Andolana originals

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ

ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ 

ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿ ಕೊಂಡಿರುವುದರಿಂದ ಜನರ ಓಡಾಟಕ್ಕೆ ಸ್ಥಳವಿಲ್ಲದಂತಾಗಿದೆ. ರಸ್ತೆ ಬದಿಯ ಪಾದಚಾರಿ ಮಾರ್ಗ ಒತ್ತುವರಿಯಿಂದಾಗಿ ಜನರು ರಾಷ್ಟ್ರೀಯ ಹೆದ್ದಾರಿಯಲ್ಲೇ ಓಡಾಡಬೇಕಾಗಿದ್ದು, ವಾಹನ ಸವಾರರಿಗೂ ಕಿರಿಕಿರಿಯಾಗುತ್ತಿದೆ. ಅಲ್ಲದೆ ಹೆದ್ದಾರಿ ಬದಿಯ ಫುಟ್‌ಪಾತ್‌ಗಳಲ್ಲಿ ಫಾಸ್ಟ್‌ಫುಡ್ ವ್ಯಾಪಾರ, ವಾಹನಗಳ ನಿಲುಗಡೆ ಮಾಡಲಾಗುತ್ತಿದೆ.

ಪಟ್ಟಣದ ಪುರಸಭೆ ಕಚೇರಿ ಬಳಿಯೇ ಫುಟ್‌ಪಾತ್ ಒತ್ತುವರಿ ಮತ್ತು ವಿರೂಪಗೊಳಿಸಿದ್ದು, ಪುರಸಭೆ ಮುಖ್ಯಾಧಿಕಾರಿ ಕಣ್ಣುಮುಚ್ಚಿ ಕುಳಿತಿದ್ದಾರೆ. ಫುಟ್‌ಪಾತ್ ಹಾಗೂ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ಸ್ಥಳಗಳನ್ನು ತೆರವು ಮಾಡಬೇಕು. ಸುರಭಿ ಹೋಟೆಲ್‌ನಿಂದ ಹೊಸ ಪ್ರವಾಸಿ ಮಂದಿರದವರೆಗೆ ಆಗಿರುವ ಒತ್ತುವರಿಯನ್ನು ತೆರವು ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೇರಳ ಮತ್ತಿತರ ರಾಜ್ಯಗಳಲ್ಲಿ ರಸ್ತೆಯ ಎರಡೂ ಇಕ್ಕೆಲಗಳಲ್ಲಿ ರೈಲಿಂಗ್ಸ್ ಅಳವಡಿಸಿದ್ದು, ಸುಸಜ್ಜಿತ ಪಾದಚಾರಿ ಮಾರ್ಗ ಗಳನ್ನು ನಿರ್ಮಿಸಲಾಗಿರುತ್ತದೆ. ಅದೇ ರೀತಿಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

” ರಾಷ್ಟ್ರೀಯ ಹೆದ್ದಾರಿ ಬದಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವ ಎಲ್ಲ ಅಂಗಡಿ, ಹೋಟೆಲ್ ಮಾಲೀಕರೂ ಎರಡು ವಾರಗಳಲ್ಲಿ ತೆರವು ಮಾಡದಿದ್ದರೆ, ಹೆದ್ದಾರಿ ಬದಿ ರೈಲಿಂಗ್ಸ್ ಅಳವಡಿಸುವ ಕಾಮಗಾರಿ ನಡೆಯಲಿದ್ದು, ಪುರಸಭೆಯಿಂದ ತೆರವು ಮಾಡಲಾಗುತ್ತದೆ. ಹೆದ್ದಾರಿ ಬದಿ ಮಾರ್ಗ ವಿರೂಪಗೊಳಿಸಬಾರದು ಎಂದು ಈಗಾಗಲೇ ತಿಳಿಸಲಾಗಿದೆ.”

ಸರವಣ, ಪುರಸಭೆ ಮುಖ್ಯಾಧಿಕಾರಿ

” ಗುಂಡ್ಲುಪೇಟೆ ಪಟ್ಟಣದಲ್ಲಿ ಹೇಳುವವರಿಲ್ಲ, ಕೇಳುವವರಿಲ್ಲ ಎಂಬಂತಾಗಿದೆ. ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬದಿ ಫುಟ್‌ಪಾತ್ ಒತ್ತುವರಿ ಮಾಡಿ, ವಿರೂಪಗೊಳಿಸಿದ್ದು ಪಾದಚಾರಿಗಳು ಓಡಾಡಲು ಜಾಗವಿಲ್ಲದಂತಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾದರೆ ಯಾರು ಹೊಣೆ?”

ಮುನೀರ್ ಪಾಷ, ಗಡಿನಾಡು ರಕ್ಷಣಾ ಸೇನೆ ಅಧ್ಯಕ್ಷ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago