Andolana originals

ಗುಂಡ್ಲುಪೇಟೆ: ವ್ಯಾಪಾರ ಕೇಂದ್ರವಾದ ಶಿಕ್ಷಕರ ಭವನ

ಮಹೇಂದ್ರ ಹಸಗೂಲಿ

ರಾಷ್ಟ್ರನಾಯಕರ ಭಾವಚಿತ್ರಗಳ ಕೆಳಗೆ ಚಪ್ಪಲಿಗಳ ರಾಶಿ; ಸಾರ್ವಜನಿಕರ ಆಕ್ರೋಶ 

ಗುಂಡ್ಲುಪೇಟೆ: ಪಟ್ಟಣದ ಗುರುಭವನವನ್ನು ಚಪ್ಪಲಿ ಮಾರಾಟ ಮಾಡಲು ಬಾಡಿಗೆಗೆ ನೀಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಶಿಕ್ಷಕರಿಗೆ ಸಂಬಂಧಿಸಿದ ಸಭೆ, ಸಮಾರಂಭ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ೫೦ ಲಕ್ಷ ರೂ. ವೆಚ್ಚದಲ್ಲಿ ಗುರುಭವನವನ್ನು ನಿರ್ಮಿಸಿದ್ದರು.

ಭವನದಲ್ಲಿ ಭುವನೇಶ್ವರಿ ತಾಯಿಯ ಪೂಜೆ ನಡೆದಿದೆ. ಸರ್ಕಾರಿ ಕಾರ್ಯಕ್ರಮಗಳು ಜರುಗಿವೆ. ಭವನದ ಗೋಡೆಗಳಲ್ಲಿ ರಾಷ್ಟ್ರೀಯ ನಾಯಕರಾದ ಗಾಂಧೀಜಿ, ಬಸವಣ್ಣ, ಅಂಬೇಡ್ಕರ್, ಸರ್ವಪಲ್ಲಿ ರಾಧಾಕೃಷ್ಣನ್, ಮಾಜಿ ಸಚಿವ ದಿ.ಎಚ್.ಎಸ್.ಮಹದೇವಪ್ರಸಾದ್, ಸೇರಿದಂತೆ ಅನೇಕ ಗಣ್ಯರ ಭಾವಚಿತ್ರಗಳಿವೆ.

ಇಂತಹ ಗಣ್ಯರ ಭಾವಚಿತ್ರಗಳ ಕೆಳಗೆ ಚಪ್ಪಲಿಗಳ ರಾಶಿ ಹಾಕಿಕೊಂಡು ಮಾರಾಟ ಮಾಡಲು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘ ಗುರುಭವನವನ್ನು ಬಾಡಿಗೆ ನೀಡಿರುವುದು ಸರಿಯಲ್ಲ ಎಂದು ಶಿಕ್ಷಕರು, ಸಾರ್ವಜನಿಕರ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಶಿಕ್ಷಕರ ಭವನ ಮೊದಲು ಸ್ಪರ್ಧಾತ್ಮಕ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ತರಬೇತಿ, ಶಿಕ್ಷಕರ ಕಾರ್ಯಾಗಾರ, ನಿವೃತ್ತ ಸಂಘದವರ ಸಭೆಗೆ, ಪ್ರಗತಿಪರ ಕನ್ನಡ ಪರ ಹೋರಾಟಗಾರರ ಸಭೆ ಸಮಾರಂಭಗಳಿಗೆ ಅನುಕೂಲವಾಗುತ್ತಿತ್ತು. ಆದರೆ ಚಪ್ಪಲಿ ಮಾರಾಟಕ್ಕೆ ಬಾಡಿಗೆ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಕೇಳಿಬಂದಿದೆ.

” ಶಿಕ್ಷಣ ಸಂಸ್ಥೆ, ಶಿಕ್ಷಕರು, ಸಾರ್ವಜನಿಕರ ಸಭೆ, ಸಮಾರಂಭಗಳಿಗೆ ಅನುಕೂಲವಾಗುವ ಭವನವನ್ನು ಚಪ್ಪಲಿ ಮಾರಾಟಕ್ಕೆಂದು ಬಾಡಿಗೆ ನೀಡಿರುವುದು ಬೇಸರದ ಸಂಗತಿ. ರಾಷ್ಟ್ರನಾಯಕರ ಭಾವಚಿತ್ರಗಳ ಕೆಳಗೆ ಚಪ್ಪಲಿ ಮಾರಾಟ ಮಾಡುವುದು ಸರಿಯಲ್ಲ”

 -ಅಬ್ದುಲ್ ಮಾಲೀಕ್, ಕರ್ನಾಟಕ ಕಾವಲುಪಡೆ ಅಧ್ಯಕ್ಷ 

” ಭವನದ ನಿರ್ವಹಣೆಗೆಂದು ಬಾಡಿಗೆಗೆ ನೀಡಲಾಗಿದೆ. ಕೆಲವು ದಿನಗಳಲ್ಲಿ ಬಾಡಿಗೆ ಕರಾರು ಮುಗಿಯಲಿದ್ದು ಕೂಡಲೇ ಅವರನ್ನು ಖಾಲಿ ಮಾಡಿಸಲಾಗುವುದು.”

 -ಟಿ.ಆರ್.ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

2 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

3 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

4 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

5 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

6 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

6 hours ago