Andolana originals

ಗಬ್ಬು ನಾರುತ್ತಿದೆ ಗುಂಡ್ಲುಪೇಟೆ ಎಪಿಎಂಸಿ

ಮಹೇಂದ್ರ ಹಸಗೂಲಿ

ಚರಂಡಿ ತುಂಬಾ ಕಸದ ರಾಶಿ, ಅನೈರ್ಮಲ್ಯ; ಸಾರ್ವಜನಿಕರ ಆಕ್ರೋಶ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಇರುವ ಚರಂಡಿ ತುಂಬಾ ಕಸದ ರಾಶಿ, ಕೊಳೆತ ತರಕಾರಿಗಳು ಹಾಗೂ ತ್ಯಾಜ್ಯಗಳು ತುಂಬಿದ್ದು, ರಸ್ತೆಯ ಬದಿಯಲ್ಲಿ ಕೊಳೆತ ಟೊಮೊಟೊ, ಕಸ, ತ್ಯಾಜ್ಯಗಳ ರಾಶಿ ರಾರಾಜಿಸುತ್ತಿದ್ದರೂ ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದ ಹೊರವಲಯದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ತಾಲ್ಲೂಕಿನ ಎಲ್ಲಾ ಗ್ರಾಮಗಳಿಂದ ರೈತರು ತರಕಾರಿ ಮಾರಾಟ ಮಾಡಲು ಬರುತ್ತಾರೆ. ಅಲ್ಲದೇ ನಂಜನ ಗೂಡು, ಎಚ್.ಡಿ. ಕೋಟೆ ತಾಲ್ಲೂಕಿನಿಂದಲೂ ಗುಂಡ್ಲುಪೇಟೆ ಮಾರುಕಟ್ಟೆಗೆ ತರಕಾರಿ ಬರುತ್ತದೆ.

ಪ್ರತಿನಿತ್ಯ ಹೆಚ್ಚು ವಹಿವಾಟು ನಡೆಯುವ ಮಾರುಕಟ್ಟೆ ಇದಾಗಿದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಮಾರುಕಟ್ಟೆಯಲ್ಲಿ ರಸ್ತೆಗಳೆಲ್ಲ ಗುಂಡಿಬಿದ್ದು ಸಂಚರಿಸಲಾಗದ ಸ್ಥಿತಿ ಉಂಟಾಗಿದೆ. ಚರಂಡಿಗಳು ಹೂಳು ತುಂಬಿಕೊಂಡು ಅನೈರ್ಮಲ್ಯ ಉಂಟಾಗುವ ಭೀತಿ ಎದುರಾಗಿದೆ. ಶುದ್ದ ಕುಡಿಯುವ ನೀರಿನ ಘಟಕವಿಲ್ಲ, ವಿಶ್ರಾಂತಿ ಗೃಹವಿಲ್ಲ, ಶೌಚಾಲಯವೂ ಇಲ್ಲ. ಇದರಿಂದ ಇಲ್ಲಿಗೆ ಬರುವವರಿಗೆ ಬಹಳ ತೊಂದರೆಯಾಗಿದೆ.ಆದರೆ, ಈ ಬಗ್ಗೆ ಎಪಿಯಂಸಿ ಆಡಳಿತ ಮಂಡಳಿ ಗಮನಹರಿಸುತ್ತಿಲ್ಲ ಎನ್ನುವುದು ಕೇಳಿಬರುತ್ತಿರುವ ಆರೋಪ.

ತರಕಾರಿ ಖರೀದಿಸಲು ಪಕ್ಕದ ತಮಿಳುನಾಡು, ಕೇರಳದಿಂದ ಎಪಿಎಂಸಿಮಾರುಕಟ್ಟೆಗೆ ಬರುವ ವ್ಯಾಪಾರಿಗಳು ಇಲ್ಲಿನ ಅಶುಚಿತ್ವ ನೋಡಿ ಅಪಹಾಸ್ಯ ಮಾಡುವ ಪರಿಸ್ಥಿತಿ ಎದುರಾಗಿದೆ. ಆದಷ್ಟು ಬೇಗ ಎಪಿಎಂಸಿ ಆಡಳಿತ ಮಂಡಳಿ ಎಪಿಎಂಸಿ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

” ಎಪಿಎಂಸಿ ತುಂಬಾ ಅಶುಚಿತ್ವ ತಾಂಡವವಾಡುತ್ತಿದೆ. ಕೆಲವರು ತ್ಯಾಜ್ಯವನ್ನು ಪಕ್ಕದ ಖಾಸಗಿ ಜಾಗಕ್ಕೆ ಹಾಕುವುದರಿಂದ ದುರ್ವಾಸನೆ ಬರುವುದಲ್ಲದೆ ಸುತ್ತಮುತ್ತಲಿನ ಪ್ರದೇಶವೂ ಅನೈರ್ಮಲ್ಯದಿಂದಕೂಡಿದೆ. ಹಾಗಾಗಿ ಶೀಘ್ರದಲ್ಲಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಎಪಿಎಂಸಿ ಆವರಣವನ್ನು ಅಭಿವೃದ್ಧಿಪಡಿಸಬೇಕು.”

-ವೆಂಕಟೇಶ್, ಪಟ್ಟಣ ನಿವಾಸಿ

” ಎಪಿಎಂಸಿ ಆವರಣದಲ್ಲಿ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛತೆಗೆ ಕ್ರಮಕೈಗೊಂಡಿದ್ದು, ಈಗಾಗಲೇ ಸ್ವಚ್ಛತಾ ಕೆಲಸ ಪ್ರಾರಂಭವಾಗಿದೆ. ಎಪಿಎಂಸಿ ರಸ್ತೆ ಅಭಿವೃದ್ಧಿ ಮಾಡಲು ನಮ್ಮ ಮುಖ್ಯ ಕಚೇರಿಗೆ ಪತ್ರ ಬರೆಯಲಾಗಿತ್ತು. ಅಂದಾಜು ಪಟ್ಟಿ ಸಲ್ಲಿಸಲು ಸೂಚಿಸಿದ್ದಾರೆ. ಕೆಲವೇ ದಿನಗಳಲ್ಲಿ ಈ ಕೆಲಸವೂ ಆಗುವ ನಿರೀಕ್ಷೆ ಇದೆ.”

-ಶ್ರೀಧರ್, ಕಾರ್ಯದರ್ಶಿ, ಎಪಿಎಂಸಿ

ಆಂದೋಲನ ಡೆಸ್ಕ್

Recent Posts

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

8 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

25 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

29 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

47 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

50 mins ago

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

2 hours ago