೆಗಳ ಕಾಲವೂ ಜನರು ಸರ್ಕಾರಕ್ಕೆ ಒಂದಿಲ್ಲೊಂದು ತೆರಿಗೆಯನ್ನು ನೀಡುತ್ತಿದ್ದು, ಈ ರೀತಿ ನೀಡಿದ್ದರಲ್ಲಿ ಸ್ವಲ್ಪವಾಪಸ್ ಬಂದರೆ ತಪ್ಪೇನೂ ಇಲ್ಲ ಎನ್ನುವ ಮಾತೂ ಕೇಳಿ ಬರುತ್ತಿದೆ. ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರ ಗ್ಯಾರಂಟಿಗಳನ್ನು ಅಕ್ಷಮ್ಯ ಅಪರಾಧವೆಂದು ಬೊಬ್ಬೆ ಹೊಡೆದವರೇ ಚುನಾವಣೆ ಗೆಲ್ಲಲು ‘ಉಚಿತ’ ಯೋಜನೆಗಳನ್ನು ಘೋಷಿಸುತ್ತಿರುವುದನ್ನು ನೋಡಿದರೆ ರಾಜಕೀಯದಲ್ಲಿ ತಾನು ಮಾಡಿದರೆ ಸರಿ, ಅದನ್ನೆ ಇನ್ನೊಬ್ಬ ಮಾಡಿದರೆ ತಪ್ಪು ಎನ್ನುವ ಅಲಿಖಿತ ನಿಯಮ ಇನ್ನೊಮ್ಮೆ ಚರ್ಚೆಗೆ ಬಂದಂತೆ ಕಾಣುತ್ತದೆ.
-ರಮಾನಂದ ಶರ್ಮಾ, ಬೆಂಗಳೂರು
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…