ಓದುಗರ ಪತ್ರ
ತಮ್ಮ ಪಕ್ಷ ಬಿಹಾರದಲ್ಲಿ ಪುನಃ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ೧೨೫ ಯೂನಿಟ್ ವಿದ್ಯುತ್ನ್ನು ಉಚಿತವಾಗಿ ನೀಡುವ ಭರವಸೆಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ.
ಅವರು ಈಗಾಗಲೇ ಮಹಿಳೆಯರಿಗೆ ೧,೧೦೦ ರೂ. ಮಾಸಿಕ ಪಿಂಚಣಿ ನೀಡುವುದಾಗಿ ಹೇಳಿದ್ದು, ಚುನಾವಣೆ ಮುಗಿಯುವ ಹೊತ್ತಿಗೆ ಇನ್ನೆಷ್ಟು ‘ಉಚಿತ’ಗಳ ಭರವಸೆ ನೀಡುವರೋ ಕಾದು ನೋಡಬೇಕಿದೆ. ಈ ‘ಉಚಿತ’ಗಳು ಸರಿಯೋ ತಪ್ಪೋ ಎನ್ನುವುದು ಬೇರೆ ವಿಚಾರ. ದಿನದ ೨೪ ಗಂಟೆಗಳ ಕಾಲವೂ ಜನರು ಸರ್ಕಾರಕ್ಕೆ ಒಂದಿಲ್ಲೊಂದು ತೆರಿಗೆಯನ್ನು ನೀಡುತ್ತಿದ್ದು, ಈ ರೀತಿ ನೀಡಿದ್ದರಲ್ಲಿ ಸ್ವಲ್ಪವಾಪಸ್ ಬಂದರೆ ತಪ್ಪೇನೂ ಇಲ್ಲ ಎನ್ನುವ ಮಾತೂ ಕೇಳಿ ಬರುತ್ತಿದೆ. ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರ ಗ್ಯಾರಂಟಿಗಳನ್ನು ಅಕ್ಷಮ್ಯ ಅಪರಾಧವೆಂದು ಬೊಬ್ಬೆ ಹೊಡೆದವರೇ ಚುನಾವಣೆ ಗೆಲ್ಲಲು ‘ಉಚಿತ’ ಯೋಜನೆಗಳನ್ನು ಘೋಷಿಸುತ್ತಿರುವುದನ್ನು ನೋಡಿದರೆ ರಾಜಕೀಯದಲ್ಲಿ ತಾನು ಮಾಡಿದರೆ ಸರಿ, ಅದನ್ನೆ ಇನ್ನೊಬ್ಬ ಮಾಡಿದರೆ ತಪ್ಪು ಎನ್ನುವ ಅಲಿಖಿತ ನಿಯಮ ಇನ್ನೊಮ್ಮೆ ಚರ್ಚೆಗೆ ಬಂದಂತೆ ಕಾಣುತ್ತದೆ.
-ರಮಾನಂದ ಶರ್ಮಾ, ಬೆಂಗಳೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…