ಮಹೇಂದ್ರ ಹಸಗೂಲಿ
ರಾಷ್ಟ್ರನಾಯಕರ ಭಾವಚಿತ್ರಗಳ ಕೆಳಗೆ ಚಪ್ಪಲಿಗಳ ರಾಶಿ; ಸಾರ್ವಜನಿಕರ ಆಕ್ರೋಶ
ಗುಂಡ್ಲುಪೇಟೆ: ಪಟ್ಟಣದ ಗುರುಭವನವನ್ನು ಚಪ್ಪಲಿ ಮಾರಾಟ ಮಾಡಲು ಬಾಡಿಗೆಗೆ ನೀಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಶಿಕ್ಷಕರಿಗೆ ಸಂಬಂಧಿಸಿದ ಸಭೆ, ಸಮಾರಂಭ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ೫೦ ಲಕ್ಷ ರೂ. ವೆಚ್ಚದಲ್ಲಿ ಗುರುಭವನವನ್ನು ನಿರ್ಮಿಸಿದ್ದರು.
ಭವನದಲ್ಲಿ ಭುವನೇಶ್ವರಿ ತಾಯಿಯ ಪೂಜೆ ನಡೆದಿದೆ. ಸರ್ಕಾರಿ ಕಾರ್ಯಕ್ರಮಗಳು ಜರುಗಿವೆ. ಭವನದ ಗೋಡೆಗಳಲ್ಲಿ ರಾಷ್ಟ್ರೀಯ ನಾಯಕರಾದ ಗಾಂಧೀಜಿ, ಬಸವಣ್ಣ, ಅಂಬೇಡ್ಕರ್, ಸರ್ವಪಲ್ಲಿ ರಾಧಾಕೃಷ್ಣನ್, ಮಾಜಿ ಸಚಿವ ದಿ.ಎಚ್.ಎಸ್.ಮಹದೇವಪ್ರಸಾದ್, ಸೇರಿದಂತೆ ಅನೇಕ ಗಣ್ಯರ ಭಾವಚಿತ್ರಗಳಿವೆ.
ಇಂತಹ ಗಣ್ಯರ ಭಾವಚಿತ್ರಗಳ ಕೆಳಗೆ ಚಪ್ಪಲಿಗಳ ರಾಶಿ ಹಾಕಿಕೊಂಡು ಮಾರಾಟ ಮಾಡಲು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘ ಗುರುಭವನವನ್ನು ಬಾಡಿಗೆ ನೀಡಿರುವುದು ಸರಿಯಲ್ಲ ಎಂದು ಶಿಕ್ಷಕರು, ಸಾರ್ವಜನಿಕರ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಶಿಕ್ಷಕರ ಭವನ ಮೊದಲು ಸ್ಪರ್ಧಾತ್ಮಕ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ತರಬೇತಿ, ಶಿಕ್ಷಕರ ಕಾರ್ಯಾಗಾರ, ನಿವೃತ್ತ ಸಂಘದವರ ಸಭೆಗೆ, ಪ್ರಗತಿಪರ ಕನ್ನಡ ಪರ ಹೋರಾಟಗಾರರ ಸಭೆ ಸಮಾರಂಭಗಳಿಗೆ ಅನುಕೂಲವಾಗುತ್ತಿತ್ತು. ಆದರೆ ಚಪ್ಪಲಿ ಮಾರಾಟಕ್ಕೆ ಬಾಡಿಗೆ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಕೇಳಿಬಂದಿದೆ.
” ಶಿಕ್ಷಣ ಸಂಸ್ಥೆ, ಶಿಕ್ಷಕರು, ಸಾರ್ವಜನಿಕರ ಸಭೆ, ಸಮಾರಂಭಗಳಿಗೆ ಅನುಕೂಲವಾಗುವ ಭವನವನ್ನು ಚಪ್ಪಲಿ ಮಾರಾಟಕ್ಕೆಂದು ಬಾಡಿಗೆ ನೀಡಿರುವುದು ಬೇಸರದ ಸಂಗತಿ. ರಾಷ್ಟ್ರನಾಯಕರ ಭಾವಚಿತ್ರಗಳ ಕೆಳಗೆ ಚಪ್ಪಲಿ ಮಾರಾಟ ಮಾಡುವುದು ಸರಿಯಲ್ಲ”
-ಅಬ್ದುಲ್ ಮಾಲೀಕ್, ಕರ್ನಾಟಕ ಕಾವಲುಪಡೆ ಅಧ್ಯಕ್ಷ
” ಭವನದ ನಿರ್ವಹಣೆಗೆಂದು ಬಾಡಿಗೆಗೆ ನೀಡಲಾಗಿದೆ. ಕೆಲವು ದಿನಗಳಲ್ಲಿ ಬಾಡಿಗೆ ಕರಾರು ಮುಗಿಯಲಿದ್ದು ಕೂಡಲೇ ಅವರನ್ನು ಖಾಲಿ ಮಾಡಿಸಲಾಗುವುದು.”
-ಟಿ.ಆರ್.ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…