Categories: Andolana originals

ಎಚ್.ಡಿ.ಕೋಟೆ: ಆಡಳಿತ ಭವನದಲ್ಲಿ ಕಸದ ರಾಶಿ

ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ

ಮಂಜು ಕೋಟಿ

ಎಚ್‌.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು ಕಾಣದಂತೆ ಇದ್ದಾರೆ.

ಪಟ್ಟಣದ ಆಡಳಿತ ಭವನದಲ್ಲಿರುವ ಸರ್ವೆ, ಆಹಾರ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಭೂ ಮಾಪನ ಶಾಖೆಯ ಅಧೀಕ್ಷಕರು, ತಾಂತ್ರಿಕ ವಿಭಾಗ, ಪೋಡಿ ಶಾಖೆ, ಅಭಿಲೇಖಾಲಯ ಮೋಜಣಿ ವಿಭಾಗದ ಬಳಿ ಇರುವ ಪುರುಷರ ಮತ್ತು ಮಹಿಳೆಯರ ಶೌಚಾಲಯದ ಪಕ್ಕದ ಖಾಲಿ ಜಾಗದಲ್ಲಿ ಕಸದ ರಾಶಿಯನ್ನು ಗುಡ್ಡೆ ಹಾಕಿದ್ದಾರೆ. ಅಲ್ಲದೆ ಈ ಶೌಚಾಲಯಗಳಲ್ಲಿ ನೀರು ಇಲ್ಲದೆ ದುರ್ವಾಸನೆ ಬೀರುತ್ತಿದೆ. ಭವನದ ಈ ಮಹಡಿಯಲ್ಲಿ ಕೆಲಸ ನಿರ್ವಹಿಸುವ ಕಚೇರಿಗಳು ಮತ್ತು ಶಾಖೆಗಳಿಗೆ ಪ್ರತಿನಿತ್ಯ ರೈತರು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ವೇಳೆ ಕಸದ ರಾಶಿ ಹಾಗೂ ಶೌಚಾಲಯದ ಅಶುಚಿತ್ವ ನೋಡಿ ಮುಜುಗರ ಪಡುವಂತಾಗಿದೆ. ಹೀಗಿದ್ದರೂ ಅಧಿಕಾರಿಗಳು ಮತ್ತು ನೌಕರರು ಇತ್ತ ಗಮನಹರಿಸಿ ಸ್ವಚ್ಛತಾ ಕಾರ್ಯ ಮಾಡಿಸಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು, ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. ಆದ್ದರಿಂದ ಶಾಸಕರು ಇತ್ತ ಗಮನಹರಿಸಿ ಆಡಳಿತ ಭವನದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

“ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಇಲಾಖೆಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿಬೇಕು. ಇದನ್ನು ನಿರ್ಲಕ್ಷಿಸುವವರಿಗೆ ನೋಟಿಸ್‌ ಜಾರಿ ಮಾಡಿ ಕ್ರಮ ಕೈಗೊಳ್ಳುತ್ತೇನೆ”

– ಶ್ರೀನಿವಾಸ್‌, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಭಾರತೀಯ ಸೇನೆಯಿಂದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಹೊಸ ವಿಡಿಯೋ ಬಿಡುಗಡೆ

ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…

35 mins ago

ದಳಪತಿ ವಿಜಯ್‌ ಅಭಿನಯದ ಜನನಾಯಗನ್‌ ಚಿತ್ರಕ್ಕೆ ಸುಪ್ರೀಂ ಬಿಗ್‌ಶಾಕ್‌

ಜನನಾಯಗನ್‌ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್‌ ಪ್ರೊಡಕ್ಷನ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದೆ. ಸೆನ್ಸಾರ್‌…

55 mins ago

ಪ್ರೀತಿ ಹೆಸರಿನಲ್ಲಿ ವಂಚನೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…

1 hour ago

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ…

1 hour ago

ವಿಧಾನಸಭೆ ಚುನಾವಣೆಗೆ ಪ್ರತಾಪ್‌ ಸಿಂಹ ಸ್ಪರ್ಧೆ ಫಿಕ್ಸ್‌

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌…

1 hour ago

ದಕ್ಷಿಣ ಒಳನಾಡಿನಲ್ಲಿ ತಗ್ಗಿದ ಚಳಿ ಅಬ್ಬರ: ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು…

1 hour ago