Andolana originals

ಓದುಗರ ಪತ್ರ:  ಗ್ಯಾರಂಟಿಗಳು ಈಗ ಅಪರಾಧವಲ್ಲ

ತಮ್ಮ ಪಕ್ಷ ಬಿಹಾರದಲ್ಲಿ ಪುನಃ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ೧೨೫ ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ನೀಡುವ ಭರವಸೆಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ.

ಅವರು ಈಗಾಗಲೇ ಮಹಿಳೆಯರಿಗೆ ೧,೧೦೦ ರೂ. ಮಾಸಿಕ ಪಿಂಚಣಿ ನೀಡುವುದಾಗಿ ಹೇಳಿದ್ದು, ಚುನಾವಣೆ ಮುಗಿಯುವ ಹೊತ್ತಿಗೆ ಇನ್ನೆಷ್ಟು ‘ಉಚಿತ’ಗಳ ಭರವಸೆ ನೀಡುವರೋ ಕಾದು ನೋಡಬೇಕಿದೆ. ಈ ‘ಉಚಿತ’ಗಳು ಸರಿಯೋ ತಪ್ಪೋ ಎನ್ನುವುದು ಬೇರೆ ವಿಚಾರ. ದಿನದ ೨೪ ಗಂಟೆಗಳ ಕಾಲವೂ ಜನರು ಸರ್ಕಾರಕ್ಕೆ ಒಂದಿಲ್ಲೊಂದು ತೆರಿಗೆಯನ್ನು ನೀಡುತ್ತಿದ್ದು, ಈ ರೀತಿ ನೀಡಿದ್ದರಲ್ಲಿ ಸ್ವಲ್ಪವಾಪಸ್ ಬಂದರೆ ತಪ್ಪೇನೂ ಇಲ್ಲ ಎನ್ನುವ ಮಾತೂ ಕೇಳಿ ಬರುತ್ತಿದೆ. ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರ ಗ್ಯಾರಂಟಿಗಳನ್ನು ಅಕ್ಷಮ್ಯ ಅಪರಾಧವೆಂದು ಬೊಬ್ಬೆ ಹೊಡೆದವರೇ ಚುನಾವಣೆ ಗೆಲ್ಲಲು ‘ಉಚಿತ’ ಯೋಜನೆಗಳನ್ನು ಘೋಷಿಸುತ್ತಿರುವುದನ್ನು ನೋಡಿದರೆ ರಾಜಕೀಯದಲ್ಲಿ ತಾನು ಮಾಡಿದರೆ ಸರಿ, ಅದನ್ನೆ ಇನ್ನೊಬ್ಬ ಮಾಡಿದರೆ ತಪ್ಪು ಎನ್ನುವ ಅಲಿಖಿತ ನಿಯಮ ಇನ್ನೊಮ್ಮೆ ಚರ್ಚೆಗೆ ಬಂದಂತೆ ಕಾಣುತ್ತದೆ.

-ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

6 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

26 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

42 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago